Advertisement
ಸುದ್ದಿಗಳು

ಒಂಟಿ ಸಲಗದ ಉಪಟಳ : ಹಾಕತ್ತೂರು ಗ್ರಾಮದಲ್ಲಿ ಆತಂಕ

Share

ಮಡಿಕೇರಿ  : ಒಂಟಿ ಸಲಗವೊಂದು ಹಾಕತ್ತೂರು ಗ್ರಾಮಕ್ಕೆ ಲಗ್ಗೆ ಇಟ್ಟಿದ್ದು, ವಾಸದ ಮನೆ, ತೋಟ ಮತ್ತು ಗದ್ದೆಗೆ ಹಾನಿ ಮಾಡಿ ಗ್ರಾಮದಲ್ಲಿ ಆತಂಕ ಸೃಷ್ಟಿಸಿದೆ. ಒಂದು ವಾರದ ಹಿಂದೆ ದಿಢೀರ್ ಆಗಿ ಪ್ರತ್ಯಕ್ಷವಾದ ಒಂಟಿ ಕಾಡಾನೆ ಗ್ರಾಮದ ವಿವಿಧೆಡೆ ದಾಂಧಲೆ ನಡೆಸಿದೆ. ಲಕ್ಷಾಂತರ ರೂ. ಮೌಲ್ಯದ ಬೆಳೆ ನಷ್ಟವಾಗಿದ್ದು, ಕಾಡಾನೆ ದಾಳಿಯನ್ನು ನಿಯಂತ್ರಿಸಲು ಅರಣ್ಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಅರಣ್ಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡುವ ಸಂದರ್ಭ ಮರೆಯಾಗುವ ಒಂಟಿ ಸಲಗ ಯಾವ ಸಂದರ್ಭದಲ್ಲಿ ದಾಳಿ ಮಾಡುತ್ತದೋ ತಿಳಿಯದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಹಾಕತ್ತೂರು ವ್ಯಾಪ್ತಿಯಲ್ಲೇ ಬೀಡು ಬಿಟ್ಟಿರುವ ಕಾಡಾನೆ ಅಮ್ಮಾಟಂಡ ಕುಟುಂಬಸ್ಥರಿಗೆ ಸೇರಿದ ತೋಟ ಮತ್ತು ಗದ್ದೆಗೆ ಹಾನಿಯಾಗಿದ್ದು, ಮನೆ ಹಾಗೂ ತೋಟದ ಗೇಟ್‍ಗಳನ್ನು ನಾಶ ಮಾಡಿದೆ. ಬಟ್ಟಿರ ಗದ್ದೆ, ಚೊಟ್ಟೆಯಂಡ ಶಂಕರಿ, ಅಮ್ಮಾಟಂಡ ಪೂವಣ್ಣ, ಪ್ರಸಾದ್ ಗಣಪತಿ, ಚೇತನ್ ದೇವಯ್ಯ ಮತ್ತಿತರ ಗ್ರಾಮಸ್ಥರ ತೋಟಗಳು ಆನೆ ದಾಳಿಗೆ ತುತ್ತಾಗಿದೆ.
ಗ್ರಾಮಸ್ಥರು ದೂರು ನೀಡಿದ ಹಿನ್ನೆಲೆ ಅರಣ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು. ಆದರೆ ಅಧಿಕಾರಿಗಳ ಭೇಟಿ ಸಂದರ್ಭ ನಾಪತ್ತೆಯಾಗಿದ್ದ ಒಂಟಿ ಸಲಗ ಮತ್ತೆ ಸೆ.17 ರಂದು ರಾತ್ರಿ ಕಾಣಿಸಿಕೊಂಡು ಅಮ್ಮಾಟಂಡ ಮುತ್ತಪ್ಪ ಅವರ ಮನೆಯ ಗೇಟ್ ಮತ್ತು ಪೂವಣ್ಣ ಅವರ ತೋಟದ ಗೇಟನ್ನು ಮುರಿದು ಹಾಕಿದೆ.

ಅಮ್ಮಟಂಡ ಚಿಣ್ಣಪ್ಪ ಅವರ ಮನೆಯವರೆಗೆ ಬಂದ ಕಾಡಾನೆ ಬಟ್ಟಿರ ಕುಟುಂಬಸ್ಥರ ಗದ್ದೆಗೆ ದಾಳಿ ಮಾಡಿ ಕೃಷಿ ನಾಶ ಪಡಿಸಿದೆ. ಇದೀಗ ಆನೆ ಯಾವ ಕಡೆ ತೆರಳಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಸುತ್ತಮುತ್ತಲ ಗ್ರಾಮಸ್ಥರು, ವಿದ್ಯಾರ್ಥಿಗಳು ರಸ್ತೆಯಲ್ಲಿ ಓಡಾಡಲು ಭಯ ಪಡುತ್ತಿದ್ದಾರೆ. ಕಾರ್ಮಿಕರು ತೋಟಕ್ಕೆ ಬರಲು ಹಿಂಜರಿಯುತ್ತಿದ್ದಾರೆ, ಒಂಟಿ ಸಲಗದ ದಾಳಿಯಿಂದ ತಪ್ಪಿಸಿಕೊಳ್ಳುವ ಬಗ್ಗೆಯೇ ಚಿಂತಿತರಾಗಿರುವ ಗ್ರಾಮಸ್ಥರು, ಕಡಗದಾಳು ಗ್ರಾಮದಲ್ಲಿ ಕಾಡಾನೆ ದಾಳಿಗೆ ಸಿಲುಕಿ ಇತ್ತೀಚೆಗೆ ಪೊಲೀಸ್ ಅಧಿಕಾರಿಯೊಬ್ಬರು ಮೃತಪಟ್ಟ ಪ್ರಕರಣವನ್ನು ಉಲ್ಲೇಖಿಸಿ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಅರಣ್ಯ ಇಲಾಖೆ ಗ್ರಾಮದಲ್ಲಿ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಿ ಗಜಮಾರ್ಗವನ್ನು ಪತ್ತೆಹಚ್ಚಿ ಉಪಟಳ ನೀಡುತ್ತಿರುವ ಒಂಟಿ ಸಲಗವನ್ನು ಕಾಡಿಗಟ್ಟುವಂತೆ ಗ್ರಾಮಸ್ಥರಾದ ಅಮ್ಮಾಟಂಡ ಕೆ.ಚಿಣ್ಣಪ್ಪ, ಅಮ್ಮಾಟಂಡ ಪೂವಣ್ಣ, ಅಮ್ಮಾಟಂಡ ಪ್ರಸಾದ್ ಗಣಪತಿ, ಅಮ್ಮಾಟಂಡ ಮುತ್ತಪ್ಪ, ಚೊಟ್ಟೆಯಂಡ ಸಿ.ಶಂಕರಿ, ಕೋಲಿರ ಪೆಮ್ಮಯ್ಯ ಮತ್ತಿತರರು ಒತ್ತಾಯಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

12 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

20 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

3 days ago