ಒಳಚರಂಡಿಯ 2.87 ಕೋಟಿ ರೂಪಾಯಿ ವ್ಯರ್ಥ : ವೆಂಕಪ್ಪ ಗೌಡ

May 10, 2019
6:44 PM

ಸುಳ್ಯ: 13 ವರ್ಷಗಳ ಹಿಂದೆ ಆರಂಭಗೊಂಡು ಕುಂಟುತ್ತಾ ಸಾಗಿದರೂ ಸುಳ್ಯ ನಗರದಲ್ಲಿ ಒಳಚರಂಡಿ ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗಿಲ್ಲ. ಅಸಮರ್ಪಕ ಕಾಮಗಾರಿಯಿಂದ,ಒಳಚರಂಡಿಯ ಒಳಗಡೆ ಹರಿದು ಹೋಗಬೇಕಾಗಿದ್ದ ತ್ಯಾಜ್ಯ, ಕೊಳಚೆ ನೀರು ಕಣಿವೆಯಲ್ಲಿ ಹರಿದು ಕಂದಡ್ಕ ಹೊಳೆಗೆ ಸೇರಿ ಅದರ ನೀರು ಮಲೀನಗೊಂಡು ಪಯಸ್ವಿನಿ ನದಿ ಸೇರಿ ಮತ್ತೆ ಅದೇ ನೀರನ್ನು ಸುಳ್ಯದ ತಳಭಾಗದ ಜನ ಕುಡಿಯುವಂತಾಗಿದೆ. ಇದರಿಂದ ಒಳಚರಂಡಿ ಯೋಜನೆಗೆ ಬಳಸಿದ 2.87 ಕೋಟಿ ರೂ ವ್ಯರ್ಥವಾಗಿದೆ ಎಂದು ಕೆ.ಪಿ.ಸಿ.ಸಿ. ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಹೇಳಿದ್ದಾರೆ.

ಸುಳ್ಯ ನಗರದ ಒಳಚರಂಡಿ ಯೋಜನೆ ಕಾರ್ಯಗತ ಸಂಪೂರ್ಣಗೊಂಡಿದೆ ಎಂದು ನಗರ ಆಡಳಿತ ಹೇಳುತ್ತಿದ್ದರೂ ಕಾಮಗಾರಿಯಿಂದ ನಗರಕ್ಕೆ ಯಾವುದೇ ಪ್ರಯೋಜನ ಇಲ್ಲದಂತಾಗಿದೆ. ಜಯನಗರದಲ್ಲಿರುವ ಇದರ ಶುದ್ದೀಕರಣ ಘಟಕ ಪಾಳು ಬಿದ್ದಿರುವುದು ಕಂಡು ಬಂದಿದೆ. ಇದರಿಂದ 2.87 ಕೋಟಿ ಹಣ ಎಲ್ಲಿ ಹೋಗಿದೆ ಎಂಬುದರ ಬಗ್ಗೆ ಆಡಳಿತದಲ್ಲಿ ಇದ್ದವರು ಜನತೆಗೆ ತಿಳಿಸಬೇಕಾಗಿದೆ ಎಂದರು.ಕಲ್ಚರ್ಪೆಯಲ್ಲಿ ಹಾಕಲಾಗಿದ್ದ ನಗರದ ಕಸವನ್ನು ಸಂಸ್ಕರಣೆ ಮಾಡುವ ಯೋಜನೆಗೆಂದು ಲಕ್ಷಾಂತರ ಹಣ ವ್ಯಯ ಮಾಡಲಾಗಿದ್ದರೂ ವಾಸ್ತವವಾಗಿ ಒಂದು ಕಟ್ಟಡವನ್ನು ಹೊರತುಪಡಿಸಿದರೆ ಕಸ ನಿರ್ವಹಣೆಗೆ ಕೈಗೊಂಡ ವೈಜ್ಞಾನಿಕ ಕ್ರಮ ಶೂನ್ಯವಾಗಿದೆ. ತ್ಯಾಜ್ಯದ ಮಲಿನಗೊಂಡ ನೀರು ಪಯಸ್ವಿನಿ ನದಿಗೆ ಹರಿದು ಅದನ್ನೇ ನಗರದ ಜನತೆ ಕುಡಿಯುವಂತಾಗಿದ್ದು ನಗರದ ಜನತೆಯ ದುರಂತವೇ ಸರಿ ಎಂದು ಅವರು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ
June 28, 2026
10:21 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ
June 28, 2026
7:21 AM
by: ಪ್ರಬಂಧ ಅಂಬುತೀರ್ಥ
ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ
ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ
June 27, 2026
11:20 PM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror