ಅನುಕ್ರಮ

ಓಹ್ ಮಳೆಯೇ…….

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಏನು ಮಾಡ ಬೇಕೆಂದು ತಿಳಿಯುತ್ತಿಲ್ಲ. ಮನೆಯೊಳಗೆ ಎಷ್ಟೆಂದು ಕುಳಿತುಕೊಳ್ಳಬಹುದು. ಮಳೆ ಸುರಿಯುವ ಸಮಯಕ್ಕೆ ಬರಬೇಕು. ಅದು ಸಹಜ. ಹಾಗೆಂದು ಆಗುವ ಕೆಲಸ ಆಗಬೇಕಲ್ಲ.

Advertisement
Advertisement
ನಿತ್ಯ ದುಡಿದು ಉಣ್ಣುವವರಿಗೆ ಗಂಜಿಯ ಚಿಂತೆ. ಹೊಲದೊಡೆಯನಿಗೆ ಹೊಲದ ಕೆಲಸದ  ಗಡಿಬಿಡಿ, ಅಡಿಕೆ ತೋಟದಲ್ಲಿ ರೋಗದಿಂದ ಉದುರುವ ಅಡಿಕೆಯನ್ನು ಹೆಕ್ಕುವುದೋ ಅಲ್ಲೇ ಬಿಡುವುದೋ ಒಟ್ಟಾರೆ ಮದ್ದು ಬಿಡಲಾಗದೆ ಸೋತೆವಲ್ಲಾ ಎಂದು  ಕಣ್ಣು ಕಣ್ಣು ಬಿಡುವ ಪರಿಸ್ಥಿತಿ. ಮನೆಮುಂದೆ ಕೆಲಸಕ್ಕಾಗಿ ‌ಬಂದವರಿಗೆ ಏನು ಹೇಳುವುದು ಎಂದು ತಲೆ ತುರಿಸುವುದೆ ಆಯಿತು.
ಮನೆಯ ಸುತ್ತಮುತ್ತಲಿನ ಕೆಲಸಗಳನ್ನು ಮಾಡುತ್ತಾ ಹೊತ್ತು ಕಳೆಯುತ್ತದ್ದವರಿಗೆ ಮಳೆಯಿಂದಾಗಿ ದಿಗ್ಬ್ಂಧನ ವಿಧಿಸಿದಂತಾಗಿದೆ. ಪೇಪರ್, ಕಥೆ ಪುಸ್ತಕಗಳನ್ನು ಓದುವ ಅಭ್ಯಾಸವಿದ್ದವರಿಗೆ ಸಮಯ ಕಳೆದೀತು. ಇನ್ನೂ  ಟಿ.ವಿ ಧಾರಾವಾಹಿ ಸಿನೆಮಾಗಳಲ್ಲಿ ಮುಳುಗುವವರು ಮಳೆ ಮೋಡಗಳಿಗೂ, ಕರೆಂಟ್ ಗೂ ಹಿಡಿಶಾಪ ಹಾಕಬೇಕಷ್ಟೇ. ಒಂದು ಗಾಳಿ ಬಂದರೆ ಮತ್ತೆ ಕರೆಂಟ್ ದರ್ಶನ ಮರುದಿನವೇ. ಈಗ ಪರಿಸ್ಥಿತಿ ಸುಧಾರಿಸಿದೆ. ಸೋಲರ್, ಇನ್ವರ್ಟರ್ ಗಳು ಎಲ್ಲಾ ‌ ಮನೆಗಳಲ್ಲಿ ಇರುವ ಕಾರಣ ದೀಪ, ಕ್ಯಾಂಡಲ್ ಗಳ‌ ಬಳಕೆ ಬಹು ಅಪರೂಪ.
ಮಕ್ಕಳು ಮಳೆಗೆ ಸಿಗುವ ರಜೆಯನ್ನು ಎದುರು ನೋಡುತ್ತಿದ್ದರೆ ನಗಬೇಕೋ ಅಳಬೇಕೋ ಗೊತ್ತಾಗುತ್ತಿಲ್ಲ. ಇನ್ನೂ  ಗರಿಗರಿಯಾದ ಹಪ್ಪಳ ,ಸಂಡಿಗೆ, ಚಿಪ್ಸ ‌, ಬಿಸಿ ಬಿಸಿ ಕಾಫಿಯೊಂದಿಗೆ ಪೋಡಿ ತಿನ್ನುತ್ತಾ ಮಳೆಯನ್ನು ಅನುಭವಿಸುವ ಮನಸ್ಥಿತಿಗೆ  ಬಿ.ಪಿ., ಶುಗರ್ ,‌ಕೊಲೆಸ್ಟರಾಲ್ ಅಡ್ಡಿಯಾಗುತ್ತಿದೆ.  ಮಳೆ  ಬಿಸಿಲು,  ಬದುಕಿನ ಅವಿಭಾಜ್ಯ ಅಂಗವಾದರೂ ಅವುಗಳ ತೀವ್ರತೆಯನ್ನು ಒಪ್ಪಿಕೊಳ್ಳುವುದು  ಮನಸ್ಸಿಗೆ ಹಿಂಸೆಯೇ ಸರಿ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ನಿಮ್ಮಲ್ಲಿ ಎಳೆ ಅಡಿಕೆ ಬೀಳ್ತಾ ಇದೆಯಾ…? ಕೇಳಲು ಶುರು ಮಾಡಿದ್ದಾರೆ ಅಡಿಕೆ ಬೆಳೆಗಾರರು..!

ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.‌10 ಕಳೆಯುವ ಹೊತ್ತಿಗೆ ವಾತಾವರಣ…

5 hours ago

ಹವಾಮಾನ ವರದಿ | 11-06-2025 | ಮುಂದಿನ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ | ಮುನ್ಸೂಚನೆಯಂತೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಇಲ್ಲ |

ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…

6 hours ago

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!

ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…

13 hours ago

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

22 hours ago

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…

22 hours ago

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

22 hours ago