Advertisement
ಕಾರ್ಯಕ್ರಮಗಳು

ಒಡಿಯೂರು ರಥೋತ್ಸವ- ತುಳುನಾಡ ಜಾತ್ರೆ

Share

ವಿಟ್ಲ: ಮನೆ ಮನೆಗಳಲ್ಲಿ ತುಳು ಭಾಷೆ ಮಾತನಾಡುವ ಮೂಲಕ ತುಳು ಮಾತೆಯ ಉತ್ಸವ ನಡೆಯಬೇಕು. ತುಳುವರಲ್ಲಿ ಎದ್ದೇಳುವ ಪ್ರವೃತ್ತಿಯ ಕೊರತೆ ಇದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.

ಅವರು ಸೋಮವಾರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ವತಿಯಿಂದ ನಡೆಯುತ್ತಿರುವ ಶ್ರೀ ಒಡಿಯೂರು ರಥೋತ್ಸವ- ತುಳುನಾಡ ಜಾತ್ರೆ ಪ್ರಯುಕ್ತ ನಡೆದ ಇಪ್ಪತ್ತನೇ ತುಳು ಸಾಹಿತ್ಯ ಸಮ್ಮೇಳನೊವನ್ನು ಉದ್ಘಾಟಿಸಿ, ಆಶೀರ್ವಚನ ನೀಡಿದರು. ವಿಶ್ವವಿದ್ಯಾಲಯಗಳಲ್ಲಿ ತುಳು ಭಾಷೆಗೆ ಮಾನ್ಯತೆ ತುಳು ಭವಿಷ್ಯದ ದೃಷ್ಟಿಯಲ್ಲಿ ಒಳ್ಳೆಯ ಕಾರ್ಯವಾಗಿದೆ. ತುಳು ಕಾರ್ಯಕ್ಕೆ ಇಳಿದಾಗ ಮಾತ್ರ ನಮ್ಮ ತುಳು ಭಾಷೆ 8ನೇ ಪರಿಚ್ಛೇದಕ್ಕೆ ಸೇರಲು ಸಾಧ್ಯ. ಆನಂದದ ಮೂಲ ತ್ಯಾಗದಲ್ಲಿದೆ. ತ್ಯಾಗದಲ್ಲಿ ಮಾತ್ರ ಆನಂದದ ಅನುಭವವಿದೆ. ತುಳುವರಲ್ಲಿ ಹೃದಯ ಸಿರಿವಂತಿಕೆ ಇದೆ ಎಂದರು.

ಸಮ್ಮೇಳನಾಧ್ಯಕ್ಷತೆ ವಹಿಸಿದ್ದ ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಕುಲಸಚಿವ ಡಾ. ಎ ಸುಬ್ಬಣ್ಣ ರೈ ಮಾತನಾಡಿ ರಾಜ್ಯದಲ್ಲಿ ಕನ್ನಡ ಬಳಕೆಯ ಮಧ್ಯೆ ತುಳುವನ್ನು ಸುಭದ್ರವಾಗಿಸುವುದು. ಸವಾಲಿನ ಕಾರ್ಯ. ತುಳು ಭಾಷೆ ಒಳ ಮಗ್ಗುಲಿಗಳ ಬಗ್ಗೆ ಆಳವಾದ ಅಧ್ಯಯನ ನಡೆಯಬೇಕು. ತುಳು ಭಾಷೆ ಸಂಸ್ಕೃತಿ ವಿಚಾರದ ಬಗ್ಗೆ ಪ್ರತಿಯೊಬ್ಬರು ಅಭಿಮಾನ ಇಡಬೇಕು ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕೊಣಾಜೆ ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಡಾ. ಪಿ.ಎಸ್ ಎಡಪಡಿತ್ತಾಯ ಮಾತನಾಡಿ ಕಲೆ ಸಾಹಿತ್ಯಕ್ಕೆ ಬೆಂಬಲ ನೀಡುವ ಸಂತರಾಗಿದ್ದಾರೆ. ತುಳು ತೇರು ಎಳೆಯಲು ನಾವೆಲ್ಲರೂ ಕೈಜೋಡಿಸಬೇಕು. ತುಳು ಭಾಷೆ ಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಲು ಪ್ರತಿಯೊಬ್ಬ ತುಳುವರು ಪ್ರಯತ್ನಿಸಬೇಕು ಎಂದರು

ಮಲಾರ್ ಜಯರಾಮ ರೈ ಅವರ ಸಂಪದಕತ್ವದಲ್ಲಿ ರಚಿಸಲಾದ ಅವಧೂತ ಪಜ್ಜೆಲು ಪುಸ್ತಕ ಬಿಡುಗಡೆಗೊಳಿಸಲಾಯಿತು. ಬೆಳಿಗ್ಗೆ ಸಂಸ್ಥಾನದಿಂದ ಸಭಾ ವೇದಿಕೆವರೆಗೆ ಮೆರವಣಿಗೆ ನಡೆಯಿತು. ಸಾಧ್ವೀ ಮಾತಾನಂದ ಮಯೀ ದಿವ್ಯ ಉಪಸ್ಥಿತಿ ಕರುಣಿಸಿದ್ದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್, ಕೇರಳ ತುಳು ಅಕಾಡೆಮಿ ಅಧ್ಯಕ್ಷ ಉಮೇಶ್ ಸಾಲ್ಯಾನ್, ಮಲಾರ್ ಜಯರಾಮ ರೈ ಉಪಸ್ಥಿತರಿದ್ದರು.
ಒಡಿಯೂರು ಗ್ರಾಮ ವಿಕಾಸ ಯೋಜನೆಯ ವಿಸ್ತರಣಾಧಿಕಾರಿ ಸದಾಶಿವ ಅಳಿಕೆ ನಿರೂಪಿಸಿದರು. ರೇಣುಕಾ ಎಸ್ ರೈ ಪ್ರಾರ್ಥಿಸಿದರು. ತುಳು ಸಾಹಿತ್ಯ ಸಮ್ಮೇಳನ ಸಮಿತಿ ಸಂಚಾಲಕ ಡಾ. ವಸಂತಕುಮಾರ್ ಪೆರ್ಲ ಸ್ವಾಗತಿಸಿದರು. ಜಯಪ್ರಕಾಶ್ ವಂದಿಸಿದರು. ಯಶವಂತ ವಿಟ್ಲ ಪರಿಚಯಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

1 day ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

1 day ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago