Advertisement
ಸುದ್ದಿಗಳು

ಐವರ್ನಾಡಿನಲ್ಲಿ ಕಂದಾಯ ಅದಾಲತ್

Share

ಸುಳ್ಯ: ಸುಳ್ಯ ಹೋಬಳಿ ವ್ಯಾಪ್ತಿಗೆ ಒಳಪಡುವ ಗ್ರಾಮಗಳಿಗೆ ಸಂಬಂಧಪಟ್ಟಂತೆ ಕಂದಾಯ ಅದಾಲತ್ ಐವರ್ನಾಡು ಪ್ರಾ.ಕೃ.ಪ.ಸ.ಸಂಘದ ಸಭಾಭವನದಲ್ಲಿ ನಡೆಯಿತು. ಜಿ.ಪಂ.ಸದಸ್ಯ ಎಸ್.ಎನ್.ಮನ್ಮಥ ಮಾತನಾಡಿ, ಕಂದಾಯ ಇಲಾಖೆಗೆ ಸಂಬಂಧಿಸಿ ಇರುವ ಅನೇಕ ಸಮಸ್ಯೆಗಳಿಗೆ ಆದಾಲತ್ ಮೂಲಕ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಆಯೋಜನೆ ಮಾಡಲಾಗಿದೆ. ಪಹಣಿ ಮೊದಲಾಗಿ ಕಂದಾಯ ವಿಭಾಗಕ್ಕೆ ಸಂಬಂದಿಸಿ ಇರುವ ಲೋಪದೋಷಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಇದು ಪ್ರಯೋಜನಕಾರಿಯಾಗಲಿ ಎಂದರು.

ತಹಶೀಲ್ದಾರ್ ಅನಂತಶಂಕರ ಮಾತನಾಡಿ, ಖಾತೆ, ಆರ್‍ಆರ್‍ಟಿ, ಪಹಣಿಯಲ್ಲಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಆರು ವರ್ಷದ ಹಿಂದೆ ಸರಕಾರ ಕಂದಾಯ ಆದಾಲತ್ ಕಾರ್ಯಕ್ರಮ ಆರಂಭಿಸಿತ್ತು. ಆಡಳಿತ ವ್ಯವಸ್ಥೆ ಗ್ರಾಮಕ್ಕೆ ಬಂದು ಅಹವಾಲು ಸ್ವೀಕರಿಸಿ ಪರಿಹಾರ ಕಲ್ಪಿಸುವ ಪ್ರಯತ್ನ ಇದಾಗಿದೆ ಎಂದರು.

ಈ ಸಂದರ್ಭ ಐವರ್ನಾಡು ಗ್ರಾ.ಪಂ.ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ, ಉಪ ತಹಶೀಲ್ದಾರ್ ಚಂದ್ರಕಾಂತ್, ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ, ಪಿಡಿಓ ಯು.ಡಿ.ಶೇಖರ್ ಮೊದಲಾದವರು ಉಪಸ್ಥಿತರಿದ್ದರು. ಗ್ರಾಮಕರಣಿಕ ಕಾರ್ತಿಕ್ ಕೆ.ಎಸ್.ನಿರೂಪಿಸಿದರು. ಅನಾರೋಗ್ಯ ಪೀಡಿತರಾಗಿ ನಡೆಯಲಾಗದ ಸ್ಥಿತಿಯಲ್ಲಿರುವ ವ್ಯಕ್ತಿಗೆ 1998-99 ರಲ್ಲಿ ಅಕ್ರಮ ಸಕ್ರಮ ಮಂಜೂರಾತಿ ಆಗಿದ್ದು, ಸಿಟ್ಟಿಂಗ್ ಆಗಿದ್ದರೂ ಹಕ್ಕುಪತ್ರ ದೊರೆಯದಿರುವ ಬಗ್ಗೆ ಜಿ.ಪಂ.ಸದಸ್ಯ ಮನ್ಮಥ ಸಭೆಯಲ್ಲಿ ಪ್ರಸ್ತಾವಿಸಿದರು. ಸಮಸ್ಯೆ ಆಲಿಸಿ ಈ ಬಗ್ಗೆ ಪರಿಶೀಲಿಸುವಂತೆ ತಹಶೀಲ್ದಾರ್ ಗ್ರಾಮಕರಣಿಕರಿಗೆ ಸೂಚನೆ ನೀಡಿದರು.

ಐವರ್ನಾಡಿನಲ್ಲಿ ಸಬ್‍ಸ್ಟೇಷನ್ ನಿರ್ಮಾಣಕ್ಕೆ 2 ಎಕ್ರೆ ಸ್ಥಳ ಕಾದಿರಿಸುವಂತೆ ಗ್ರಾ.ಪಂ.ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ ಅವರು ತಹಶೀಲ್ದಾರ್ ಅವರ ಗಮನಕ್ಕೆ ತಂದರು. ಸೂಕ್ತ ಸ್ಥಳ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಹಶೀಲ್ದಾರ್ ಅವರು ಭರವಸೆ ನೀಡಿದರು. ಇದೇ ಸಂದರ್ಭ ಗ್ರಾಮಸ್ಥರು ವಿವಿಧ ಅಹವಾಲು ಸಲ್ಲಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

3 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

4 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

4 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

10 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

12 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

17 hours ago