ಒಬ್ಬಂಟಿ ವೃದ್ಧನಿಗೆ ಆಶ್ರಮ ಭಾಗ್ಯ ಕಲ್ಪಿಸಿದ ಸ್ಥಳೀಯರು

June 24, 2019
12:00 PM

ಸುಳ್ಯ:  ಮಗ ಹಾಗೂ ಪತ್ನಿ ವೃದ್ಧ ಪತಿಯನ್ನು ಬಿಟ್ಟು ಹಲವು ತಿಂಗಳ ಹಿಂದೆ ನಾಪತ್ತೆಯಾಗಿದ್ದು ಒಬ್ಬಂಟಿ ವೃದ್ಧನಿಗೆ ಸ್ಥಳೀಯರು ಮಾನವೀಯತೆ ಮೆರೆದು ಅನಾಥಾಶ್ರಮದ ಭಾಗ್ಯವನ್ನು ಕಲ್ಪಿಸಿದ್ದಾರೆ.
ಸುಳ್ಯದ ಶಾಂತಿನಗರದಲ್ಲಿ ವಾಸವಿದ್ದ ಗೋಪಾಲಕೃಷ್ಣ ಆಶ್ರಮ ಸೇರಿದ ವ್ಯಕ್ತಿಯಾಗಿದ್ದಾರೆ. ಗೋಪಾಲಕೃಷ್ಣ ಅವರ ಪತ್ನಿ ಹಾಗೂ ಮಗ ಕಳೆದ ಕೆಲವು ಸಮಯಗಳಿಂದ ನಾಪತ್ತೆಯಾಗಿದ್ದರು. ಗೋಪಾಲಕೃಷ್ಣ ಅವರ ಪುತ್ರನಿಗೆ ವ್ಯವಹಾರದ ಸಂಬಂಧ ಸಾಲವಾಗಿತ್ತು.  ಹೀಗಾಗಿ ಯಾರಿಗೂ ಹೇಳದೇ ವರ್ಷಗಳ ಹಿಂದೆ ಪರಾರಿಯಾಗಿದ್ದರು.  ಗೋಪಾಲಕೃಷ್ಣ ಅವರು ಕ್ಯಾಂಪ್ಕೋದ ನಿವೃತ್ತ ಉದ್ಯೋಗಿಯಾಗಿ ದ್ದು ಅವರ ಪತ್ನಿ  ಶಿಕ್ಷಕಿಯಾಗಿದ್ದರು. ಮಗನಿಗೆ ಸಾಲವನ್ನು ನೀಡಿದ ಸಾಲಗಾರರು ನಿವೃತ್ತ ದಂಪತಿಗಳನ್ನು ಕಾಡತೊಡಗಿ ದ್ದರು. ಈ ನಡುವೆ ಗೋಪಾಲಕೃಷ್ಣರಿಗೆ ಅಸೌಖ್ಯ ಕಾಡಿದ ಪರಿಣಾಮ ಪತಿ ಹಾಗೂ ಮನೆಯ ಜವಾಬ್ದಾರಿ ಪತ್ನಿಯ ಮೇಲೆ ಬಿದ್ದಿತ್ತು. ಸಾಲಗಾರರು ಪ್ರತಿನಿತ್ಯ ಕಾಡತೊಡಗಿದರು. ಸಾಲ ತೀರಿಸಲು ಇನ್ನಿಲ್ಲದ ಪ್ರಯತ್ನ ಮಾಡಿದರು. ಹೀಗಾಗಿ ಬಾಧೆ ತಾಳಲಾರದೇ ಗೋಪಾಲಕೃಷ್ಣರನ್ನು ಅವರ ತಮ್ಮನ ಮನೆಯಲ್ಲಿ ಸೇರಿಸಿ 2 ದಿನ ಬಿಟ್ಟು ಬರುತ್ತೇನೆ ಎಂದು ಹೇಳಿ ಹೋದ ಅವರ ಪತ್ನಿ   ಇದುವರೆಗೂ ಮರಳಿ ಬಂದಿಲ್ಲ. ಕೆಲ ದಿನ ತಮ್ಮನ ಮನೆಯಲ್ಲೇ ಕಳೆದ ಗೋಪಾಲಕೃಷ್ಣ  ನಂತರ  ಶಾಂತಿನಗರದ ಮನೆಗೆ ಬಂದಿದ್ದಾರೆ. ತೀವ್ರ ಕೃಷಕಾಯರಾಗಿದ್ದ ಅವರಿಗೆ ಊಟೋಪಚಾರಗಳನ್ನು ಪಕ್ಕದ ಮನೆಯವರು ನೀಡುತ್ತಿದ್ದರು. ಆ ಬಳಿಕ ಮಾಧ್ಯಮಗಳಲ್ಲಿ ವೃದ್ಧನ ಕಥೆಯ ಕುರಿತು ವರದಿಯಾದ ಬಳಿಕ ಅವರ ಸಹೋದ್ಯೋಗಿಯೊಬ್ಬರು ಪರ್ಯಾ ಯ ವ್ಯವಸ್ಥೆ ಕಲ್ಪಿಸಲು ಮುಂದಾದರು. ಮಡಿಕೇರಿಯ ಶುಂಠಿಕೊಪ್ಪದ ಅನಾಥಾಶ್ರಮವೊಂದಕ್ಕೆ ಸ್ಥಳೀಯರ ಸಹಾಯದಿಂದ ಸೇರಿಸಿದ್ದಾರೆ.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ | ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ
May 12, 2024
11:34 AM
by: The Rural Mirror ಸುದ್ದಿಜಾಲ
ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |
May 7, 2024
3:13 PM
by: ದ ರೂರಲ್ ಮಿರರ್.ಕಾಂ
ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ
ಕಗ್ಗದ ಬೆಳಕು | “ಎಲ್ಲರೊಳಗೊಂದಾಗು” ಕೃತಿ ಲೋಕಾರ್ಪಣೆ |
April 1, 2024
9:19 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror