Advertisement
ಸುದ್ದಿಗಳು

ಒಳಚರಂಡಿಯ 2.87 ಕೋಟಿ ರೂಪಾಯಿ ವ್ಯರ್ಥ : ವೆಂಕಪ್ಪ ಗೌಡ

Share

ಸುಳ್ಯ: 13 ವರ್ಷಗಳ ಹಿಂದೆ ಆರಂಭಗೊಂಡು ಕುಂಟುತ್ತಾ ಸಾಗಿದರೂ ಸುಳ್ಯ ನಗರದಲ್ಲಿ ಒಳಚರಂಡಿ ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗಿಲ್ಲ. ಅಸಮರ್ಪಕ ಕಾಮಗಾರಿಯಿಂದ,ಒಳಚರಂಡಿಯ ಒಳಗಡೆ ಹರಿದು ಹೋಗಬೇಕಾಗಿದ್ದ ತ್ಯಾಜ್ಯ, ಕೊಳಚೆ ನೀರು ಕಣಿವೆಯಲ್ಲಿ ಹರಿದು ಕಂದಡ್ಕ ಹೊಳೆಗೆ ಸೇರಿ ಅದರ ನೀರು ಮಲೀನಗೊಂಡು ಪಯಸ್ವಿನಿ ನದಿ ಸೇರಿ ಮತ್ತೆ ಅದೇ ನೀರನ್ನು ಸುಳ್ಯದ ತಳಭಾಗದ ಜನ ಕುಡಿಯುವಂತಾಗಿದೆ. ಇದರಿಂದ ಒಳಚರಂಡಿ ಯೋಜನೆಗೆ ಬಳಸಿದ 2.87 ಕೋಟಿ ರೂ ವ್ಯರ್ಥವಾಗಿದೆ ಎಂದು ಕೆ.ಪಿ.ಸಿ.ಸಿ. ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಹೇಳಿದ್ದಾರೆ.

Advertisement

ಸುಳ್ಯ ನಗರದ ಒಳಚರಂಡಿ ಯೋಜನೆ ಕಾರ್ಯಗತ ಸಂಪೂರ್ಣಗೊಂಡಿದೆ ಎಂದು ನಗರ ಆಡಳಿತ ಹೇಳುತ್ತಿದ್ದರೂ ಕಾಮಗಾರಿಯಿಂದ ನಗರಕ್ಕೆ ಯಾವುದೇ ಪ್ರಯೋಜನ ಇಲ್ಲದಂತಾಗಿದೆ. ಜಯನಗರದಲ್ಲಿರುವ ಇದರ ಶುದ್ದೀಕರಣ ಘಟಕ ಪಾಳು ಬಿದ್ದಿರುವುದು ಕಂಡು ಬಂದಿದೆ. ಇದರಿಂದ 2.87 ಕೋಟಿ ಹಣ ಎಲ್ಲಿ ಹೋಗಿದೆ ಎಂಬುದರ ಬಗ್ಗೆ ಆಡಳಿತದಲ್ಲಿ ಇದ್ದವರು ಜನತೆಗೆ ತಿಳಿಸಬೇಕಾಗಿದೆ ಎಂದರು.ಕಲ್ಚರ್ಪೆಯಲ್ಲಿ ಹಾಕಲಾಗಿದ್ದ ನಗರದ ಕಸವನ್ನು ಸಂಸ್ಕರಣೆ ಮಾಡುವ ಯೋಜನೆಗೆಂದು ಲಕ್ಷಾಂತರ ಹಣ ವ್ಯಯ ಮಾಡಲಾಗಿದ್ದರೂ ವಾಸ್ತವವಾಗಿ ಒಂದು ಕಟ್ಟಡವನ್ನು ಹೊರತುಪಡಿಸಿದರೆ ಕಸ ನಿರ್ವಹಣೆಗೆ ಕೈಗೊಂಡ ವೈಜ್ಞಾನಿಕ ಕ್ರಮ ಶೂನ್ಯವಾಗಿದೆ. ತ್ಯಾಜ್ಯದ ಮಲಿನಗೊಂಡ ನೀರು ಪಯಸ್ವಿನಿ ನದಿಗೆ ಹರಿದು ಅದನ್ನೇ ನಗರದ ಜನತೆ ಕುಡಿಯುವಂತಾಗಿದ್ದು ನಗರದ ಜನತೆಯ ದುರಂತವೇ ಸರಿ ಎಂದು ಅವರು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

13 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

19 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

23 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

24 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

24 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

1 day ago