Advertisement
ಸುದ್ದಿಗಳು

ಓಣಂ ಸೌಹಾರ್ದತೆಯ ಸಂಕೇತ

Share

ಪುತ್ತೂರು: ಕೇರಳ ರಾಜ್ಯದ ಹಬ್ಬವಾಗಿರುವ ಓಣಂ ಅನ್ನು ದೇಶದೆಲ್ಲೆಡೆ ಎಲ್ಲಾ ಧರ್ಮದ ಜನರು ಒಗ್ಗೂಡಿ ಆಚರಿಸುತ್ತಾರೆ. ಓಣಂ ಎನ್ನುವುದು ಸೌಹಾರ್ದತೆಯ ಸಂಕೇತವಾಗಿದೆ. ಪುರಾಣಗಳು ಕೇವಲ ಪುರಾಣವಾಗಿಯೇ ಉಳಿಯದೆ ಅಲ್ಲಿನ ಒಳ್ಳೆಯ ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯವಾಗಿದೆ ಎಂದು ಪುತ್ತೂರು ನರೇಂದ್ರ ಪದವಿಪೂರ್ವ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ಸಿಂಧು ಹೇಳಿದರು.

ಅವರು ವಿವೇಕಾನಂದ ಕಾಲೇಜಿನಲ್ಲಿ ‘ಆರಾವಮ್ 2019’ ಎಂಬ ಓಣಂ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.ಮಹಾಬಲಿಯ ಜೀವನಾಂಶಗಳನ್ನು ಬದುಕಿನಲ್ಲಿ ಅಳವಡಿಸುವ ಮೂಲಕ ಉತ್ತಮ ನಾಗರಿಕನಾಗಿ ರಾಷ್ಟ್ರಕ್ಕೆ ಮಾದರಿಯಾಗಬಹುದ. ಜೀವನದ ಯಾವುದೇ ಘಟ್ಟದಲ್ಲಿ ಸಮಸ್ಯೆಗಳು ಬರಬಹುದು. ಆದರೆ ಅದನ್ನು ಬದಿಗೊತ್ತಿನಿಂತಾಗ ಸಂತೋಷ ಮತ್ತು ನೆಮ್ಮದಿಯ ಜೀವನ ನಮ್ಮದಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ಕಾಲೇಜಿನ ಯಶಸ್ ಘಟಕದ ಕಾರ್ಯದರ್ಶಿ ಮುರಳಿಕೃಷ್ಣ ಚಳ್ಳಂಗಾರು  ಮಾತನಾಡಿ, ಕೇರಳ ರಾಜ್ಯ ದೇವರನಾಡು ಎಂಬ ಪ್ರಸಿದ್ಧಿ ಪಡೆದಿದೆ. ಮಾತ್ರವಲ್ಲದೇ ಕೇರಳವು ಸಾಂಸ್ಕೃತಿಕ ರಾಯಬಾರಿ ಎಂಬ ಘನತೆಯನ್ನೂ ಹೊಂದಿದೆ. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ನಮ್ಮ ದೇಶ ಒಂದುದಾರದಲ್ಲಿ ಪೋಣಿಸಿದೆ. ಆದುದರಿಂದ ಓಣಂ ಎಂಬುವುದು ಕೇವಲ ಕೇರಳದಲ್ಲಿ ಮಾತ್ರ ಆಚರಿಸುವ ಹಬ್ಬವಲ್ಲ. ದೇಶದ ಹಲವೆಡೆಗಳಲ್ಲಿ ಆಚರಿಸುತ್ತಾರೆ. ಆದರೆ ಆಚರಿಸುವ ವಿಧಾನ ಬೇರೆಯಾಗಿದೆ. ಈ ಎಲ್ಲಾ ಹಬ್ಬಗಳು ನೀಡುವ ಸಂದೇಶ ಒಂದೇ ಎಂದು ಹೇಳಿದರು.

ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸ್ವಸ್ತಿಕ್ ಮತ್ತು ಕಾರ್ಯದರ್ಶಿ ನಿಶಾಂತ್ ಉಪಸ್ಥಿತರಿದ್ದರು. ಶಿಲ್ಪ ಮತ್ತು ತಂಡ ಪ್ರಾರ್ಥಿಸಿದರು. ನಿಧಿ ಅತ್ರಿ ಸ್ವಾಗತಿಸಿ, ಅನ್ವಯ್‍ಕೃಷ್ಣ ವಂದಿಸಿದರು. ಅಭಿಲಾಷ್ ಶರ್ಮ ಕಾರ್ಯಕ್ರಮ ನಿರೂಪಿಸಿದರು.
ಓಣಂ ಕುರಿತು ವಿದ್ಯಾರ್ಥಿಗಳು ವಿಶಿಷ್ಟ ಸಾಂಸ್ಕøತಿಕ ಕಾರ್ಯಕ್ರಮ ಮತ್ತು ಸ್ಪರ್ಧೆಗಳನ್ನು ಏರ್ಪಡಿಸಿದ್ದರು. ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು. ವಿಶೇಷ ಪೂಕಳಂ ಬಿಡಿಸಿ ಸಂಭ್ರಮಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

39 minutes ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

1 day ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

1 day ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

1 day ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago