Advertisement
ಸುದ್ದಿಗಳು

ಐಸಿಡಿಎಸ್ ದಿನಾಚರಣೆ- ಅಪೌಷ್ಟಿಕತೆಯ ಮಕ್ಕಳಿಗೆ ಮೊಟ್ಟೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ

Share

ಸುಳ್ಯ:ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮಗ್ರ ಶಿಶು ಅಭಿವೃದ್ಧಿ ಸೇವಾ ಯೋಜನೆಯ ಬೆಳ್ಳಾರೆ ವಲಯದ ವತಿಯಿಂದ ಐಸಿಡಿಎಸ್ ದಿನಾಚರಣೆಯನ್ನು ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ಆಚರಿಸಲಾಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಐವರ್ನಾಡು ಗ್ರಾಮ ಪಂಚಾಯತ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಮಂಜುಶ್ರೀ ಗೆಳೆಯರ ಬಳಗದ ಸಹಯೋಗದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾಧಾರಣ ಅಪೌಷ್ಟಿಕತೆಯನ್ನು ಹೊಂದಿರುವ 4 ಮಕ್ಕಳಿಗೆ ವಾರದಲ್ಲಿ ನಾಲ್ಕು ದಿನ ಉಚಿತವಾಗಿ ಮೊಟ್ಟೆಯನ್ನು ವಿತರಿಸುವ ಯೋಜನೆಗೆ ಈ ಸಂದರ್ಭದಲ್ಲಿ ಚಾಲನೆ ನೀಡಲಾಯಿತು. ಅಂಗನವಾಡಿ ಕೇಂದ್ರಗಳಲ್ಲಿ 3-6 ವರ್ಷದ ಮಕ್ಕಳಿಗೆ ವಾರದಲ್ಲಿ 2 ದಿನ ಮೊಟ್ಟೆಯನ್ನು ಈಗಾಗಲೇ ಇಲಾಖೆಯಿಂದ ನೀಡಲಾಗುತ್ತಿದೆ. ಸಾಧಾರಣ ಅಪೌಷ್ಟಿಕತೆ ಹೊಂದಿರುವ ಮಕ್ಕಳಿಗೆ ನಾಲ್ಕು ದಿನ ಮೊಟ್ಟೆ ನೀಡುವ ಯೋಜನೆಯಿಂದ ಆ ಮಗು ವಾರದ 6 ದಿನವೂ ಮೊಟ್ಟೆಯನ್ನು ಸೇವಿಸಿ ಮಗುವಿನ ಪೌಷ್ಟಿಕ ತೆಯ ಮಟ್ಟವನ್ನು ಉತ್ತಮಪಡಿಸಲು ಸಹಕಾರಿಯಾಗಿದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್.ಮನ್ಮಥ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಿ.ಪಂ.ಸದಸ್ಯೆ ಪುಷ್ಪಾವತಿ ಬಾಳಿಲ, ಗ್ರಾ.ಪಂ.ಉಪಾಧ್ಯಕ್ಷ ಬಾಲಕೃಷ್ಣ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಯು.ಡಿ‌.ಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಶೈಲಜಾ.ಬಿ., ಮಂಜುಶ್ರೀ ಗೆಳೆಯರ ಬಳಗದ ಅಧ್ಯಕ್ಷ ಧರ್ಮಪಾಲ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

9 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

10 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

15 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

17 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

17 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

19 hours ago