Advertisement
ಅನುಕ್ರಮ

ಓಹ್ ಮಳೆಯೇ…….

Share

ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಏನು ಮಾಡ ಬೇಕೆಂದು ತಿಳಿಯುತ್ತಿಲ್ಲ. ಮನೆಯೊಳಗೆ ಎಷ್ಟೆಂದು ಕುಳಿತುಕೊಳ್ಳಬಹುದು. ಮಳೆ ಸುರಿಯುವ ಸಮಯಕ್ಕೆ ಬರಬೇಕು. ಅದು ಸಹಜ. ಹಾಗೆಂದು ಆಗುವ ಕೆಲಸ ಆಗಬೇಕಲ್ಲ.

ನಿತ್ಯ ದುಡಿದು ಉಣ್ಣುವವರಿಗೆ ಗಂಜಿಯ ಚಿಂತೆ. ಹೊಲದೊಡೆಯನಿಗೆ ಹೊಲದ ಕೆಲಸದ  ಗಡಿಬಿಡಿ, ಅಡಿಕೆ ತೋಟದಲ್ಲಿ ರೋಗದಿಂದ ಉದುರುವ ಅಡಿಕೆಯನ್ನು ಹೆಕ್ಕುವುದೋ ಅಲ್ಲೇ ಬಿಡುವುದೋ ಒಟ್ಟಾರೆ ಮದ್ದು ಬಿಡಲಾಗದೆ ಸೋತೆವಲ್ಲಾ ಎಂದು  ಕಣ್ಣು ಕಣ್ಣು ಬಿಡುವ ಪರಿಸ್ಥಿತಿ. ಮನೆಮುಂದೆ ಕೆಲಸಕ್ಕಾಗಿ ‌ಬಂದವರಿಗೆ ಏನು ಹೇಳುವುದು ಎಂದು ತಲೆ ತುರಿಸುವುದೆ ಆಯಿತು.
ಮನೆಯ ಸುತ್ತಮುತ್ತಲಿನ ಕೆಲಸಗಳನ್ನು ಮಾಡುತ್ತಾ ಹೊತ್ತು ಕಳೆಯುತ್ತದ್ದವರಿಗೆ ಮಳೆಯಿಂದಾಗಿ ದಿಗ್ಬ್ಂಧನ ವಿಧಿಸಿದಂತಾಗಿದೆ. ಪೇಪರ್, ಕಥೆ ಪುಸ್ತಕಗಳನ್ನು ಓದುವ ಅಭ್ಯಾಸವಿದ್ದವರಿಗೆ ಸಮಯ ಕಳೆದೀತು. ಇನ್ನೂ  ಟಿ.ವಿ ಧಾರಾವಾಹಿ ಸಿನೆಮಾಗಳಲ್ಲಿ ಮುಳುಗುವವರು ಮಳೆ ಮೋಡಗಳಿಗೂ, ಕರೆಂಟ್ ಗೂ ಹಿಡಿಶಾಪ ಹಾಕಬೇಕಷ್ಟೇ. ಒಂದು ಗಾಳಿ ಬಂದರೆ ಮತ್ತೆ ಕರೆಂಟ್ ದರ್ಶನ ಮರುದಿನವೇ. ಈಗ ಪರಿಸ್ಥಿತಿ ಸುಧಾರಿಸಿದೆ. ಸೋಲರ್, ಇನ್ವರ್ಟರ್ ಗಳು ಎಲ್ಲಾ ‌ ಮನೆಗಳಲ್ಲಿ ಇರುವ ಕಾರಣ ದೀಪ, ಕ್ಯಾಂಡಲ್ ಗಳ‌ ಬಳಕೆ ಬಹು ಅಪರೂಪ.
ಮಕ್ಕಳು ಮಳೆಗೆ ಸಿಗುವ ರಜೆಯನ್ನು ಎದುರು ನೋಡುತ್ತಿದ್ದರೆ ನಗಬೇಕೋ ಅಳಬೇಕೋ ಗೊತ್ತಾಗುತ್ತಿಲ್ಲ. ಇನ್ನೂ  ಗರಿಗರಿಯಾದ ಹಪ್ಪಳ ,ಸಂಡಿಗೆ, ಚಿಪ್ಸ ‌, ಬಿಸಿ ಬಿಸಿ ಕಾಫಿಯೊಂದಿಗೆ ಪೋಡಿ ತಿನ್ನುತ್ತಾ ಮಳೆಯನ್ನು ಅನುಭವಿಸುವ ಮನಸ್ಥಿತಿಗೆ  ಬಿ.ಪಿ., ಶುಗರ್ ,‌ಕೊಲೆಸ್ಟರಾಲ್ ಅಡ್ಡಿಯಾಗುತ್ತಿದೆ.  ಮಳೆ  ಬಿಸಿಲು,  ಬದುಕಿನ ಅವಿಭಾಜ್ಯ ಅಂಗವಾದರೂ ಅವುಗಳ ತೀವ್ರತೆಯನ್ನು ಒಪ್ಪಿಕೊಳ್ಳುವುದು  ಮನಸ್ಸಿಗೆ ಹಿಂಸೆಯೇ ಸರಿ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

19 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

19 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

24 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

24 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

1 day ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

2 days ago