ಒಲಾರ್ಚಸ್ ಮಿಲಿಯಾರಿಸ್ ಮಿಲಿಯಾರಿಸ್ ಸ್ಪಾಟೆಡ್ ಕಾಫಿ ಮಿಡತೆ ಅಪಾಯಕಾರಿವಲ್ಲ

June 5, 2020
10:51 AM

ಮಂಗಳೂರು : ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದಲ್ಲಿ ಸಂಗ್ರಹಿಸಿರುವ ಮಿಡತೆ ಜಾತಿಗಳನ್ನು ಸೆಂಟ್ರಲ್ ಪ್ಲಾಂಟೇಷನ್ ಕ್ರಾಪ್ಸ್ ರಿಸರ್ಚ್ ಇನ್ಸ್‍ಟಿಟ್ಯೂಟ್, ನ್ಯಾಷನಲ್ ಬ್ಯುರೋ ಆಫ್ ಅಗ್ರಿಕಲ್ಚರ್ ಇನ್‍ಸೆಕ್ಟ್ ರಿಸೋರ್ಸ್‍ಸ್, ಬೆಂಗಳೂರು ಹಾಗೂ ಗಾಂಧಿ ಕೃಷಿ ವಿಜ್ಞಾನ ಕೇಂದ್ರ, ಬೆಂಗಳೂರಿಗೆ ಕಳುಹಿಸಳಾಗಿತ್ತು.

ಕೀಟಶಾಸ್ತ್ರಜ್ಞರಿಂದ ಬಂದಿರುವ ವರದಿಯ ಪ್ರಕಾರ ಕೀಟವು ಒಲಾರ್ಚಸ್ ಮಿಲಿಯಾರಿಸ್ ಮಿಲಿಯಾರಿಸ್ಸ್  ಸ್ಪಾಟೆಡ್ ಕಾಫಿ ಮಿಡತೆ ಎಂದು ಗುರುತಿಸಲ್ಪಟ್ಟಿದೆ.

ಈ ಮಿಡತೆಗಳು ದಕ್ಷಿಣ ಭಾರತದ ಪಶ್ಚಿಮಘಟ್ಟಗಳಲ್ಲಿ ಕಾಣಿಸಿಕೊಳ್ಳುತ್ತವೆ ಹಾಗೂ ಅಳವಿನಂಚಿನಲ್ಲಿರುವ ಕೀಟವಾಗಿರುತ್ತದೆ (ಇಂಟರ್‍ನ್ಯಾಷನಲ್ ಯುನಿಯನ್ ಫಾರ್ ಕನ್ಸರ್‍ವೇಷನ್ ಆಪ್ ನೇಚರ್). ಈ ಮಿಡತೆ  ಕಾಫಿ, ಬಾಳೆ, ಗೇರು, ಅಡಿಕೆ, ತೆಂಗು, ಏಲಕ್ಕಿ ಹಾಗೂ ಭತ್ತದ ಬೆಳೆಯ ಮೇಲೆ ಕಾಣಿಸುವ ಸಾಧ್ಯತೆಗಳಿದ್ದು, ಇವುಗಳು ಯಾವುದೇ ಅಪಾಯಕಾರಿಯಾಗಿರುವುದಿಲ್ಲ. ಭೂಮಿಯ ಉಳುಮೆಯಿಂದ ಇವುಗಳು ಮೊಟ್ಟೆ ಹಂತದಲ್ಲಿ ನಿರ್ವಹಣೆ ಮಾಡಬಹುದಾಗಿರುತ್ತದೆ. ಮರಿ ಮಿಡತೆಗಳನ್ನು ಹಿಡಿದು ಬೇರೆಡೆಗೆ ಬಿಡಬಹುದಾಗಿದೆ. ಅಳವಿನಂಚಿನಲ್ಲಿರುವ ಈ ಕೀಟದ ನಿರ್ವಹಣೆಯನ್ನು ಎಚ್ಚರಿಕೆಯಿಂದ ಮಾಡಬೇಕಾಗಿದೆ.

ಕೀಟಬಾಧೆಯಿಂದ ಬೆಳೆ ನಾಶವಾದ ಸಂದರ್ಭದಲ್ಲಿ ಬೇವಿನ ಮೂಲದ ಕೀಟನಾಶಕಗಳನ್ನು ಅಥವಾ ಲ್ಯಾಂಬ್ಡಾ ಸೈಹಾಲೋಥ್ರಿನ್ 5 ಇಸಿ 1.5 ಮಿ.ಲೀ. ಪ್ರತಿ ಒಂದು ಲೀಟರ್ ನೀರಿನಲ್ಲಿ ಬೆರೆಸಿ ಸಿಂಪರಣೆ ಮಾಡಬಹುದಾಗಿದೆ. ಅಳವಿನಂಚಿನಲ್ಲಿರುವ ಈ ಕೀಟದ ಸಂರಕ್ಷಣೆ ಅವಶ್ಯವಿರುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕರು ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಆರಂಭ ಭರವಸೆ ಮೂಡಿಸಿದರೂ ಎಲ್‌ನಿನೊ ಆತಂಕ…! 2026 ರ ಮಳೆಯ ಭವಿಷ್ಯ ನಿರ್ಧರಿಸುವ ಹವಾಮಾನ ಸಂಕೇತಗಳೇನು?
June 10, 2026
6:47 AM
by: ದ ರೂರಲ್ ಮಿರರ್.ಕಾಂ
₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!
June 10, 2026
6:39 AM
by: ಮಿರರ್‌ ಡೆಸ್ಕ್
ಹಲಸು ಅಭಿವೃದ್ಧಿಗೆ ರಾಷ್ಟ್ರೀಯ ಮಂಡಳಿ ಸ್ಥಾಪಿಸಲು ಮಾಜಿ ಪ್ರಧಾನಿ ದೇವೇ ಗೌಡ ಒತ್ತಾಯ
June 10, 2026
6:32 AM
by: ದ ರೂರಲ್ ಮಿರರ್.ಕಾಂ
ಕಾಪುವಿನಲ್ಲಿ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆ ಯಶಸ್ವಿ – ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಆಯೋಜನೆ
June 9, 2026
11:58 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror