Advertisement
ಸುದ್ದಿಗಳು

ಓಣಂ ಸೌಹಾರ್ದತೆಯ ಸಂಕೇತ

Share

ಪುತ್ತೂರು: ಕೇರಳ ರಾಜ್ಯದ ಹಬ್ಬವಾಗಿರುವ ಓಣಂ ಅನ್ನು ದೇಶದೆಲ್ಲೆಡೆ ಎಲ್ಲಾ ಧರ್ಮದ ಜನರು ಒಗ್ಗೂಡಿ ಆಚರಿಸುತ್ತಾರೆ. ಓಣಂ ಎನ್ನುವುದು ಸೌಹಾರ್ದತೆಯ ಸಂಕೇತವಾಗಿದೆ. ಪುರಾಣಗಳು ಕೇವಲ ಪುರಾಣವಾಗಿಯೇ ಉಳಿಯದೆ ಅಲ್ಲಿನ ಒಳ್ಳೆಯ ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯವಾಗಿದೆ ಎಂದು ಪುತ್ತೂರು ನರೇಂದ್ರ ಪದವಿಪೂರ್ವ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ಸಿಂಧು ಹೇಳಿದರು.

ಅವರು ವಿವೇಕಾನಂದ ಕಾಲೇಜಿನಲ್ಲಿ ‘ಆರಾವಮ್ 2019’ ಎಂಬ ಓಣಂ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.ಮಹಾಬಲಿಯ ಜೀವನಾಂಶಗಳನ್ನು ಬದುಕಿನಲ್ಲಿ ಅಳವಡಿಸುವ ಮೂಲಕ ಉತ್ತಮ ನಾಗರಿಕನಾಗಿ ರಾಷ್ಟ್ರಕ್ಕೆ ಮಾದರಿಯಾಗಬಹುದ. ಜೀವನದ ಯಾವುದೇ ಘಟ್ಟದಲ್ಲಿ ಸಮಸ್ಯೆಗಳು ಬರಬಹುದು. ಆದರೆ ಅದನ್ನು ಬದಿಗೊತ್ತಿನಿಂತಾಗ ಸಂತೋಷ ಮತ್ತು ನೆಮ್ಮದಿಯ ಜೀವನ ನಮ್ಮದಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ಕಾಲೇಜಿನ ಯಶಸ್ ಘಟಕದ ಕಾರ್ಯದರ್ಶಿ ಮುರಳಿಕೃಷ್ಣ ಚಳ್ಳಂಗಾರು  ಮಾತನಾಡಿ, ಕೇರಳ ರಾಜ್ಯ ದೇವರನಾಡು ಎಂಬ ಪ್ರಸಿದ್ಧಿ ಪಡೆದಿದೆ. ಮಾತ್ರವಲ್ಲದೇ ಕೇರಳವು ಸಾಂಸ್ಕೃತಿಕ ರಾಯಬಾರಿ ಎಂಬ ಘನತೆಯನ್ನೂ ಹೊಂದಿದೆ. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ನಮ್ಮ ದೇಶ ಒಂದುದಾರದಲ್ಲಿ ಪೋಣಿಸಿದೆ. ಆದುದರಿಂದ ಓಣಂ ಎಂಬುವುದು ಕೇವಲ ಕೇರಳದಲ್ಲಿ ಮಾತ್ರ ಆಚರಿಸುವ ಹಬ್ಬವಲ್ಲ. ದೇಶದ ಹಲವೆಡೆಗಳಲ್ಲಿ ಆಚರಿಸುತ್ತಾರೆ. ಆದರೆ ಆಚರಿಸುವ ವಿಧಾನ ಬೇರೆಯಾಗಿದೆ. ಈ ಎಲ್ಲಾ ಹಬ್ಬಗಳು ನೀಡುವ ಸಂದೇಶ ಒಂದೇ ಎಂದು ಹೇಳಿದರು.

ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸ್ವಸ್ತಿಕ್ ಮತ್ತು ಕಾರ್ಯದರ್ಶಿ ನಿಶಾಂತ್ ಉಪಸ್ಥಿತರಿದ್ದರು. ಶಿಲ್ಪ ಮತ್ತು ತಂಡ ಪ್ರಾರ್ಥಿಸಿದರು. ನಿಧಿ ಅತ್ರಿ ಸ್ವಾಗತಿಸಿ, ಅನ್ವಯ್‍ಕೃಷ್ಣ ವಂದಿಸಿದರು. ಅಭಿಲಾಷ್ ಶರ್ಮ ಕಾರ್ಯಕ್ರಮ ನಿರೂಪಿಸಿದರು.
ಓಣಂ ಕುರಿತು ವಿದ್ಯಾರ್ಥಿಗಳು ವಿಶಿಷ್ಟ ಸಾಂಸ್ಕøತಿಕ ಕಾರ್ಯಕ್ರಮ ಮತ್ತು ಸ್ಪರ್ಧೆಗಳನ್ನು ಏರ್ಪಡಿಸಿದ್ದರು. ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು. ವಿಶೇಷ ಪೂಕಳಂ ಬಿಡಿಸಿ ಸಂಭ್ರಮಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ

ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…

4 hours ago

ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!

ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…

6 hours ago

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ

ಬ್ರೆಜಿಲ್‌ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…

10 hours ago

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

13 hours ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

14 hours ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

1 day ago