ಸುಳ್ಯ: ಸುಳ್ಯ ಹಳೆಗೇಟಿನ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ವತಿಯಿಂದ ಒಂದು ತಿಂಗಳ ಕಾಲ ನಡೆಯುವ ಶ್ರೀ ಕೇಶವ ಕೃಪಾ ವೇದ-ಯೋಗ-ಕಲಾ ಶಿಬಿರ ಏ.21ರಿಂದ ಮೇ.21ರವರೆಗೆ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಯೋಗದ ಜೊತೆಗೆ, ಕಲಾ ಪ್ರಕಾರಗಳಾದ ಯಕ್ಷಗಾನ, ಕಂಸಾಳೆ, ಜಾದೂ, ಭಜನೆ, ಸಂಗೀತ, ಪೇಪರ್ ಕಟ್ಟಿಂಗ್, ಮಿಮಿಕ್ರಿ ಮೊದಲಾದ ಸೃಜನಶೀಲ ಕಲೆಗಳನ್ನು ಶಿಬಿರಾರ್ಥಿಗಳಿಗೆ ಪರಿಚಯಿಸುವುದರೊಂದಿಗೆ ಹಿಂದೂ ಧರ್ಮದ ನಂಬಿಕೆಗಳು ಮತ್ತು ಆಚರಣೆಗಳ ಹಿಂದಿರುವ ವೈಜ್ಞಾನಿಕ ಕಾರಣಗಳು, ಭಗವದ್ಗೀತೆ, ಲಲಿತಾ ಸಹಸ್ರನಾಮ, ವಿಷ್ಣು ಸಹಸ್ರನಾಮ ಮುಂತಾದ ಶ್ಲೋಕಗಳನ್ನು ಸ್ಫುಟವಾಗಿ ಪಠಿಸುವ ಸಾಂಪ್ರದಾಯಿಕ ವಿಧಾನ, ಸುಭಾಷಿತಗಳು, ಆದರ್ಶ ದಿನಚರಿ ರೂಪಿಸಿಕೊಳ್ಳುವ ಬಗೆ, ನೈತಿಕ ಶಿಕ್ಷಣ, ಮಾನವೀಯ ಮೌಲ್ಯಗಳು ಮುಂತಾದ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದ ವಿಚಾರಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ಕಲಿಸಲಾಗುತ್ತದೆ. 30 ದಿನಗಳ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ಸಂಪೂರ್ಣ ಉಚಿತವಾಗಿ ನಡೆಯುವ ಹತ್ತೊಂಭತ್ತನೇ ವರ್ಷದ ವೇದ-ಯೋಗ-ಕಲಾ ಶಿಬಿರದಲ್ಲಿ ರಾಜ್ಯ ಹಾಗೂ ಹೊರರಾಜ್ಯದ ಆಯ್ಕೆಯಾದ 120 ಶಿಬಿರಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಅಶನ, ವಸನ, ವಸತಿ, ಪಠ್ಯಪುಸ್ತಕಗಳು, ವ್ಯಾಸಪೀಠ ಇತ್ಯಾದಿಗಳನ್ನು ನೀಡಲಾಗುವುದು ಎಂದರು.
ಉದ್ಘಾಟನಾ ಕಾರ್ಯಕ್ರಮ:
ಏ.21ರಂದು ಪೂ.10.30ಕ್ಕೆ ಶ್ರೀ ಕೇಶವಕಿರಣ ಛಾತ್ರಾ ನಿವಾಸ ನಿರ್ಮಾಣ ಸಮಿತಿಯ ಅಧ್ಯಕ್ಷ ಶಂಕರ ಭಟ್ ಕೆ. ಶಿಬಿರವನ್ನು ಉದ್ಘಾಟಿಸುವರು. ಶಿಕ್ಷಣ ಇಲಾಖೆಯ ರಾಜ್ಯ ಯೋಗ ಸಂಪನ್ಮೂಲ ವ್ಯಕ್ತಿ ಶ್ರೀ ಎಂ.ಎಸ್. ನಾಗರಾಜ ರಾವ್ ಸಭಾಧ್ಯಕ್ಷತೆಯನ್ನು ವಹಿಸಲಿದ್ದಾರೆ. ಸಾಗರದ ಗಜಾನನ ಸಂಸ್ಕೃತ ಪಾಠಶಾಲೆಯ ಉಪನ್ಯಾಸಕ ವಿದ್ವಾನ್ ಗಜಾನನ ಭಟ್ಟ ರೇವಣಕಟ್ಟ ದಿಕ್ಸೂಚಿ ಉಪನ್ಯಾಸ ಮಾಡಲಿದ್ದು, ನಿವೃತ್ತ ಶಿಕ್ಷಕಿ ಗಂಗಮ್ಮ ಕೋಲ್ಚಾರ್ ಮುಖ್ಯ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ. ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಭಟ್ ವಗೆನಾಡು ಉಪಸ್ಥಿತರಿರುವರು ಎಂದು ಅವರು ತಿಳಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಪ್ರತಿಷ್ಠಾನದ ವೇದ ಅಧ್ಯಾಪಕ ಸುದರ್ಶನ ಭಟ್ ಉಜಿರೆ, ಶಂಕರ ಭಟ್ ಪುತ್ತೂರು ಉಪಸ್ಥಿತರಿದ್ದರು.
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…
ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು…
ಬಾಲ್ಯದಲ್ಲಿ ಕಠೋರನಂತೆ ಕಾಣುವ ಅಪ್ಪನ ನಿಜವಾದ ಪ್ರೀತಿ ಮತ್ತು ತ್ಯಾಗ ನಮ್ಮ ಬದುಕಿನ…
ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…