Advertisement
ಸುದ್ದಿಗಳು

ಓಣಂ ಸೌಹಾರ್ದತೆಯ ಸಂಕೇತ

Share

ಪುತ್ತೂರು: ಕೇರಳ ರಾಜ್ಯದ ಹಬ್ಬವಾಗಿರುವ ಓಣಂ ಅನ್ನು ದೇಶದೆಲ್ಲೆಡೆ ಎಲ್ಲಾ ಧರ್ಮದ ಜನರು ಒಗ್ಗೂಡಿ ಆಚರಿಸುತ್ತಾರೆ. ಓಣಂ ಎನ್ನುವುದು ಸೌಹಾರ್ದತೆಯ ಸಂಕೇತವಾಗಿದೆ. ಪುರಾಣಗಳು ಕೇವಲ ಪುರಾಣವಾಗಿಯೇ ಉಳಿಯದೆ ಅಲ್ಲಿನ ಒಳ್ಳೆಯ ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯವಾಗಿದೆ ಎಂದು ಪುತ್ತೂರು ನರೇಂದ್ರ ಪದವಿಪೂರ್ವ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ಸಿಂಧು ಹೇಳಿದರು.

ಅವರು ವಿವೇಕಾನಂದ ಕಾಲೇಜಿನಲ್ಲಿ ‘ಆರಾವಮ್ 2019’ ಎಂಬ ಓಣಂ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.ಮಹಾಬಲಿಯ ಜೀವನಾಂಶಗಳನ್ನು ಬದುಕಿನಲ್ಲಿ ಅಳವಡಿಸುವ ಮೂಲಕ ಉತ್ತಮ ನಾಗರಿಕನಾಗಿ ರಾಷ್ಟ್ರಕ್ಕೆ ಮಾದರಿಯಾಗಬಹುದ. ಜೀವನದ ಯಾವುದೇ ಘಟ್ಟದಲ್ಲಿ ಸಮಸ್ಯೆಗಳು ಬರಬಹುದು. ಆದರೆ ಅದನ್ನು ಬದಿಗೊತ್ತಿನಿಂತಾಗ ಸಂತೋಷ ಮತ್ತು ನೆಮ್ಮದಿಯ ಜೀವನ ನಮ್ಮದಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ಕಾಲೇಜಿನ ಯಶಸ್ ಘಟಕದ ಕಾರ್ಯದರ್ಶಿ ಮುರಳಿಕೃಷ್ಣ ಚಳ್ಳಂಗಾರು  ಮಾತನಾಡಿ, ಕೇರಳ ರಾಜ್ಯ ದೇವರನಾಡು ಎಂಬ ಪ್ರಸಿದ್ಧಿ ಪಡೆದಿದೆ. ಮಾತ್ರವಲ್ಲದೇ ಕೇರಳವು ಸಾಂಸ್ಕೃತಿಕ ರಾಯಬಾರಿ ಎಂಬ ಘನತೆಯನ್ನೂ ಹೊಂದಿದೆ. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ನಮ್ಮ ದೇಶ ಒಂದುದಾರದಲ್ಲಿ ಪೋಣಿಸಿದೆ. ಆದುದರಿಂದ ಓಣಂ ಎಂಬುವುದು ಕೇವಲ ಕೇರಳದಲ್ಲಿ ಮಾತ್ರ ಆಚರಿಸುವ ಹಬ್ಬವಲ್ಲ. ದೇಶದ ಹಲವೆಡೆಗಳಲ್ಲಿ ಆಚರಿಸುತ್ತಾರೆ. ಆದರೆ ಆಚರಿಸುವ ವಿಧಾನ ಬೇರೆಯಾಗಿದೆ. ಈ ಎಲ್ಲಾ ಹಬ್ಬಗಳು ನೀಡುವ ಸಂದೇಶ ಒಂದೇ ಎಂದು ಹೇಳಿದರು.

ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸ್ವಸ್ತಿಕ್ ಮತ್ತು ಕಾರ್ಯದರ್ಶಿ ನಿಶಾಂತ್ ಉಪಸ್ಥಿತರಿದ್ದರು. ಶಿಲ್ಪ ಮತ್ತು ತಂಡ ಪ್ರಾರ್ಥಿಸಿದರು. ನಿಧಿ ಅತ್ರಿ ಸ್ವಾಗತಿಸಿ, ಅನ್ವಯ್‍ಕೃಷ್ಣ ವಂದಿಸಿದರು. ಅಭಿಲಾಷ್ ಶರ್ಮ ಕಾರ್ಯಕ್ರಮ ನಿರೂಪಿಸಿದರು.
ಓಣಂ ಕುರಿತು ವಿದ್ಯಾರ್ಥಿಗಳು ವಿಶಿಷ್ಟ ಸಾಂಸ್ಕøತಿಕ ಕಾರ್ಯಕ್ರಮ ಮತ್ತು ಸ್ಪರ್ಧೆಗಳನ್ನು ಏರ್ಪಡಿಸಿದ್ದರು. ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು. ವಿಶೇಷ ಪೂಕಳಂ ಬಿಡಿಸಿ ಸಂಭ್ರಮಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

51 minutes ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

3 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

8 hours ago

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್‌, AI ಹಾಗೂ ಸ್ಮಾರ್ಟ್…

8 hours ago

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

17 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

18 hours ago