Advertisement
ಸುದ್ದಿಗಳು

ಒಲಾರ್ಚಸ್ ಮಿಲಿಯಾರಿಸ್ ಮಿಲಿಯಾರಿಸ್ ಸ್ಪಾಟೆಡ್ ಕಾಫಿ ಮಿಡತೆ ಅಪಾಯಕಾರಿವಲ್ಲ

Share

ಮಂಗಳೂರು : ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದಲ್ಲಿ ಸಂಗ್ರಹಿಸಿರುವ ಮಿಡತೆ ಜಾತಿಗಳನ್ನು ಸೆಂಟ್ರಲ್ ಪ್ಲಾಂಟೇಷನ್ ಕ್ರಾಪ್ಸ್ ರಿಸರ್ಚ್ ಇನ್ಸ್‍ಟಿಟ್ಯೂಟ್, ನ್ಯಾಷನಲ್ ಬ್ಯುರೋ ಆಫ್ ಅಗ್ರಿಕಲ್ಚರ್ ಇನ್‍ಸೆಕ್ಟ್ ರಿಸೋರ್ಸ್‍ಸ್, ಬೆಂಗಳೂರು ಹಾಗೂ ಗಾಂಧಿ ಕೃಷಿ ವಿಜ್ಞಾನ ಕೇಂದ್ರ, ಬೆಂಗಳೂರಿಗೆ ಕಳುಹಿಸಳಾಗಿತ್ತು.

ಕೀಟಶಾಸ್ತ್ರಜ್ಞರಿಂದ ಬಂದಿರುವ ವರದಿಯ ಪ್ರಕಾರ ಕೀಟವು ಒಲಾರ್ಚಸ್ ಮಿಲಿಯಾರಿಸ್ ಮಿಲಿಯಾರಿಸ್ಸ್  ಸ್ಪಾಟೆಡ್ ಕಾಫಿ ಮಿಡತೆ ಎಂದು ಗುರುತಿಸಲ್ಪಟ್ಟಿದೆ.

ಈ ಮಿಡತೆಗಳು ದಕ್ಷಿಣ ಭಾರತದ ಪಶ್ಚಿಮಘಟ್ಟಗಳಲ್ಲಿ ಕಾಣಿಸಿಕೊಳ್ಳುತ್ತವೆ ಹಾಗೂ ಅಳವಿನಂಚಿನಲ್ಲಿರುವ ಕೀಟವಾಗಿರುತ್ತದೆ (ಇಂಟರ್‍ನ್ಯಾಷನಲ್ ಯುನಿಯನ್ ಫಾರ್ ಕನ್ಸರ್‍ವೇಷನ್ ಆಪ್ ನೇಚರ್). ಈ ಮಿಡತೆ  ಕಾಫಿ, ಬಾಳೆ, ಗೇರು, ಅಡಿಕೆ, ತೆಂಗು, ಏಲಕ್ಕಿ ಹಾಗೂ ಭತ್ತದ ಬೆಳೆಯ ಮೇಲೆ ಕಾಣಿಸುವ ಸಾಧ್ಯತೆಗಳಿದ್ದು, ಇವುಗಳು ಯಾವುದೇ ಅಪಾಯಕಾರಿಯಾಗಿರುವುದಿಲ್ಲ. ಭೂಮಿಯ ಉಳುಮೆಯಿಂದ ಇವುಗಳು ಮೊಟ್ಟೆ ಹಂತದಲ್ಲಿ ನಿರ್ವಹಣೆ ಮಾಡಬಹುದಾಗಿರುತ್ತದೆ. ಮರಿ ಮಿಡತೆಗಳನ್ನು ಹಿಡಿದು ಬೇರೆಡೆಗೆ ಬಿಡಬಹುದಾಗಿದೆ. ಅಳವಿನಂಚಿನಲ್ಲಿರುವ ಈ ಕೀಟದ ನಿರ್ವಹಣೆಯನ್ನು ಎಚ್ಚರಿಕೆಯಿಂದ ಮಾಡಬೇಕಾಗಿದೆ.

ಕೀಟಬಾಧೆಯಿಂದ ಬೆಳೆ ನಾಶವಾದ ಸಂದರ್ಭದಲ್ಲಿ ಬೇವಿನ ಮೂಲದ ಕೀಟನಾಶಕಗಳನ್ನು ಅಥವಾ ಲ್ಯಾಂಬ್ಡಾ ಸೈಹಾಲೋಥ್ರಿನ್ 5 ಇಸಿ 1.5 ಮಿ.ಲೀ. ಪ್ರತಿ ಒಂದು ಲೀಟರ್ ನೀರಿನಲ್ಲಿ ಬೆರೆಸಿ ಸಿಂಪರಣೆ ಮಾಡಬಹುದಾಗಿದೆ. ಅಳವಿನಂಚಿನಲ್ಲಿರುವ ಈ ಕೀಟದ ಸಂರಕ್ಷಣೆ ಅವಶ್ಯವಿರುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕರು ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

5 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

5 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

15 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

16 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

1 day ago

ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ

ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…

1 day ago