Advertisement
ನಮ್ಮೂರ ಸುದ್ದಿ

ಒಬ್ಬಂಟಿ ವೃದ್ಧನಿಗೆ ಆಶ್ರಮ ಭಾಗ್ಯ ಕಲ್ಪಿಸಿದ ಸ್ಥಳೀಯರು

Share

ಸುಳ್ಯ:  ಮಗ ಹಾಗೂ ಪತ್ನಿ ವೃದ್ಧ ಪತಿಯನ್ನು ಬಿಟ್ಟು ಹಲವು ತಿಂಗಳ ಹಿಂದೆ ನಾಪತ್ತೆಯಾಗಿದ್ದು ಒಬ್ಬಂಟಿ ವೃದ್ಧನಿಗೆ ಸ್ಥಳೀಯರು ಮಾನವೀಯತೆ ಮೆರೆದು ಅನಾಥಾಶ್ರಮದ ಭಾಗ್ಯವನ್ನು ಕಲ್ಪಿಸಿದ್ದಾರೆ.
ಸುಳ್ಯದ ಶಾಂತಿನಗರದಲ್ಲಿ ವಾಸವಿದ್ದ ಗೋಪಾಲಕೃಷ್ಣ ಆಶ್ರಮ ಸೇರಿದ ವ್ಯಕ್ತಿಯಾಗಿದ್ದಾರೆ. ಗೋಪಾಲಕೃಷ್ಣ ಅವರ ಪತ್ನಿ ಹಾಗೂ ಮಗ ಕಳೆದ ಕೆಲವು ಸಮಯಗಳಿಂದ ನಾಪತ್ತೆಯಾಗಿದ್ದರು. ಗೋಪಾಲಕೃಷ್ಣ ಅವರ ಪುತ್ರನಿಗೆ ವ್ಯವಹಾರದ ಸಂಬಂಧ ಸಾಲವಾಗಿತ್ತು.  ಹೀಗಾಗಿ ಯಾರಿಗೂ ಹೇಳದೇ ವರ್ಷಗಳ ಹಿಂದೆ ಪರಾರಿಯಾಗಿದ್ದರು.  ಗೋಪಾಲಕೃಷ್ಣ ಅವರು ಕ್ಯಾಂಪ್ಕೋದ ನಿವೃತ್ತ ಉದ್ಯೋಗಿಯಾಗಿ ದ್ದು ಅವರ ಪತ್ನಿ  ಶಿಕ್ಷಕಿಯಾಗಿದ್ದರು. ಮಗನಿಗೆ ಸಾಲವನ್ನು ನೀಡಿದ ಸಾಲಗಾರರು ನಿವೃತ್ತ ದಂಪತಿಗಳನ್ನು ಕಾಡತೊಡಗಿ ದ್ದರು. ಈ ನಡುವೆ ಗೋಪಾಲಕೃಷ್ಣರಿಗೆ ಅಸೌಖ್ಯ ಕಾಡಿದ ಪರಿಣಾಮ ಪತಿ ಹಾಗೂ ಮನೆಯ ಜವಾಬ್ದಾರಿ ಪತ್ನಿಯ ಮೇಲೆ ಬಿದ್ದಿತ್ತು. ಸಾಲಗಾರರು ಪ್ರತಿನಿತ್ಯ ಕಾಡತೊಡಗಿದರು. ಸಾಲ ತೀರಿಸಲು ಇನ್ನಿಲ್ಲದ ಪ್ರಯತ್ನ ಮಾಡಿದರು. ಹೀಗಾಗಿ ಬಾಧೆ ತಾಳಲಾರದೇ ಗೋಪಾಲಕೃಷ್ಣರನ್ನು ಅವರ ತಮ್ಮನ ಮನೆಯಲ್ಲಿ ಸೇರಿಸಿ 2 ದಿನ ಬಿಟ್ಟು ಬರುತ್ತೇನೆ ಎಂದು ಹೇಳಿ ಹೋದ ಅವರ ಪತ್ನಿ   ಇದುವರೆಗೂ ಮರಳಿ ಬಂದಿಲ್ಲ. ಕೆಲ ದಿನ ತಮ್ಮನ ಮನೆಯಲ್ಲೇ ಕಳೆದ ಗೋಪಾಲಕೃಷ್ಣ  ನಂತರ  ಶಾಂತಿನಗರದ ಮನೆಗೆ ಬಂದಿದ್ದಾರೆ. ತೀವ್ರ ಕೃಷಕಾಯರಾಗಿದ್ದ ಅವರಿಗೆ ಊಟೋಪಚಾರಗಳನ್ನು ಪಕ್ಕದ ಮನೆಯವರು ನೀಡುತ್ತಿದ್ದರು. ಆ ಬಳಿಕ ಮಾಧ್ಯಮಗಳಲ್ಲಿ ವೃದ್ಧನ ಕಥೆಯ ಕುರಿತು ವರದಿಯಾದ ಬಳಿಕ ಅವರ ಸಹೋದ್ಯೋಗಿಯೊಬ್ಬರು ಪರ್ಯಾ ಯ ವ್ಯವಸ್ಥೆ ಕಲ್ಪಿಸಲು ಮುಂದಾದರು. ಮಡಿಕೇರಿಯ ಶುಂಠಿಕೊಪ್ಪದ ಅನಾಥಾಶ್ರಮವೊಂದಕ್ಕೆ ಸ್ಥಳೀಯರ ಸಹಾಯದಿಂದ ಸೇರಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

2 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

2 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

13 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

14 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

17 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago