Advertisement
ನಮ್ಮೂರ ಸುದ್ದಿ

ಒಬ್ಬಂಟಿ ವೃದ್ಧನಿಗೆ ಆಶ್ರಮ ಭಾಗ್ಯ ಕಲ್ಪಿಸಿದ ಸ್ಥಳೀಯರು

Share

ಸುಳ್ಯ:  ಮಗ ಹಾಗೂ ಪತ್ನಿ ವೃದ್ಧ ಪತಿಯನ್ನು ಬಿಟ್ಟು ಹಲವು ತಿಂಗಳ ಹಿಂದೆ ನಾಪತ್ತೆಯಾಗಿದ್ದು ಒಬ್ಬಂಟಿ ವೃದ್ಧನಿಗೆ ಸ್ಥಳೀಯರು ಮಾನವೀಯತೆ ಮೆರೆದು ಅನಾಥಾಶ್ರಮದ ಭಾಗ್ಯವನ್ನು ಕಲ್ಪಿಸಿದ್ದಾರೆ.
ಸುಳ್ಯದ ಶಾಂತಿನಗರದಲ್ಲಿ ವಾಸವಿದ್ದ ಗೋಪಾಲಕೃಷ್ಣ ಆಶ್ರಮ ಸೇರಿದ ವ್ಯಕ್ತಿಯಾಗಿದ್ದಾರೆ. ಗೋಪಾಲಕೃಷ್ಣ ಅವರ ಪತ್ನಿ ಹಾಗೂ ಮಗ ಕಳೆದ ಕೆಲವು ಸಮಯಗಳಿಂದ ನಾಪತ್ತೆಯಾಗಿದ್ದರು. ಗೋಪಾಲಕೃಷ್ಣ ಅವರ ಪುತ್ರನಿಗೆ ವ್ಯವಹಾರದ ಸಂಬಂಧ ಸಾಲವಾಗಿತ್ತು.  ಹೀಗಾಗಿ ಯಾರಿಗೂ ಹೇಳದೇ ವರ್ಷಗಳ ಹಿಂದೆ ಪರಾರಿಯಾಗಿದ್ದರು.  ಗೋಪಾಲಕೃಷ್ಣ ಅವರು ಕ್ಯಾಂಪ್ಕೋದ ನಿವೃತ್ತ ಉದ್ಯೋಗಿಯಾಗಿ ದ್ದು ಅವರ ಪತ್ನಿ  ಶಿಕ್ಷಕಿಯಾಗಿದ್ದರು. ಮಗನಿಗೆ ಸಾಲವನ್ನು ನೀಡಿದ ಸಾಲಗಾರರು ನಿವೃತ್ತ ದಂಪತಿಗಳನ್ನು ಕಾಡತೊಡಗಿ ದ್ದರು. ಈ ನಡುವೆ ಗೋಪಾಲಕೃಷ್ಣರಿಗೆ ಅಸೌಖ್ಯ ಕಾಡಿದ ಪರಿಣಾಮ ಪತಿ ಹಾಗೂ ಮನೆಯ ಜವಾಬ್ದಾರಿ ಪತ್ನಿಯ ಮೇಲೆ ಬಿದ್ದಿತ್ತು. ಸಾಲಗಾರರು ಪ್ರತಿನಿತ್ಯ ಕಾಡತೊಡಗಿದರು. ಸಾಲ ತೀರಿಸಲು ಇನ್ನಿಲ್ಲದ ಪ್ರಯತ್ನ ಮಾಡಿದರು. ಹೀಗಾಗಿ ಬಾಧೆ ತಾಳಲಾರದೇ ಗೋಪಾಲಕೃಷ್ಣರನ್ನು ಅವರ ತಮ್ಮನ ಮನೆಯಲ್ಲಿ ಸೇರಿಸಿ 2 ದಿನ ಬಿಟ್ಟು ಬರುತ್ತೇನೆ ಎಂದು ಹೇಳಿ ಹೋದ ಅವರ ಪತ್ನಿ   ಇದುವರೆಗೂ ಮರಳಿ ಬಂದಿಲ್ಲ. ಕೆಲ ದಿನ ತಮ್ಮನ ಮನೆಯಲ್ಲೇ ಕಳೆದ ಗೋಪಾಲಕೃಷ್ಣ  ನಂತರ  ಶಾಂತಿನಗರದ ಮನೆಗೆ ಬಂದಿದ್ದಾರೆ. ತೀವ್ರ ಕೃಷಕಾಯರಾಗಿದ್ದ ಅವರಿಗೆ ಊಟೋಪಚಾರಗಳನ್ನು ಪಕ್ಕದ ಮನೆಯವರು ನೀಡುತ್ತಿದ್ದರು. ಆ ಬಳಿಕ ಮಾಧ್ಯಮಗಳಲ್ಲಿ ವೃದ್ಧನ ಕಥೆಯ ಕುರಿತು ವರದಿಯಾದ ಬಳಿಕ ಅವರ ಸಹೋದ್ಯೋಗಿಯೊಬ್ಬರು ಪರ್ಯಾ ಯ ವ್ಯವಸ್ಥೆ ಕಲ್ಪಿಸಲು ಮುಂದಾದರು. ಮಡಿಕೇರಿಯ ಶುಂಠಿಕೊಪ್ಪದ ಅನಾಥಾಶ್ರಮವೊಂದಕ್ಕೆ ಸ್ಥಳೀಯರ ಸಹಾಯದಿಂದ ಸೇರಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

18 hours ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

20 hours ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

24 hours ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago