Advertisement
ರಾಷ್ಟ್ರೀಯ

ಐಸಿಸಿ ವಿಶ್ವಕಪ್​​: ಬಾಂಗ್ಲಾ ವಿರುದ್ಧ 28 ರನ್ ಗಳ ಜಯ : ಸೆಮಿಫೈನಲ್​​ ಪ್ರವೇಶಿಸಿದ ಟೀಂ ಇಂಡಿಯಾ

Share

ಬರ್ಮಿಂಗ್​​ಹ್ಯಾಂ​​: ಸಂಘಟಿತ ಪ್ರದರ್ಶನ ನೀಡಿದ ಭಾರತ ವಿಶ್ವಕಪ್​ ಕ್ರಿಕೆಟ್ ಪಂದ್ಯದಲ್ಲಿ ಬಾಂಗ್ಲಾದೇಶದ ಎದುರು 28 ರನ್​ಗಳ ಜಯ ದಾಖಲಿಸಿತು. ಈ ಮೂಲಕ ಟೀಂ ಇಂಡಿಯಾ ವಿಶ್ವಕಪ್ ಸೆಮಿಫೈನಲ್​​ ಪ್ರವೇಶಿಸಿತು.

ಇಲ್ಲಿನ ಎಜ್​ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್​​ ಗೆದ್ದು ಮೊದಲು ಬ್ಯಾಟ್​​​ ಮಾಡಿದ ಭಾರತ 50 ಓವರ್​ಗಳಲ್ಲಿ 9 ವಿಕೆಟ್​​ ನಷ್ಟಕ್ಕೆ 314 ರನ್​​ ಗಳಿಸಿತು. ಈ ಗುರಿಯನ್ನು ಬೆನ್ನಟ್ಟಿದ ಬಾಂಗ್ಲಾ 48 ಓವರ್​ಗಳಲ್ಲಿ 10 ವಿಕೆಟ್​​ ನಷ್ಟಕ್ಕೆ 286 ರನ್​​ ಗಳಿಸಿ ಸೋಲನುಭವಿಸಿತು.

ಬಾಂಗ್ಲಾದೇಶದ ಶಕೀಬ್​​ ಆಲ್​​ ಹಸನ್​​ (66), ಸೌಮ್ಯ ಸರ್ಕಾರ್​​ (33), ಸಬ್ಬೀರ್​​​​​ ರಹಮಾನ್​​​ (36) ಹಾಗೂ ಮೊಹಮ್ಮದ್​​ ಸೈಫುದ್ದೀನ್​​​​ (51*) ಉತ್ತಮ ಪ್ರದರ್ಶನ ತೋರಿದರೂ ಗೆಲುವು ಸಾಧ್ಯವಾಗಲಿಲ್ಲ.

ಭಾರತದ ಪರ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಜಸ್ಪ್ರೀತ್​​ ಬುಮ್ರಾ 4, ಹಾರ್ದಿಕ್​​ ಪಾಂಡ್ಯ 3, , ಭುವನೇಶ್ವರ್​​ ಕುಮಾರ್​​ , ಮೊಹಮ್ಮದ್​ ಶಮಿ ಹಾಗೂ ಯಜುವೇಂದ್ರ ಚಾಹಲ್​​​ ತಲಾ ಒಂದು ವಿಕೆಟ್​​ ಕಬಳಿಸಿದರು.

ಇದಕ್ಕೂ ಮೊದಲು ಬ್ಯಾಟ್​​ ಮಾಡಿದ ಭಾರತ ಹಿಟ್ ಮ್ಯಾನ್ ರೋಹಿತ್ ಶರ್ಮ(92 ಬಾಲ್ ಗಳಲ್ಲಿ 104 ರನ್) ಆಕರ್ಷಕ ಶತಕ, ಕನ್ನಡಿಗ ಕೆ.ಎಲ್​​​​​ ರಾಹುಲ್​​​​​ (77) ಅರ್ಧ ಶತಕದ ನೆರವಿನಿಂದ ಉತ್ತಮ ಮೊತ್ತ ಕಲೆ ಹಾಕಿತು. ವಿರಾಟ್​​ ಕೊಹ್ಲಿ (26) ಹಾರ್ದಿಕ್​​ ಪಾಂಡ್ಯ (0), ರಿಷಬ್​​ ಪಂತ್​ (48), ದಿನೇಶ್​​​ ಕಾರ್ತಿಕ್​ (8), ಮಹೇಂದ್ರ ಸಿಂಗ್​​ ಧೋನಿ (35) ಭುವನೇಶ್ವರ್​​​ ಕುಮಾರ್​ (2), ಮೊಹಮ್ಮದ್​​ ಶಮಿ (1) ಓಟ್ ಆದರು. ಜಸ್ಪ್ರೀತ್​ ಬುಮ್ರಾ (0*) ಔಟಾಗದೆ ಉಳಿದರು.

ಬಾಂಗ್ಲಾ ಪರ ಮುಸ್ತಾಫಿಜುರ್​​ ರೆಹಮಾನ್​​​​​​ 5, ಶಕೀಬ್​​ ಆಲ್​​ ಹಸನ್, ರುಬೆಲ್​​​​​​​ ಹೊಸ್ಸಿನ್​​​​​ ಮತ್ತು ಸೌಮ್ಯ ಸರ್ಕಾರ್​​​ ತಲಾ ಒಂದು ವಿಕೆಟ್​​ ಪಡೆದುಕೊಂಡರು.

ರೋಹಿತ್ ಪಂದ್ಯಶ್ರೇಷ್ಠ:
ಕೇವಲ 92 ಬಾಲ್ ಗಳಲ್ಲಿ 5 ಸಿಕ್ಸರ್ 7 ಬೌಂಡರಿ ಸಹೀತ 104 ರನ್ ಸಿಡಿಸಿ ಭಾರತ ತಂಡಕ್ಕೆ ಆಸರೆಯಾದ ರೋಹಿತ್ ಶರ್ಮ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಈ ವಿಶ್ವಕಪ್ ಪಂದ್ಯದಲ್ಲಿ ನಾಲ್ಕು ಶತಕ ಸಿಡಿಸುವ ಮೂಲಕ ರೋಹಿತ್ ದಾಖಲೆ ಸೃಷ್ಠಿಸಿದರು. ಈ ವಿಶ್ವಕಪ್ ನಲ್ಲಿ ದಕ್ಷಿಣ ಆಫ್ರಿಕಾ(122), ಪಾಕಿಸ್ಥಾನ(140), ಇಂಗ್ಲೆಂಡ್(102), ಬಾಂಗ್ಲಾದೇಶ (104) ವಿರುದ್ಧ ರೋಹಿತ್ ಶತಕ ದಾಖಲಿಸಿದ್ದರು.

ಸೆಮಿಗೆ ಟಿಂ ಇಂಡಿಯಾ:

ಒಂದು ಪಂದ್ಯ ಉಳಿದಿರುವಂತೆಯೇ ಟಿಂ ಇಂಡಿಯಾ ಸೆಮಿಫೈನಲ್ ಪ್ರವೇಶಿಸಿದೆ. 8 ಪಂದ್ಯಗಳನ್ನು ಆಡಿದ ಭಾರತ 6 ಜಯ ದಾಖಲಿಸಿ ಉಪಾಂತ್ಯ ಪಂದ್ಯಕ್ಕೆ ಲಗ್ಗೆಯಿಟ್ಟಿದೆ. ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಪಾಕಿಸ್ಥಾನ, ವೆಸ್ಟ್ ಇಂಡೀಸ್, ಅಫ್ಘಾನಿಸ್ತಾನ, ಬಾಂಗ್ಲಾದೇಶ ವಿರುದ್ಧ ಟಿಂ ಇಂಡಿಯಾ ಜಯ ಗಳಿಸಿದರೆ, ನ್ಯೂಜಿಲೆಂಡ್ ವಿರುದ್ಧದ ಪಂದ್ಯ ರದ್ದಾದ ಕಾರಣ ಅಂಕವನ್ನು ಹಂಚಿಕೊಂಡರೆ ಇಂಗ್ಲೆಂಡ್ ವಿರುದ್ಧ ಸೋಲನುಭವಿಸಿದೆ.
ಶ್ರೀಲಂಕಾ ವಿರುದ್ಧದ ಪಂದ್ಯ ಬಾಕಿ ಇದೆ. 8 ಪಂದ್ಯದಲ್ಲಿ ಒಟ್ಟು 13 ಅಂಕ ಪಡೆದಿರುವ ಭಾರತ ಎರಡನೇ ಸ್ಥಾನದಲ್ಲಿದೆ‌. 8 ಪಂದ್ಯದಲ್ಲಿ ಏಳು ಜಯ ಗಳಿಸಿ 14 ಅಂಕ ಪಡೆದಿರುವ ಆಸ್ಟ್ರೇಲಿಯಾ ಪ್ರಥಮ ಸ್ಥಾನದಲ್ಲಿದೆ‌.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

6 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

6 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

8 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

15 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

16 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

17 hours ago