Advertisement
ಸುದ್ದಿಗಳು

ಒಳಚರಂಡಿಯ 2.87 ಕೋಟಿ ರೂಪಾಯಿ ವ್ಯರ್ಥ : ವೆಂಕಪ್ಪ ಗೌಡ

Share

ಸುಳ್ಯ: 13 ವರ್ಷಗಳ ಹಿಂದೆ ಆರಂಭಗೊಂಡು ಕುಂಟುತ್ತಾ ಸಾಗಿದರೂ ಸುಳ್ಯ ನಗರದಲ್ಲಿ ಒಳಚರಂಡಿ ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗಿಲ್ಲ. ಅಸಮರ್ಪಕ ಕಾಮಗಾರಿಯಿಂದ,ಒಳಚರಂಡಿಯ ಒಳಗಡೆ ಹರಿದು ಹೋಗಬೇಕಾಗಿದ್ದ ತ್ಯಾಜ್ಯ, ಕೊಳಚೆ ನೀರು ಕಣಿವೆಯಲ್ಲಿ ಹರಿದು ಕಂದಡ್ಕ ಹೊಳೆಗೆ ಸೇರಿ ಅದರ ನೀರು ಮಲೀನಗೊಂಡು ಪಯಸ್ವಿನಿ ನದಿ ಸೇರಿ ಮತ್ತೆ ಅದೇ ನೀರನ್ನು ಸುಳ್ಯದ ತಳಭಾಗದ ಜನ ಕುಡಿಯುವಂತಾಗಿದೆ. ಇದರಿಂದ ಒಳಚರಂಡಿ ಯೋಜನೆಗೆ ಬಳಸಿದ 2.87 ಕೋಟಿ ರೂ ವ್ಯರ್ಥವಾಗಿದೆ ಎಂದು ಕೆ.ಪಿ.ಸಿ.ಸಿ. ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಹೇಳಿದ್ದಾರೆ.

ಸುಳ್ಯ ನಗರದ ಒಳಚರಂಡಿ ಯೋಜನೆ ಕಾರ್ಯಗತ ಸಂಪೂರ್ಣಗೊಂಡಿದೆ ಎಂದು ನಗರ ಆಡಳಿತ ಹೇಳುತ್ತಿದ್ದರೂ ಕಾಮಗಾರಿಯಿಂದ ನಗರಕ್ಕೆ ಯಾವುದೇ ಪ್ರಯೋಜನ ಇಲ್ಲದಂತಾಗಿದೆ. ಜಯನಗರದಲ್ಲಿರುವ ಇದರ ಶುದ್ದೀಕರಣ ಘಟಕ ಪಾಳು ಬಿದ್ದಿರುವುದು ಕಂಡು ಬಂದಿದೆ. ಇದರಿಂದ 2.87 ಕೋಟಿ ಹಣ ಎಲ್ಲಿ ಹೋಗಿದೆ ಎಂಬುದರ ಬಗ್ಗೆ ಆಡಳಿತದಲ್ಲಿ ಇದ್ದವರು ಜನತೆಗೆ ತಿಳಿಸಬೇಕಾಗಿದೆ ಎಂದರು.ಕಲ್ಚರ್ಪೆಯಲ್ಲಿ ಹಾಕಲಾಗಿದ್ದ ನಗರದ ಕಸವನ್ನು ಸಂಸ್ಕರಣೆ ಮಾಡುವ ಯೋಜನೆಗೆಂದು ಲಕ್ಷಾಂತರ ಹಣ ವ್ಯಯ ಮಾಡಲಾಗಿದ್ದರೂ ವಾಸ್ತವವಾಗಿ ಒಂದು ಕಟ್ಟಡವನ್ನು ಹೊರತುಪಡಿಸಿದರೆ ಕಸ ನಿರ್ವಹಣೆಗೆ ಕೈಗೊಂಡ ವೈಜ್ಞಾನಿಕ ಕ್ರಮ ಶೂನ್ಯವಾಗಿದೆ. ತ್ಯಾಜ್ಯದ ಮಲಿನಗೊಂಡ ನೀರು ಪಯಸ್ವಿನಿ ನದಿಗೆ ಹರಿದು ಅದನ್ನೇ ನಗರದ ಜನತೆ ಕುಡಿಯುವಂತಾಗಿದ್ದು ನಗರದ ಜನತೆಯ ದುರಂತವೇ ಸರಿ ಎಂದು ಅವರು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

7 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

20 hours ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

1 day ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

1 day ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

1 day ago

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

2 days ago