ಮಂಗಳೂರು: ಆಧುನಿಕ ಜೀವನದಲ್ಲಿ ವೃತ್ತಿ ಬದುಕಿನ ಒತ್ತಡಗಳ ಮದ್ಯೆ ಪತ್ರಿಕಾರಂಗದ ಮೌಲ್ಯಗಳನ್ನು ಕಾಪಾಡುವುದೇ ಮಾಧ್ಯಮ, ಪತ್ರಕರ್ತರ ನಿಜವಾದ ಸವಾಲು ಎಂದು ಆಳ್ವಾಸ್ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪ್ರೆಸ್ಕ್ಲಬ್ನಲ್ಲಿ ಸೋಮವಾರ ಆಯೋಜಿಸಲಾದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ ನೂರು ವರ್ಷಗಳ ಅವಧಿಯಲ್ಲಿ ಮಾಧ್ಯಮದ ಬೆಳವಣಿಗೆ ವಿಸ್ತಾರವಾಗಿದೆ. ಪ್ರಸಕ್ತ ಕಾಲದಲ್ಲಿ ಹೂಡಿಕೆ ಸ್ಪರ್ಧೆಯ ನಡುವೆ ಮಾಧ್ಯಮಗಳ ಮೇಲೆ ನಿಯಂತ್ರಣ ಕಷ್ಟ ಸಾಧ್ಯ. ಮಾತ್ರವಲ್ಲದೆ ಮಾಧ್ಯಮಕ್ಕೆ ಪ್ರವೇಶಿಸುವ ಯುವ ಶಕ್ತಿಯು ಉತ್ಸಾಹದ ಭರದಲ್ಲಿ ಬರವಣಿಗೆಯ, ತಿಳುವಳಿಕೆಯ ಕೊರತೆ ಸಾಮಾನ್ಯ. ಬಹಳ ಜಾಗರೂಕತೆಯಿಂದ ಮುಂದೆ ಸಾಗಬೇಕಾಗಿದೆ. ಹಾಗೆಂದು ಋಣಾತ್ಮಕ ಚಿಂತನೆಯ ಅಗತ್ಯವಿಲ್ಲ. ಕಾಲವೇ ಎಲ್ಲವನ್ನೂ ನಿರ್ಧರಿಸುವುದರಿಂದ ಇಂತಹ ವ್ಯವಸ್ಥೆಯ ನಡುವೆಯೂ ಮಾಧ್ಯಮ ಯಾವುದರಲ್ಲೂ ರಾಜಿಯಾಗದೆ ವೌಲ್ಯವನ್ನು ಕಾಪಾಡಬೇಕಾಗಿದೆ ಎಂದರು.
ಸಂಘದ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಭಾರತೀಯ ಕಾರ್ಯನಿರತರ ಪತ್ರಕರ್ತರ ಒಕ್ಕೂಟದ ಹೊಸದಿಲ್ಲಿಯ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ ಮಾತನಾಡಿ, ಪತ್ರಿಕೋದ್ಯಮ ಇಲ್ಲದೆ ದೇಶವನ್ನು ಊಹಿಸಲು ಅಸಾಧ್ಯ. ಪತ್ರಕರ್ತನಾದವನಿಗೆ ಕೆಲಸದಲ್ಲಿ ನಿಷ್ಠೆ, ಬದ್ಧತೆಯಿರಬೇಕಾಗಿದ್ದು ಅದೇ ಪತ್ರಿಕಾ ಧರ್ಮದ ಒಳಮರ್ಮ. ಪತ್ರಿಕೋದ್ಯಮ ದಾರಿ ತಪ್ಪಿದರೆ ದೇಶ ಕುಲಗೆಟ್ಟು ಹೋಗಲಿದೆ ಎಂದರು.
ವೇದಿಕೆಯಲ್ಲಿ ಸಾಹಿತಿ, ಹಂಪಿ ವಿವಿಯ ವಿಶ್ರಾಂತ ಕುಲಪತಿ ಡಾ.ಬಿ.ಎ. ವಿವೇಕ ರೈ, ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಸಹ್ಯಾದ್ರಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮಂಜುನಾಥ ಭಂಡಾರಿ, ಪ್ರೆಸ್ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಸ್ವಾಗತಿಸಿದರು. ಕಾರ್ಯಕಾರಿ ಸಮಿತಿ ಸದಸ್ಯರಾದ ವಿಜಯ ಕೋಟ್ಯಾನ್ ಪಡು ಕಾರ್ಯಕ್ರಮ ನಿರೂಪಿಸಿದರು. ಆರ್.ಸಿ. ಭಟ್ ವಂದಿಸಿದರು.
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…
ಈ ವರ್ಷ ದೇಶದಲ್ಲಿ ಬರಗಾಲ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರನ್ನು ರಕ್ಷಿಸಲು ಎಲ್ಲರೂ…
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…