Advertisement
ಅನುಕ್ರಮ

ಓಹ್ ಮಳೆಯೇ…….

Share

ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಏನು ಮಾಡ ಬೇಕೆಂದು ತಿಳಿಯುತ್ತಿಲ್ಲ. ಮನೆಯೊಳಗೆ ಎಷ್ಟೆಂದು ಕುಳಿತುಕೊಳ್ಳಬಹುದು. ಮಳೆ ಸುರಿಯುವ ಸಮಯಕ್ಕೆ ಬರಬೇಕು. ಅದು ಸಹಜ. ಹಾಗೆಂದು ಆಗುವ ಕೆಲಸ ಆಗಬೇಕಲ್ಲ.

ನಿತ್ಯ ದುಡಿದು ಉಣ್ಣುವವರಿಗೆ ಗಂಜಿಯ ಚಿಂತೆ. ಹೊಲದೊಡೆಯನಿಗೆ ಹೊಲದ ಕೆಲಸದ  ಗಡಿಬಿಡಿ, ಅಡಿಕೆ ತೋಟದಲ್ಲಿ ರೋಗದಿಂದ ಉದುರುವ ಅಡಿಕೆಯನ್ನು ಹೆಕ್ಕುವುದೋ ಅಲ್ಲೇ ಬಿಡುವುದೋ ಒಟ್ಟಾರೆ ಮದ್ದು ಬಿಡಲಾಗದೆ ಸೋತೆವಲ್ಲಾ ಎಂದು  ಕಣ್ಣು ಕಣ್ಣು ಬಿಡುವ ಪರಿಸ್ಥಿತಿ. ಮನೆಮುಂದೆ ಕೆಲಸಕ್ಕಾಗಿ ‌ಬಂದವರಿಗೆ ಏನು ಹೇಳುವುದು ಎಂದು ತಲೆ ತುರಿಸುವುದೆ ಆಯಿತು.
ಮನೆಯ ಸುತ್ತಮುತ್ತಲಿನ ಕೆಲಸಗಳನ್ನು ಮಾಡುತ್ತಾ ಹೊತ್ತು ಕಳೆಯುತ್ತದ್ದವರಿಗೆ ಮಳೆಯಿಂದಾಗಿ ದಿಗ್ಬ್ಂಧನ ವಿಧಿಸಿದಂತಾಗಿದೆ. ಪೇಪರ್, ಕಥೆ ಪುಸ್ತಕಗಳನ್ನು ಓದುವ ಅಭ್ಯಾಸವಿದ್ದವರಿಗೆ ಸಮಯ ಕಳೆದೀತು. ಇನ್ನೂ  ಟಿ.ವಿ ಧಾರಾವಾಹಿ ಸಿನೆಮಾಗಳಲ್ಲಿ ಮುಳುಗುವವರು ಮಳೆ ಮೋಡಗಳಿಗೂ, ಕರೆಂಟ್ ಗೂ ಹಿಡಿಶಾಪ ಹಾಕಬೇಕಷ್ಟೇ. ಒಂದು ಗಾಳಿ ಬಂದರೆ ಮತ್ತೆ ಕರೆಂಟ್ ದರ್ಶನ ಮರುದಿನವೇ. ಈಗ ಪರಿಸ್ಥಿತಿ ಸುಧಾರಿಸಿದೆ. ಸೋಲರ್, ಇನ್ವರ್ಟರ್ ಗಳು ಎಲ್ಲಾ ‌ ಮನೆಗಳಲ್ಲಿ ಇರುವ ಕಾರಣ ದೀಪ, ಕ್ಯಾಂಡಲ್ ಗಳ‌ ಬಳಕೆ ಬಹು ಅಪರೂಪ.
ಮಕ್ಕಳು ಮಳೆಗೆ ಸಿಗುವ ರಜೆಯನ್ನು ಎದುರು ನೋಡುತ್ತಿದ್ದರೆ ನಗಬೇಕೋ ಅಳಬೇಕೋ ಗೊತ್ತಾಗುತ್ತಿಲ್ಲ. ಇನ್ನೂ  ಗರಿಗರಿಯಾದ ಹಪ್ಪಳ ,ಸಂಡಿಗೆ, ಚಿಪ್ಸ ‌, ಬಿಸಿ ಬಿಸಿ ಕಾಫಿಯೊಂದಿಗೆ ಪೋಡಿ ತಿನ್ನುತ್ತಾ ಮಳೆಯನ್ನು ಅನುಭವಿಸುವ ಮನಸ್ಥಿತಿಗೆ  ಬಿ.ಪಿ., ಶುಗರ್ ,‌ಕೊಲೆಸ್ಟರಾಲ್ ಅಡ್ಡಿಯಾಗುತ್ತಿದೆ.  ಮಳೆ  ಬಿಸಿಲು,  ಬದುಕಿನ ಅವಿಭಾಜ್ಯ ಅಂಗವಾದರೂ ಅವುಗಳ ತೀವ್ರತೆಯನ್ನು ಒಪ್ಪಿಕೊಳ್ಳುವುದು  ಮನಸ್ಸಿಗೆ ಹಿಂಸೆಯೇ ಸರಿ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

41 minutes ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

20 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago