Advertisement
ನಮ್ಮೂರ ಸುದ್ದಿ

ಒಬ್ಬಂಟಿ ವೃದ್ಧನಿಗೆ ಆಶ್ರಮ ಭಾಗ್ಯ ಕಲ್ಪಿಸಿದ ಸ್ಥಳೀಯರು

Share

ಸುಳ್ಯ:  ಮಗ ಹಾಗೂ ಪತ್ನಿ ವೃದ್ಧ ಪತಿಯನ್ನು ಬಿಟ್ಟು ಹಲವು ತಿಂಗಳ ಹಿಂದೆ ನಾಪತ್ತೆಯಾಗಿದ್ದು ಒಬ್ಬಂಟಿ ವೃದ್ಧನಿಗೆ ಸ್ಥಳೀಯರು ಮಾನವೀಯತೆ ಮೆರೆದು ಅನಾಥಾಶ್ರಮದ ಭಾಗ್ಯವನ್ನು ಕಲ್ಪಿಸಿದ್ದಾರೆ.
ಸುಳ್ಯದ ಶಾಂತಿನಗರದಲ್ಲಿ ವಾಸವಿದ್ದ ಗೋಪಾಲಕೃಷ್ಣ ಆಶ್ರಮ ಸೇರಿದ ವ್ಯಕ್ತಿಯಾಗಿದ್ದಾರೆ. ಗೋಪಾಲಕೃಷ್ಣ ಅವರ ಪತ್ನಿ ಹಾಗೂ ಮಗ ಕಳೆದ ಕೆಲವು ಸಮಯಗಳಿಂದ ನಾಪತ್ತೆಯಾಗಿದ್ದರು. ಗೋಪಾಲಕೃಷ್ಣ ಅವರ ಪುತ್ರನಿಗೆ ವ್ಯವಹಾರದ ಸಂಬಂಧ ಸಾಲವಾಗಿತ್ತು.  ಹೀಗಾಗಿ ಯಾರಿಗೂ ಹೇಳದೇ ವರ್ಷಗಳ ಹಿಂದೆ ಪರಾರಿಯಾಗಿದ್ದರು.  ಗೋಪಾಲಕೃಷ್ಣ ಅವರು ಕ್ಯಾಂಪ್ಕೋದ ನಿವೃತ್ತ ಉದ್ಯೋಗಿಯಾಗಿ ದ್ದು ಅವರ ಪತ್ನಿ  ಶಿಕ್ಷಕಿಯಾಗಿದ್ದರು. ಮಗನಿಗೆ ಸಾಲವನ್ನು ನೀಡಿದ ಸಾಲಗಾರರು ನಿವೃತ್ತ ದಂಪತಿಗಳನ್ನು ಕಾಡತೊಡಗಿ ದ್ದರು. ಈ ನಡುವೆ ಗೋಪಾಲಕೃಷ್ಣರಿಗೆ ಅಸೌಖ್ಯ ಕಾಡಿದ ಪರಿಣಾಮ ಪತಿ ಹಾಗೂ ಮನೆಯ ಜವಾಬ್ದಾರಿ ಪತ್ನಿಯ ಮೇಲೆ ಬಿದ್ದಿತ್ತು. ಸಾಲಗಾರರು ಪ್ರತಿನಿತ್ಯ ಕಾಡತೊಡಗಿದರು. ಸಾಲ ತೀರಿಸಲು ಇನ್ನಿಲ್ಲದ ಪ್ರಯತ್ನ ಮಾಡಿದರು. ಹೀಗಾಗಿ ಬಾಧೆ ತಾಳಲಾರದೇ ಗೋಪಾಲಕೃಷ್ಣರನ್ನು ಅವರ ತಮ್ಮನ ಮನೆಯಲ್ಲಿ ಸೇರಿಸಿ 2 ದಿನ ಬಿಟ್ಟು ಬರುತ್ತೇನೆ ಎಂದು ಹೇಳಿ ಹೋದ ಅವರ ಪತ್ನಿ   ಇದುವರೆಗೂ ಮರಳಿ ಬಂದಿಲ್ಲ. ಕೆಲ ದಿನ ತಮ್ಮನ ಮನೆಯಲ್ಲೇ ಕಳೆದ ಗೋಪಾಲಕೃಷ್ಣ  ನಂತರ  ಶಾಂತಿನಗರದ ಮನೆಗೆ ಬಂದಿದ್ದಾರೆ. ತೀವ್ರ ಕೃಷಕಾಯರಾಗಿದ್ದ ಅವರಿಗೆ ಊಟೋಪಚಾರಗಳನ್ನು ಪಕ್ಕದ ಮನೆಯವರು ನೀಡುತ್ತಿದ್ದರು. ಆ ಬಳಿಕ ಮಾಧ್ಯಮಗಳಲ್ಲಿ ವೃದ್ಧನ ಕಥೆಯ ಕುರಿತು ವರದಿಯಾದ ಬಳಿಕ ಅವರ ಸಹೋದ್ಯೋಗಿಯೊಬ್ಬರು ಪರ್ಯಾ ಯ ವ್ಯವಸ್ಥೆ ಕಲ್ಪಿಸಲು ಮುಂದಾದರು. ಮಡಿಕೇರಿಯ ಶುಂಠಿಕೊಪ್ಪದ ಅನಾಥಾಶ್ರಮವೊಂದಕ್ಕೆ ಸ್ಥಳೀಯರ ಸಹಾಯದಿಂದ ಸೇರಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

9 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

9 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago