Advertisement
ಕಾರ್ಯಕ್ರಮಗಳು

ಒಡಿಯೂರು ರಥೋತ್ಸವ- ತುಳುನಾಡ ಜಾತ್ರೆ

Share

ವಿಟ್ಲ: ಮನೆ ಮನೆಗಳಲ್ಲಿ ತುಳು ಭಾಷೆ ಮಾತನಾಡುವ ಮೂಲಕ ತುಳು ಮಾತೆಯ ಉತ್ಸವ ನಡೆಯಬೇಕು. ತುಳುವರಲ್ಲಿ ಎದ್ದೇಳುವ ಪ್ರವೃತ್ತಿಯ ಕೊರತೆ ಇದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.

ಅವರು ಸೋಮವಾರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ವತಿಯಿಂದ ನಡೆಯುತ್ತಿರುವ ಶ್ರೀ ಒಡಿಯೂರು ರಥೋತ್ಸವ- ತುಳುನಾಡ ಜಾತ್ರೆ ಪ್ರಯುಕ್ತ ನಡೆದ ಇಪ್ಪತ್ತನೇ ತುಳು ಸಾಹಿತ್ಯ ಸಮ್ಮೇಳನೊವನ್ನು ಉದ್ಘಾಟಿಸಿ, ಆಶೀರ್ವಚನ ನೀಡಿದರು. ವಿಶ್ವವಿದ್ಯಾಲಯಗಳಲ್ಲಿ ತುಳು ಭಾಷೆಗೆ ಮಾನ್ಯತೆ ತುಳು ಭವಿಷ್ಯದ ದೃಷ್ಟಿಯಲ್ಲಿ ಒಳ್ಳೆಯ ಕಾರ್ಯವಾಗಿದೆ. ತುಳು ಕಾರ್ಯಕ್ಕೆ ಇಳಿದಾಗ ಮಾತ್ರ ನಮ್ಮ ತುಳು ಭಾಷೆ 8ನೇ ಪರಿಚ್ಛೇದಕ್ಕೆ ಸೇರಲು ಸಾಧ್ಯ. ಆನಂದದ ಮೂಲ ತ್ಯಾಗದಲ್ಲಿದೆ. ತ್ಯಾಗದಲ್ಲಿ ಮಾತ್ರ ಆನಂದದ ಅನುಭವವಿದೆ. ತುಳುವರಲ್ಲಿ ಹೃದಯ ಸಿರಿವಂತಿಕೆ ಇದೆ ಎಂದರು.

ಸಮ್ಮೇಳನಾಧ್ಯಕ್ಷತೆ ವಹಿಸಿದ್ದ ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಕುಲಸಚಿವ ಡಾ. ಎ ಸುಬ್ಬಣ್ಣ ರೈ ಮಾತನಾಡಿ ರಾಜ್ಯದಲ್ಲಿ ಕನ್ನಡ ಬಳಕೆಯ ಮಧ್ಯೆ ತುಳುವನ್ನು ಸುಭದ್ರವಾಗಿಸುವುದು. ಸವಾಲಿನ ಕಾರ್ಯ. ತುಳು ಭಾಷೆ ಒಳ ಮಗ್ಗುಲಿಗಳ ಬಗ್ಗೆ ಆಳವಾದ ಅಧ್ಯಯನ ನಡೆಯಬೇಕು. ತುಳು ಭಾಷೆ ಸಂಸ್ಕೃತಿ ವಿಚಾರದ ಬಗ್ಗೆ ಪ್ರತಿಯೊಬ್ಬರು ಅಭಿಮಾನ ಇಡಬೇಕು ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕೊಣಾಜೆ ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಡಾ. ಪಿ.ಎಸ್ ಎಡಪಡಿತ್ತಾಯ ಮಾತನಾಡಿ ಕಲೆ ಸಾಹಿತ್ಯಕ್ಕೆ ಬೆಂಬಲ ನೀಡುವ ಸಂತರಾಗಿದ್ದಾರೆ. ತುಳು ತೇರು ಎಳೆಯಲು ನಾವೆಲ್ಲರೂ ಕೈಜೋಡಿಸಬೇಕು. ತುಳು ಭಾಷೆ ಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಲು ಪ್ರತಿಯೊಬ್ಬ ತುಳುವರು ಪ್ರಯತ್ನಿಸಬೇಕು ಎಂದರು

ಮಲಾರ್ ಜಯರಾಮ ರೈ ಅವರ ಸಂಪದಕತ್ವದಲ್ಲಿ ರಚಿಸಲಾದ ಅವಧೂತ ಪಜ್ಜೆಲು ಪುಸ್ತಕ ಬಿಡುಗಡೆಗೊಳಿಸಲಾಯಿತು. ಬೆಳಿಗ್ಗೆ ಸಂಸ್ಥಾನದಿಂದ ಸಭಾ ವೇದಿಕೆವರೆಗೆ ಮೆರವಣಿಗೆ ನಡೆಯಿತು. ಸಾಧ್ವೀ ಮಾತಾನಂದ ಮಯೀ ದಿವ್ಯ ಉಪಸ್ಥಿತಿ ಕರುಣಿಸಿದ್ದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್, ಕೇರಳ ತುಳು ಅಕಾಡೆಮಿ ಅಧ್ಯಕ್ಷ ಉಮೇಶ್ ಸಾಲ್ಯಾನ್, ಮಲಾರ್ ಜಯರಾಮ ರೈ ಉಪಸ್ಥಿತರಿದ್ದರು.
ಒಡಿಯೂರು ಗ್ರಾಮ ವಿಕಾಸ ಯೋಜನೆಯ ವಿಸ್ತರಣಾಧಿಕಾರಿ ಸದಾಶಿವ ಅಳಿಕೆ ನಿರೂಪಿಸಿದರು. ರೇಣುಕಾ ಎಸ್ ರೈ ಪ್ರಾರ್ಥಿಸಿದರು. ತುಳು ಸಾಹಿತ್ಯ ಸಮ್ಮೇಳನ ಸಮಿತಿ ಸಂಚಾಲಕ ಡಾ. ವಸಂತಕುಮಾರ್ ಪೆರ್ಲ ಸ್ವಾಗತಿಸಿದರು. ಜಯಪ್ರಕಾಶ್ ವಂದಿಸಿದರು. ಯಶವಂತ ವಿಟ್ಲ ಪರಿಚಯಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

1 hour ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

5 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

13 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

15 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

16 hours ago