Advertisement
ಸುದ್ದಿಗಳು

ಐವರ್ನಾಡಿನಲ್ಲಿ ಕಂದಾಯ ಅದಾಲತ್

Share

ಸುಳ್ಯ: ಸುಳ್ಯ ಹೋಬಳಿ ವ್ಯಾಪ್ತಿಗೆ ಒಳಪಡುವ ಗ್ರಾಮಗಳಿಗೆ ಸಂಬಂಧಪಟ್ಟಂತೆ ಕಂದಾಯ ಅದಾಲತ್ ಐವರ್ನಾಡು ಪ್ರಾ.ಕೃ.ಪ.ಸ.ಸಂಘದ ಸಭಾಭವನದಲ್ಲಿ ನಡೆಯಿತು. ಜಿ.ಪಂ.ಸದಸ್ಯ ಎಸ್.ಎನ್.ಮನ್ಮಥ ಮಾತನಾಡಿ, ಕಂದಾಯ ಇಲಾಖೆಗೆ ಸಂಬಂಧಿಸಿ ಇರುವ ಅನೇಕ ಸಮಸ್ಯೆಗಳಿಗೆ ಆದಾಲತ್ ಮೂಲಕ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಆಯೋಜನೆ ಮಾಡಲಾಗಿದೆ. ಪಹಣಿ ಮೊದಲಾಗಿ ಕಂದಾಯ ವಿಭಾಗಕ್ಕೆ ಸಂಬಂದಿಸಿ ಇರುವ ಲೋಪದೋಷಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಇದು ಪ್ರಯೋಜನಕಾರಿಯಾಗಲಿ ಎಂದರು.

ತಹಶೀಲ್ದಾರ್ ಅನಂತಶಂಕರ ಮಾತನಾಡಿ, ಖಾತೆ, ಆರ್‍ಆರ್‍ಟಿ, ಪಹಣಿಯಲ್ಲಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಆರು ವರ್ಷದ ಹಿಂದೆ ಸರಕಾರ ಕಂದಾಯ ಆದಾಲತ್ ಕಾರ್ಯಕ್ರಮ ಆರಂಭಿಸಿತ್ತು. ಆಡಳಿತ ವ್ಯವಸ್ಥೆ ಗ್ರಾಮಕ್ಕೆ ಬಂದು ಅಹವಾಲು ಸ್ವೀಕರಿಸಿ ಪರಿಹಾರ ಕಲ್ಪಿಸುವ ಪ್ರಯತ್ನ ಇದಾಗಿದೆ ಎಂದರು.

ಈ ಸಂದರ್ಭ ಐವರ್ನಾಡು ಗ್ರಾ.ಪಂ.ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ, ಉಪ ತಹಶೀಲ್ದಾರ್ ಚಂದ್ರಕಾಂತ್, ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ, ಪಿಡಿಓ ಯು.ಡಿ.ಶೇಖರ್ ಮೊದಲಾದವರು ಉಪಸ್ಥಿತರಿದ್ದರು. ಗ್ರಾಮಕರಣಿಕ ಕಾರ್ತಿಕ್ ಕೆ.ಎಸ್.ನಿರೂಪಿಸಿದರು. ಅನಾರೋಗ್ಯ ಪೀಡಿತರಾಗಿ ನಡೆಯಲಾಗದ ಸ್ಥಿತಿಯಲ್ಲಿರುವ ವ್ಯಕ್ತಿಗೆ 1998-99 ರಲ್ಲಿ ಅಕ್ರಮ ಸಕ್ರಮ ಮಂಜೂರಾತಿ ಆಗಿದ್ದು, ಸಿಟ್ಟಿಂಗ್ ಆಗಿದ್ದರೂ ಹಕ್ಕುಪತ್ರ ದೊರೆಯದಿರುವ ಬಗ್ಗೆ ಜಿ.ಪಂ.ಸದಸ್ಯ ಮನ್ಮಥ ಸಭೆಯಲ್ಲಿ ಪ್ರಸ್ತಾವಿಸಿದರು. ಸಮಸ್ಯೆ ಆಲಿಸಿ ಈ ಬಗ್ಗೆ ಪರಿಶೀಲಿಸುವಂತೆ ತಹಶೀಲ್ದಾರ್ ಗ್ರಾಮಕರಣಿಕರಿಗೆ ಸೂಚನೆ ನೀಡಿದರು.

ಐವರ್ನಾಡಿನಲ್ಲಿ ಸಬ್‍ಸ್ಟೇಷನ್ ನಿರ್ಮಾಣಕ್ಕೆ 2 ಎಕ್ರೆ ಸ್ಥಳ ಕಾದಿರಿಸುವಂತೆ ಗ್ರಾ.ಪಂ.ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ ಅವರು ತಹಶೀಲ್ದಾರ್ ಅವರ ಗಮನಕ್ಕೆ ತಂದರು. ಸೂಕ್ತ ಸ್ಥಳ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಹಶೀಲ್ದಾರ್ ಅವರು ಭರವಸೆ ನೀಡಿದರು. ಇದೇ ಸಂದರ್ಭ ಗ್ರಾಮಸ್ಥರು ವಿವಿಧ ಅಹವಾಲು ಸಲ್ಲಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು

ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…

6 hours ago

2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?

2026ರಲ್ಲಿ ಎಲ್‌ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್‌ನಿನೊ" ಆಗುವ…

15 hours ago

ಉತ್ತರ ಪ್ರದೇಶ ಸರ್ಕಾರದಿಂದ ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳು

ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…

16 hours ago

ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?

ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…

23 hours ago

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…

1 day ago

ಹಣ್ಣುಗಳಲ್ಲಿ ಕೀಟನಾಶಕ ಅವಶೇಷಗಳ ಭಯವೇ? ನೈಸರ್ಗಿಕವಾಗಿ ಸ್ವಚ್ಛಗೊಳಿಸುವ ಸರಳ ವಿಧಾನಗಳು

ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…

1 day ago