ಸುಳ್ಯ:ಐವರ್ನಾಡು ಯುವಶಕ್ತಿ ಸಂಘದ ವತಿಯಿಂದ ಐವರ್ನಾಡು ಸ.ಹಿ.ಪ್ರಾ.ಶಾಲೆಯ ಮಡ್ತಿಲ ಪುರುಷೋತ್ತಮ ಗೌಡ ಸ್ಮಾರಕ ರಂಗಮಂದಿರದಲ್ಲಿ ಶ್ರೀ ಶಾರದಾ ಪೂಜಾ ಮಹೋತ್ಸವ ನಡೆಯಿತು.
ಶನಿವಾರ ಬೆಳಗ್ಗೆ ಪುತ್ತಿಲ ಗಿರೀಶ್ ಅಸ್ರಣ್ಣ ಅವರ ನೇತೃತ್ವದಲ್ಲಿ ಗಣಪತಿ ಹೋಮ ಮತ್ತು ಶ್ರೀ ಶಾರದಾ ದೇವಿಯ ಪ್ರತಿಷ್ಟಾಪನೆ ನಡೆಯಿತು. ನಂತರ ನಂತರ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು. ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಭಾಕಾರ್ಯಕ್ರಮ ನಡೆಯಿತು.
ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಐವರ್ನಾಡು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ ವಹಿಸಿದ್ದರು. ಅತಿಥಿಗಳಾಗಿ ಸುಳ್ಯ ವರ್ತಕ ಸಂಘದ ಅಧ್ಯಕ್ಷ ಪಿ,ಬಿ.ಸುಧಾಕರ ರೈ ಭಾಗವಹಿಸಿದ್ದರು. ಚಿದಾನಂದ ಯು.ಎಸ್.ಗೂನಡ್ಕ ಧಾರ್ಮಿಕ ಉಪನ್ಯಾಸ ನೀಡಿದರು.ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಗಿರಿಜಮ್ಮ, ಎಸ್.ಡಿ.ಎಂ.ಸಿ.ಅಧ್ಯಕ್ಷ ನಾಗಪ್ಪ ಗೌಡ ಪಾಲೆಪ್ಪಾಡಿ,ಯುವಶಕ್ತಿ ಸಂಘದ ಅಧ್ಯಕ್ಷ ಜಗದೀಶ ಉದ್ದಂಪಾಡಿ,ಪ್ರಧಾನ ಕಾರ್ಯದರ್ಶಿ ಲೋಕೇಶ್ ಪರ್ಲಿಕಜೆ ಉಪಸ್ಥಿತರಿದ್ದರು. ಇದೇ ವೇಳೆ ನಿವೃತ್ತ ಮುಖ್ಯೋಪಾಧ್ಯಾಯ ಶಾಂತರಾಮ ಕೆ.ಎಸ್. ಅವರನ್ನು ಶಾಲು ಹೊದಿಸಿ,ಫಲ ಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.
ಯುವಶಕ್ತಿ ಸಂಘದ ಗೌರವಾಧ್ಯಕ್ಷ ದಿನೇಶ್ ಮಡ್ತಿಲ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಚಂಚಲಾಕ್ಷಿ ಕತ್ಲಡ್ಕ ಕಾರ್ಯಕ್ರಮ ನಿರೂಪಿಸಿದರು.ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಜಗದೀಶ ಉದ್ದಂಪಾಡಿ ವಂದಿಸಿದರು.ಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.ವಿಜೇತರ ಪಟ್ಟಿಯನ್ನು ವಿನಯ ಕೋಂದ್ರಮಜಲು ವಾಚಿಸಿದರು.
ಭಾನುವಾರ ಬೆಳಗ್ಗೆ ಯುವಶಕ್ತಿ ಸಂಘದ ಸದಸ್ಯರಿಂದ ಮತ್ತು ಶಾಲಾ ಮಕ್ಕಳಿಂದ ಭಜನಾ ಕಾರ್ಯಕ್ರಮ , ಅಕ್ಷರಾಭ್ಯಾಸ ನಡೆದು ಸಂಜೆ ಶ್ರೀ ಶಾರದಾ ದೇವಿಯ ವೈಭವದ ಶೋಭಾಯಾತ್ರೆ ಐವರ್ನಾಡಿನ ಮುಖ್ಯ ರಸ್ತೆಯಲ್ಲಿ ನಡೆದು ಜಲಸ್ತಂಭನ ನಡೆಯಿತು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…