Advertisement
ಅನುಕ್ರಮ

ಓಹ್ ಮಳೆಯೇ…….

Share

ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಏನು ಮಾಡ ಬೇಕೆಂದು ತಿಳಿಯುತ್ತಿಲ್ಲ. ಮನೆಯೊಳಗೆ ಎಷ್ಟೆಂದು ಕುಳಿತುಕೊಳ್ಳಬಹುದು. ಮಳೆ ಸುರಿಯುವ ಸಮಯಕ್ಕೆ ಬರಬೇಕು. ಅದು ಸಹಜ. ಹಾಗೆಂದು ಆಗುವ ಕೆಲಸ ಆಗಬೇಕಲ್ಲ.

ನಿತ್ಯ ದುಡಿದು ಉಣ್ಣುವವರಿಗೆ ಗಂಜಿಯ ಚಿಂತೆ. ಹೊಲದೊಡೆಯನಿಗೆ ಹೊಲದ ಕೆಲಸದ  ಗಡಿಬಿಡಿ, ಅಡಿಕೆ ತೋಟದಲ್ಲಿ ರೋಗದಿಂದ ಉದುರುವ ಅಡಿಕೆಯನ್ನು ಹೆಕ್ಕುವುದೋ ಅಲ್ಲೇ ಬಿಡುವುದೋ ಒಟ್ಟಾರೆ ಮದ್ದು ಬಿಡಲಾಗದೆ ಸೋತೆವಲ್ಲಾ ಎಂದು  ಕಣ್ಣು ಕಣ್ಣು ಬಿಡುವ ಪರಿಸ್ಥಿತಿ. ಮನೆಮುಂದೆ ಕೆಲಸಕ್ಕಾಗಿ ‌ಬಂದವರಿಗೆ ಏನು ಹೇಳುವುದು ಎಂದು ತಲೆ ತುರಿಸುವುದೆ ಆಯಿತು.
ಮನೆಯ ಸುತ್ತಮುತ್ತಲಿನ ಕೆಲಸಗಳನ್ನು ಮಾಡುತ್ತಾ ಹೊತ್ತು ಕಳೆಯುತ್ತದ್ದವರಿಗೆ ಮಳೆಯಿಂದಾಗಿ ದಿಗ್ಬ್ಂಧನ ವಿಧಿಸಿದಂತಾಗಿದೆ. ಪೇಪರ್, ಕಥೆ ಪುಸ್ತಕಗಳನ್ನು ಓದುವ ಅಭ್ಯಾಸವಿದ್ದವರಿಗೆ ಸಮಯ ಕಳೆದೀತು. ಇನ್ನೂ  ಟಿ.ವಿ ಧಾರಾವಾಹಿ ಸಿನೆಮಾಗಳಲ್ಲಿ ಮುಳುಗುವವರು ಮಳೆ ಮೋಡಗಳಿಗೂ, ಕರೆಂಟ್ ಗೂ ಹಿಡಿಶಾಪ ಹಾಕಬೇಕಷ್ಟೇ. ಒಂದು ಗಾಳಿ ಬಂದರೆ ಮತ್ತೆ ಕರೆಂಟ್ ದರ್ಶನ ಮರುದಿನವೇ. ಈಗ ಪರಿಸ್ಥಿತಿ ಸುಧಾರಿಸಿದೆ. ಸೋಲರ್, ಇನ್ವರ್ಟರ್ ಗಳು ಎಲ್ಲಾ ‌ ಮನೆಗಳಲ್ಲಿ ಇರುವ ಕಾರಣ ದೀಪ, ಕ್ಯಾಂಡಲ್ ಗಳ‌ ಬಳಕೆ ಬಹು ಅಪರೂಪ.
ಮಕ್ಕಳು ಮಳೆಗೆ ಸಿಗುವ ರಜೆಯನ್ನು ಎದುರು ನೋಡುತ್ತಿದ್ದರೆ ನಗಬೇಕೋ ಅಳಬೇಕೋ ಗೊತ್ತಾಗುತ್ತಿಲ್ಲ. ಇನ್ನೂ  ಗರಿಗರಿಯಾದ ಹಪ್ಪಳ ,ಸಂಡಿಗೆ, ಚಿಪ್ಸ ‌, ಬಿಸಿ ಬಿಸಿ ಕಾಫಿಯೊಂದಿಗೆ ಪೋಡಿ ತಿನ್ನುತ್ತಾ ಮಳೆಯನ್ನು ಅನುಭವಿಸುವ ಮನಸ್ಥಿತಿಗೆ  ಬಿ.ಪಿ., ಶುಗರ್ ,‌ಕೊಲೆಸ್ಟರಾಲ್ ಅಡ್ಡಿಯಾಗುತ್ತಿದೆ.  ಮಳೆ  ಬಿಸಿಲು,  ಬದುಕಿನ ಅವಿಭಾಜ್ಯ ಅಂಗವಾದರೂ ಅವುಗಳ ತೀವ್ರತೆಯನ್ನು ಒಪ್ಪಿಕೊಳ್ಳುವುದು  ಮನಸ್ಸಿಗೆ ಹಿಂಸೆಯೇ ಸರಿ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

6 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

9 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

10 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

11 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

23 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago