Advertisement
ಕಾರ್ಯಕ್ರಮಗಳು

ಒತ್ತಡಗಳ ಮಧ್ಯೆ ಪತ್ರಿಕೋದ್ಯಮ ಮೌಲ್ಯ ಕಾಪಾಡುವುದೇ ಸವಾಲು: ಮೋಹನ್ ಆಳ್ವ

Share

ಮಂಗಳೂರು: ಆಧುನಿಕ ಜೀವನದಲ್ಲಿ ವೃತ್ತಿ ಬದುಕಿನ ಒತ್ತಡಗಳ ಮದ್ಯೆ ಪತ್ರಿಕಾರಂಗದ ಮೌಲ್ಯಗಳನ್ನು ಕಾಪಾಡುವುದೇ ಮಾಧ್ಯಮ, ಪತ್ರಕರ್ತರ ನಿಜವಾದ ಸವಾಲು ಎಂದು ಆಳ್ವಾಸ್ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು.

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಆಯೋಜಿಸಲಾದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ ನೂರು ವರ್ಷಗಳ ಅವಧಿಯಲ್ಲಿ ಮಾಧ್ಯಮದ ಬೆಳವಣಿಗೆ ವಿಸ್ತಾರವಾಗಿದೆ. ಪ್ರಸಕ್ತ ಕಾಲದಲ್ಲಿ ಹೂಡಿಕೆ ಸ್ಪರ್ಧೆಯ ನಡುವೆ ಮಾಧ್ಯಮಗಳ ಮೇಲೆ ನಿಯಂತ್ರಣ ಕಷ್ಟ ಸಾಧ್ಯ. ಮಾತ್ರವಲ್ಲದೆ ಮಾಧ್ಯಮಕ್ಕೆ ಪ್ರವೇಶಿಸುವ ಯುವ ಶಕ್ತಿಯು ಉತ್ಸಾಹದ ಭರದಲ್ಲಿ ಬರವಣಿಗೆಯ, ತಿಳುವಳಿಕೆಯ ಕೊರತೆ ಸಾಮಾನ್ಯ. ಬಹಳ ಜಾಗರೂಕತೆಯಿಂದ ಮುಂದೆ ಸಾಗಬೇಕಾಗಿದೆ. ಹಾಗೆಂದು ಋಣಾತ್ಮಕ ಚಿಂತನೆಯ ಅಗತ್ಯವಿಲ್ಲ. ಕಾಲವೇ ಎಲ್ಲವನ್ನೂ ನಿರ್ಧರಿಸುವುದರಿಂದ ಇಂತಹ ವ್ಯವಸ್ಥೆಯ ನಡುವೆಯೂ ಮಾಧ್ಯಮ ಯಾವುದರಲ್ಲೂ ರಾಜಿಯಾಗದೆ ವೌಲ್ಯವನ್ನು ಕಾಪಾಡಬೇಕಾಗಿದೆ ಎಂದರು.

ಸಂಘದ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಭಾರತೀಯ ಕಾರ್ಯನಿರತರ ಪತ್ರಕರ್ತರ ಒಕ್ಕೂಟದ ಹೊಸದಿಲ್ಲಿಯ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ ಮಾತನಾಡಿ, ಪತ್ರಿಕೋದ್ಯಮ ಇಲ್ಲದೆ ದೇಶವನ್ನು ಊಹಿಸಲು ಅಸಾಧ್ಯ. ಪತ್ರಕರ್ತನಾದವನಿಗೆ ಕೆಲಸದಲ್ಲಿ ನಿಷ್ಠೆ, ಬದ್ಧತೆಯಿರಬೇಕಾಗಿದ್ದು ಅದೇ ಪತ್ರಿಕಾ ಧರ್ಮದ ಒಳಮರ್ಮ. ಪತ್ರಿಕೋದ್ಯಮ ದಾರಿ ತಪ್ಪಿದರೆ ದೇಶ ಕುಲಗೆಟ್ಟು ಹೋಗಲಿದೆ ಎಂದರು.

ವೇದಿಕೆಯಲ್ಲಿ ಸಾಹಿತಿ, ಹಂಪಿ ವಿವಿಯ ವಿಶ್ರಾಂತ ಕುಲಪತಿ ಡಾ.ಬಿ.ಎ. ವಿವೇಕ ರೈ, ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಸಹ್ಯಾದ್ರಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮಂಜುನಾಥ ಭಂಡಾರಿ, ಪ್ರೆಸ್‌ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಸ್ವಾಗತಿಸಿದರು. ಕಾರ್ಯಕಾರಿ ಸಮಿತಿ ಸದಸ್ಯರಾದ ವಿಜಯ ಕೋಟ್ಯಾನ್ ಪಡು ಕಾರ್ಯಕ್ರಮ ನಿರೂಪಿಸಿದರು. ಆರ್.ಸಿ. ಭಟ್ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

14 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

16 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

17 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

18 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

1 day ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago