ಸುಳ್ಯ: ಮಗ ಹಾಗೂ ಪತ್ನಿ ವೃದ್ಧ ಪತಿಯನ್ನು ಬಿಟ್ಟು ಹಲವು ತಿಂಗಳ ಹಿಂದೆ ನಾಪತ್ತೆಯಾಗಿದ್ದು ಒಬ್ಬಂಟಿ ವೃದ್ಧನಿಗೆ ಸ್ಥಳೀಯರು ಮಾನವೀಯತೆ ಮೆರೆದು ಅನಾಥಾಶ್ರಮದ ಭಾಗ್ಯವನ್ನು ಕಲ್ಪಿಸಿದ್ದಾರೆ.
ಸುಳ್ಯದ ಶಾಂತಿನಗರದಲ್ಲಿ ವಾಸವಿದ್ದ ಗೋಪಾಲಕೃಷ್ಣ ಆಶ್ರಮ ಸೇರಿದ ವ್ಯಕ್ತಿಯಾಗಿದ್ದಾರೆ. ಗೋಪಾಲಕೃಷ್ಣ ಅವರ ಪತ್ನಿ ಹಾಗೂ ಮಗ ಕಳೆದ ಕೆಲವು ಸಮಯಗಳಿಂದ ನಾಪತ್ತೆಯಾಗಿದ್ದರು. ಗೋಪಾಲಕೃಷ್ಣ ಅವರ ಪುತ್ರನಿಗೆ ವ್ಯವಹಾರದ ಸಂಬಂಧ ಸಾಲವಾಗಿತ್ತು. ಹೀಗಾಗಿ ಯಾರಿಗೂ ಹೇಳದೇ ವರ್ಷಗಳ ಹಿಂದೆ ಪರಾರಿಯಾಗಿದ್ದರು. ಗೋಪಾಲಕೃಷ್ಣ ಅವರು ಕ್ಯಾಂಪ್ಕೋದ ನಿವೃತ್ತ ಉದ್ಯೋಗಿಯಾಗಿ ದ್ದು ಅವರ ಪತ್ನಿ ಶಿಕ್ಷಕಿಯಾಗಿದ್ದರು. ಮಗನಿಗೆ ಸಾಲವನ್ನು ನೀಡಿದ ಸಾಲಗಾರರು ನಿವೃತ್ತ ದಂಪತಿಗಳನ್ನು ಕಾಡತೊಡಗಿ ದ್ದರು. ಈ ನಡುವೆ ಗೋಪಾಲಕೃಷ್ಣರಿಗೆ ಅಸೌಖ್ಯ ಕಾಡಿದ ಪರಿಣಾಮ ಪತಿ ಹಾಗೂ ಮನೆಯ ಜವಾಬ್ದಾರಿ ಪತ್ನಿಯ ಮೇಲೆ ಬಿದ್ದಿತ್ತು. ಸಾಲಗಾರರು ಪ್ರತಿನಿತ್ಯ ಕಾಡತೊಡಗಿದರು. ಸಾಲ ತೀರಿಸಲು ಇನ್ನಿಲ್ಲದ ಪ್ರಯತ್ನ ಮಾಡಿದರು. ಹೀಗಾಗಿ ಬಾಧೆ ತಾಳಲಾರದೇ ಗೋಪಾಲಕೃಷ್ಣರನ್ನು ಅವರ ತಮ್ಮನ ಮನೆಯಲ್ಲಿ ಸೇರಿಸಿ 2 ದಿನ ಬಿಟ್ಟು ಬರುತ್ತೇನೆ ಎಂದು ಹೇಳಿ ಹೋದ ಅವರ ಪತ್ನಿ ಇದುವರೆಗೂ ಮರಳಿ ಬಂದಿಲ್ಲ. ಕೆಲ ದಿನ ತಮ್ಮನ ಮನೆಯಲ್ಲೇ ಕಳೆದ ಗೋಪಾಲಕೃಷ್ಣ ನಂತರ ಶಾಂತಿನಗರದ ಮನೆಗೆ ಬಂದಿದ್ದಾರೆ. ತೀವ್ರ ಕೃಷಕಾಯರಾಗಿದ್ದ ಅವರಿಗೆ ಊಟೋಪಚಾರಗಳನ್ನು ಪಕ್ಕದ ಮನೆಯವರು ನೀಡುತ್ತಿದ್ದರು. ಆ ಬಳಿಕ ಮಾಧ್ಯಮಗಳಲ್ಲಿ ವೃದ್ಧನ ಕಥೆಯ ಕುರಿತು ವರದಿಯಾದ ಬಳಿಕ ಅವರ ಸಹೋದ್ಯೋಗಿಯೊಬ್ಬರು ಪರ್ಯಾ ಯ ವ್ಯವಸ್ಥೆ ಕಲ್ಪಿಸಲು ಮುಂದಾದರು. ಮಡಿಕೇರಿಯ ಶುಂಠಿಕೊಪ್ಪದ ಅನಾಥಾಶ್ರಮವೊಂದಕ್ಕೆ ಸ್ಥಳೀಯರ ಸಹಾಯದಿಂದ ಸೇರಿಸಿದ್ದಾರೆ.
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…