Advertisement
ಅನುಕ್ರಮ

ಓಹ್ ಮಳೆಯೇ…….

Share

ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಏನು ಮಾಡ ಬೇಕೆಂದು ತಿಳಿಯುತ್ತಿಲ್ಲ. ಮನೆಯೊಳಗೆ ಎಷ್ಟೆಂದು ಕುಳಿತುಕೊಳ್ಳಬಹುದು. ಮಳೆ ಸುರಿಯುವ ಸಮಯಕ್ಕೆ ಬರಬೇಕು. ಅದು ಸಹಜ. ಹಾಗೆಂದು ಆಗುವ ಕೆಲಸ ಆಗಬೇಕಲ್ಲ.

ನಿತ್ಯ ದುಡಿದು ಉಣ್ಣುವವರಿಗೆ ಗಂಜಿಯ ಚಿಂತೆ. ಹೊಲದೊಡೆಯನಿಗೆ ಹೊಲದ ಕೆಲಸದ  ಗಡಿಬಿಡಿ, ಅಡಿಕೆ ತೋಟದಲ್ಲಿ ರೋಗದಿಂದ ಉದುರುವ ಅಡಿಕೆಯನ್ನು ಹೆಕ್ಕುವುದೋ ಅಲ್ಲೇ ಬಿಡುವುದೋ ಒಟ್ಟಾರೆ ಮದ್ದು ಬಿಡಲಾಗದೆ ಸೋತೆವಲ್ಲಾ ಎಂದು  ಕಣ್ಣು ಕಣ್ಣು ಬಿಡುವ ಪರಿಸ್ಥಿತಿ. ಮನೆಮುಂದೆ ಕೆಲಸಕ್ಕಾಗಿ ‌ಬಂದವರಿಗೆ ಏನು ಹೇಳುವುದು ಎಂದು ತಲೆ ತುರಿಸುವುದೆ ಆಯಿತು.
ಮನೆಯ ಸುತ್ತಮುತ್ತಲಿನ ಕೆಲಸಗಳನ್ನು ಮಾಡುತ್ತಾ ಹೊತ್ತು ಕಳೆಯುತ್ತದ್ದವರಿಗೆ ಮಳೆಯಿಂದಾಗಿ ದಿಗ್ಬ್ಂಧನ ವಿಧಿಸಿದಂತಾಗಿದೆ. ಪೇಪರ್, ಕಥೆ ಪುಸ್ತಕಗಳನ್ನು ಓದುವ ಅಭ್ಯಾಸವಿದ್ದವರಿಗೆ ಸಮಯ ಕಳೆದೀತು. ಇನ್ನೂ  ಟಿ.ವಿ ಧಾರಾವಾಹಿ ಸಿನೆಮಾಗಳಲ್ಲಿ ಮುಳುಗುವವರು ಮಳೆ ಮೋಡಗಳಿಗೂ, ಕರೆಂಟ್ ಗೂ ಹಿಡಿಶಾಪ ಹಾಕಬೇಕಷ್ಟೇ. ಒಂದು ಗಾಳಿ ಬಂದರೆ ಮತ್ತೆ ಕರೆಂಟ್ ದರ್ಶನ ಮರುದಿನವೇ. ಈಗ ಪರಿಸ್ಥಿತಿ ಸುಧಾರಿಸಿದೆ. ಸೋಲರ್, ಇನ್ವರ್ಟರ್ ಗಳು ಎಲ್ಲಾ ‌ ಮನೆಗಳಲ್ಲಿ ಇರುವ ಕಾರಣ ದೀಪ, ಕ್ಯಾಂಡಲ್ ಗಳ‌ ಬಳಕೆ ಬಹು ಅಪರೂಪ.
ಮಕ್ಕಳು ಮಳೆಗೆ ಸಿಗುವ ರಜೆಯನ್ನು ಎದುರು ನೋಡುತ್ತಿದ್ದರೆ ನಗಬೇಕೋ ಅಳಬೇಕೋ ಗೊತ್ತಾಗುತ್ತಿಲ್ಲ. ಇನ್ನೂ  ಗರಿಗರಿಯಾದ ಹಪ್ಪಳ ,ಸಂಡಿಗೆ, ಚಿಪ್ಸ ‌, ಬಿಸಿ ಬಿಸಿ ಕಾಫಿಯೊಂದಿಗೆ ಪೋಡಿ ತಿನ್ನುತ್ತಾ ಮಳೆಯನ್ನು ಅನುಭವಿಸುವ ಮನಸ್ಥಿತಿಗೆ  ಬಿ.ಪಿ., ಶುಗರ್ ,‌ಕೊಲೆಸ್ಟರಾಲ್ ಅಡ್ಡಿಯಾಗುತ್ತಿದೆ.  ಮಳೆ  ಬಿಸಿಲು,  ಬದುಕಿನ ಅವಿಭಾಜ್ಯ ಅಂಗವಾದರೂ ಅವುಗಳ ತೀವ್ರತೆಯನ್ನು ಒಪ್ಪಿಕೊಳ್ಳುವುದು  ಮನಸ್ಸಿಗೆ ಹಿಂಸೆಯೇ ಸರಿ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 24-02-2026 | ತುಂತುರು ಮಳೆ, ಮೋಡದ ವಾತಾವರಣ ಮುಂದುವರಿಕೆ | ಮಾರ್ಚ್ ಮೊದಲ ವಾರದಿಂದ ಬಿಸಿಲು ಹೆಚ್ಚಳ ಸಾಧ್ಯತೆ

ಕರ್ನಾಟಕದ ವಿವಿಧ ಭಾಗಗಳಲ್ಲಿ ಫೆಬ್ರುವರಿ 25ರ ಬೆಳಿಗ್ಗೆ 8 ಗಂಟೆವರೆಗೆ ತುಂತುರು ಮಳೆ,…

1 day ago

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ

ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…

1 day ago

ಔಷಧ ಕ್ಷೇತ್ರದಲ್ಲಿ ಭಾರತದ ಐತಿಹಾಸಿಕ ಸಾಧನೆ | ಲಸಿಕೆ ತಯಾರಿಕೆಯಲ್ಲಿ ಜಾಗತಿಕ ಮುಂಚೂಣಿ

ಟೆಟಾನಸ್ ಮತ್ತು ಡಿಫ್ತೀರಿಯಾ ಲಸಿಕೆ ಬಿಡುಗಡೆ ವೇಳೆ ಭಾರತ ಲಸಿಕೆ ತಯಾರಿಕೆಯಲ್ಲಿ ಜಾಗತಿಕ…

1 day ago

ಮುಂದಿನ ವರ್ಷದಿಂದ 1–10ನೇ ತರಗತಿಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯ | ಸಚಿವ ಮಧು ಬಂಗಾರಪ್ಪ ಘೋಷಣೆ

ಮುಂದಿನ ವರ್ಷದಿಂದ ಕರ್ನಾಟಕದ 1ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯಿಸಲಾಗುವುದು…

1 day ago

ದೇಹದ ನೀರಿನ ಕೊರತೆ ತಪ್ಪಿಸಲು ಈ ಹಣ್ಣುಗಳು ಸಹಕಾರಿ

ಬೇಸಗೆಯ ಸಮಯದಲ್ಲಿ ದೇಹದ ನೀರಿನ ಕೊರತೆ ತಪ್ಪಿಸಲು watermelon, melon, strawberry ಸೇರಿದಂತೆ…

1 day ago

ಕೃಷಿಯಲ್ಲಿ ಮುಂದಿನ ಕ್ರಾಂತಿ AI ಮೂಲಕ | ರೈತರಿಗೆ ₹70,000 ಕೋಟಿ ಹೆಚ್ಚುವರಿ ಆದಾಯ ಸಾಧ್ಯ – ಕೇಂದ್ರ ಸಚಿವ ಜಿತೇಂದ್ರ ಸಿಂಗ್

ಭಾರತದ ಕೃಷಿಯಲ್ಲಿ ಮುಂದಿನ ದೊಡ್ಡ ಕ್ರಾಂತಿ ಕೃತಕ ಬುದ್ಧಿಮತ್ತೆ  (Artificial Intelligence) AI)ಮೂಲಕ…

1 day ago