Advertisement
ಸುದ್ದಿಗಳು

ಒಳಚರಂಡಿಯ 2.87 ಕೋಟಿ ರೂಪಾಯಿ ವ್ಯರ್ಥ : ವೆಂಕಪ್ಪ ಗೌಡ

Share

ಸುಳ್ಯ: 13 ವರ್ಷಗಳ ಹಿಂದೆ ಆರಂಭಗೊಂಡು ಕುಂಟುತ್ತಾ ಸಾಗಿದರೂ ಸುಳ್ಯ ನಗರದಲ್ಲಿ ಒಳಚರಂಡಿ ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗಿಲ್ಲ. ಅಸಮರ್ಪಕ ಕಾಮಗಾರಿಯಿಂದ,ಒಳಚರಂಡಿಯ ಒಳಗಡೆ ಹರಿದು ಹೋಗಬೇಕಾಗಿದ್ದ ತ್ಯಾಜ್ಯ, ಕೊಳಚೆ ನೀರು ಕಣಿವೆಯಲ್ಲಿ ಹರಿದು ಕಂದಡ್ಕ ಹೊಳೆಗೆ ಸೇರಿ ಅದರ ನೀರು ಮಲೀನಗೊಂಡು ಪಯಸ್ವಿನಿ ನದಿ ಸೇರಿ ಮತ್ತೆ ಅದೇ ನೀರನ್ನು ಸುಳ್ಯದ ತಳಭಾಗದ ಜನ ಕುಡಿಯುವಂತಾಗಿದೆ. ಇದರಿಂದ ಒಳಚರಂಡಿ ಯೋಜನೆಗೆ ಬಳಸಿದ 2.87 ಕೋಟಿ ರೂ ವ್ಯರ್ಥವಾಗಿದೆ ಎಂದು ಕೆ.ಪಿ.ಸಿ.ಸಿ. ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಹೇಳಿದ್ದಾರೆ.

ಸುಳ್ಯ ನಗರದ ಒಳಚರಂಡಿ ಯೋಜನೆ ಕಾರ್ಯಗತ ಸಂಪೂರ್ಣಗೊಂಡಿದೆ ಎಂದು ನಗರ ಆಡಳಿತ ಹೇಳುತ್ತಿದ್ದರೂ ಕಾಮಗಾರಿಯಿಂದ ನಗರಕ್ಕೆ ಯಾವುದೇ ಪ್ರಯೋಜನ ಇಲ್ಲದಂತಾಗಿದೆ. ಜಯನಗರದಲ್ಲಿರುವ ಇದರ ಶುದ್ದೀಕರಣ ಘಟಕ ಪಾಳು ಬಿದ್ದಿರುವುದು ಕಂಡು ಬಂದಿದೆ. ಇದರಿಂದ 2.87 ಕೋಟಿ ಹಣ ಎಲ್ಲಿ ಹೋಗಿದೆ ಎಂಬುದರ ಬಗ್ಗೆ ಆಡಳಿತದಲ್ಲಿ ಇದ್ದವರು ಜನತೆಗೆ ತಿಳಿಸಬೇಕಾಗಿದೆ ಎಂದರು.ಕಲ್ಚರ್ಪೆಯಲ್ಲಿ ಹಾಕಲಾಗಿದ್ದ ನಗರದ ಕಸವನ್ನು ಸಂಸ್ಕರಣೆ ಮಾಡುವ ಯೋಜನೆಗೆಂದು ಲಕ್ಷಾಂತರ ಹಣ ವ್ಯಯ ಮಾಡಲಾಗಿದ್ದರೂ ವಾಸ್ತವವಾಗಿ ಒಂದು ಕಟ್ಟಡವನ್ನು ಹೊರತುಪಡಿಸಿದರೆ ಕಸ ನಿರ್ವಹಣೆಗೆ ಕೈಗೊಂಡ ವೈಜ್ಞಾನಿಕ ಕ್ರಮ ಶೂನ್ಯವಾಗಿದೆ. ತ್ಯಾಜ್ಯದ ಮಲಿನಗೊಂಡ ನೀರು ಪಯಸ್ವಿನಿ ನದಿಗೆ ಹರಿದು ಅದನ್ನೇ ನಗರದ ಜನತೆ ಕುಡಿಯುವಂತಾಗಿದ್ದು ನಗರದ ಜನತೆಯ ದುರಂತವೇ ಸರಿ ಎಂದು ಅವರು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

7 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

12 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

16 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

20 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

2 days ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago