Advertisement
ಸುದ್ದಿಗಳು

ಒಲಾರ್ಚಸ್ ಮಿಲಿಯಾರಿಸ್ ಮಿಲಿಯಾರಿಸ್ ಸ್ಪಾಟೆಡ್ ಕಾಫಿ ಮಿಡತೆ ಅಪಾಯಕಾರಿವಲ್ಲ

Share

ಮಂಗಳೂರು : ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದಲ್ಲಿ ಸಂಗ್ರಹಿಸಿರುವ ಮಿಡತೆ ಜಾತಿಗಳನ್ನು ಸೆಂಟ್ರಲ್ ಪ್ಲಾಂಟೇಷನ್ ಕ್ರಾಪ್ಸ್ ರಿಸರ್ಚ್ ಇನ್ಸ್‍ಟಿಟ್ಯೂಟ್, ನ್ಯಾಷನಲ್ ಬ್ಯುರೋ ಆಫ್ ಅಗ್ರಿಕಲ್ಚರ್ ಇನ್‍ಸೆಕ್ಟ್ ರಿಸೋರ್ಸ್‍ಸ್, ಬೆಂಗಳೂರು ಹಾಗೂ ಗಾಂಧಿ ಕೃಷಿ ವಿಜ್ಞಾನ ಕೇಂದ್ರ, ಬೆಂಗಳೂರಿಗೆ ಕಳುಹಿಸಳಾಗಿತ್ತು.

ಕೀಟಶಾಸ್ತ್ರಜ್ಞರಿಂದ ಬಂದಿರುವ ವರದಿಯ ಪ್ರಕಾರ ಕೀಟವು ಒಲಾರ್ಚಸ್ ಮಿಲಿಯಾರಿಸ್ ಮಿಲಿಯಾರಿಸ್ಸ್  ಸ್ಪಾಟೆಡ್ ಕಾಫಿ ಮಿಡತೆ ಎಂದು ಗುರುತಿಸಲ್ಪಟ್ಟಿದೆ.

ಈ ಮಿಡತೆಗಳು ದಕ್ಷಿಣ ಭಾರತದ ಪಶ್ಚಿಮಘಟ್ಟಗಳಲ್ಲಿ ಕಾಣಿಸಿಕೊಳ್ಳುತ್ತವೆ ಹಾಗೂ ಅಳವಿನಂಚಿನಲ್ಲಿರುವ ಕೀಟವಾಗಿರುತ್ತದೆ (ಇಂಟರ್‍ನ್ಯಾಷನಲ್ ಯುನಿಯನ್ ಫಾರ್ ಕನ್ಸರ್‍ವೇಷನ್ ಆಪ್ ನೇಚರ್). ಈ ಮಿಡತೆ  ಕಾಫಿ, ಬಾಳೆ, ಗೇರು, ಅಡಿಕೆ, ತೆಂಗು, ಏಲಕ್ಕಿ ಹಾಗೂ ಭತ್ತದ ಬೆಳೆಯ ಮೇಲೆ ಕಾಣಿಸುವ ಸಾಧ್ಯತೆಗಳಿದ್ದು, ಇವುಗಳು ಯಾವುದೇ ಅಪಾಯಕಾರಿಯಾಗಿರುವುದಿಲ್ಲ. ಭೂಮಿಯ ಉಳುಮೆಯಿಂದ ಇವುಗಳು ಮೊಟ್ಟೆ ಹಂತದಲ್ಲಿ ನಿರ್ವಹಣೆ ಮಾಡಬಹುದಾಗಿರುತ್ತದೆ. ಮರಿ ಮಿಡತೆಗಳನ್ನು ಹಿಡಿದು ಬೇರೆಡೆಗೆ ಬಿಡಬಹುದಾಗಿದೆ. ಅಳವಿನಂಚಿನಲ್ಲಿರುವ ಈ ಕೀಟದ ನಿರ್ವಹಣೆಯನ್ನು ಎಚ್ಚರಿಕೆಯಿಂದ ಮಾಡಬೇಕಾಗಿದೆ.

ಕೀಟಬಾಧೆಯಿಂದ ಬೆಳೆ ನಾಶವಾದ ಸಂದರ್ಭದಲ್ಲಿ ಬೇವಿನ ಮೂಲದ ಕೀಟನಾಶಕಗಳನ್ನು ಅಥವಾ ಲ್ಯಾಂಬ್ಡಾ ಸೈಹಾಲೋಥ್ರಿನ್ 5 ಇಸಿ 1.5 ಮಿ.ಲೀ. ಪ್ರತಿ ಒಂದು ಲೀಟರ್ ನೀರಿನಲ್ಲಿ ಬೆರೆಸಿ ಸಿಂಪರಣೆ ಮಾಡಬಹುದಾಗಿದೆ. ಅಳವಿನಂಚಿನಲ್ಲಿರುವ ಈ ಕೀಟದ ಸಂರಕ್ಷಣೆ ಅವಶ್ಯವಿರುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕರು ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

52 minutes ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

18 hours ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

1 day ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

1 day ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

3 days ago