ಸುಳ್ಯ: 13 ವರ್ಷಗಳ ಹಿಂದೆ ಆರಂಭಗೊಂಡು ಕುಂಟುತ್ತಾ ಸಾಗಿದರೂ ಸುಳ್ಯ ನಗರದಲ್ಲಿ ಒಳಚರಂಡಿ ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗಿಲ್ಲ. ಅಸಮರ್ಪಕ ಕಾಮಗಾರಿಯಿಂದ,ಒಳಚರಂಡಿಯ ಒಳಗಡೆ ಹರಿದು ಹೋಗಬೇಕಾಗಿದ್ದ ತ್ಯಾಜ್ಯ, ಕೊಳಚೆ ನೀರು ಕಣಿವೆಯಲ್ಲಿ ಹರಿದು ಕಂದಡ್ಕ ಹೊಳೆಗೆ ಸೇರಿ ಅದರ ನೀರು ಮಲೀನಗೊಂಡು ಪಯಸ್ವಿನಿ ನದಿ ಸೇರಿ ಮತ್ತೆ ಅದೇ ನೀರನ್ನು ಸುಳ್ಯದ ತಳಭಾಗದ ಜನ ಕುಡಿಯುವಂತಾಗಿದೆ. ಇದರಿಂದ ಒಳಚರಂಡಿ ಯೋಜನೆಗೆ ಬಳಸಿದ 2.87 ಕೋಟಿ ರೂ ವ್ಯರ್ಥವಾಗಿದೆ ಎಂದು ಕೆ.ಪಿ.ಸಿ.ಸಿ. ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಹೇಳಿದ್ದಾರೆ.
ಸುಳ್ಯ ನಗರದ ಒಳಚರಂಡಿ ಯೋಜನೆ ಕಾರ್ಯಗತ ಸಂಪೂರ್ಣಗೊಂಡಿದೆ ಎಂದು ನಗರ ಆಡಳಿತ ಹೇಳುತ್ತಿದ್ದರೂ ಕಾಮಗಾರಿಯಿಂದ ನಗರಕ್ಕೆ ಯಾವುದೇ ಪ್ರಯೋಜನ ಇಲ್ಲದಂತಾಗಿದೆ. ಜಯನಗರದಲ್ಲಿರುವ ಇದರ ಶುದ್ದೀಕರಣ ಘಟಕ ಪಾಳು ಬಿದ್ದಿರುವುದು ಕಂಡು ಬಂದಿದೆ. ಇದರಿಂದ 2.87 ಕೋಟಿ ಹಣ ಎಲ್ಲಿ ಹೋಗಿದೆ ಎಂಬುದರ ಬಗ್ಗೆ ಆಡಳಿತದಲ್ಲಿ ಇದ್ದವರು ಜನತೆಗೆ ತಿಳಿಸಬೇಕಾಗಿದೆ ಎಂದರು.ಕಲ್ಚರ್ಪೆಯಲ್ಲಿ ಹಾಕಲಾಗಿದ್ದ ನಗರದ ಕಸವನ್ನು ಸಂಸ್ಕರಣೆ ಮಾಡುವ ಯೋಜನೆಗೆಂದು ಲಕ್ಷಾಂತರ ಹಣ ವ್ಯಯ ಮಾಡಲಾಗಿದ್ದರೂ ವಾಸ್ತವವಾಗಿ ಒಂದು ಕಟ್ಟಡವನ್ನು ಹೊರತುಪಡಿಸಿದರೆ ಕಸ ನಿರ್ವಹಣೆಗೆ ಕೈಗೊಂಡ ವೈಜ್ಞಾನಿಕ ಕ್ರಮ ಶೂನ್ಯವಾಗಿದೆ. ತ್ಯಾಜ್ಯದ ಮಲಿನಗೊಂಡ ನೀರು ಪಯಸ್ವಿನಿ ನದಿಗೆ ಹರಿದು ಅದನ್ನೇ ನಗರದ ಜನತೆ ಕುಡಿಯುವಂತಾಗಿದ್ದು ನಗರದ ಜನತೆಯ ದುರಂತವೇ ಸರಿ ಎಂದು ಅವರು ಹೇಳಿದರು.
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…