Advertisement
ಸುದ್ದಿಗಳು

ಕಂಟೈನ್ಮೆಂಟ್‌ ಝೋನ್‌ ಹೊರತುಪಡಿಸಿ ಮಧ್ಯರಾತ್ರಿಯಿಂದ ಲಾಕ್ಡೌನ್ ಕೊಂಚ ಸಡಿಲಿಕೆ | ಕೃಷಿ ಮತ್ತು ಮೀನುಗಾರಿಕೆ ವಲಯಕ್ಕೆ ಸಂಪೂರ್ಣ ಅನುಮತಿ |

Share

ಬೆಂಗಳೂರು:  ರಾಜ್ಯದಲ್ಲಿ ಕಂಟೈನ್ಮೆಂಟ್‌ ಝೋನ್‌ ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ  ಲಾಕ್ಡೌನ್ ಕೊಂಚ ಸಡಿಲಿಕೆಗೆ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಆದೇಶ ನೀಡಿದ್ದಾರೆ. ಇಂದು ಮಧ್ಯ ರಾತ್ರಿಯಿಂದಲೇ ಲಾಕ್‌ಡೌನ್‌ ನಿಯಮದಲ್ಲಿ ಸಡಿಲಿಕೆ ಮಾಡಿ ಆದೇಶಿಸಲಾಗಿದೆ.

Advertisement

ರಾಜ್ಯದಲ್ಲಿ ಹೆಚ್ಚು ಕೊರೊನಾ  ಪಾಸಿಟಿವ್​​ ಕಾಣಸಿಕೊಂಡಿರುವ ಕಂಟೈನ್ಮೆಂಟ್‌ ಝೋನ್‌, ರೆಡ್ ಝೋನ್ ಹಾಗೂ ಹಾಟ್ ಸ್ಫಾಟ್ ಹೊರತುಪಡಿಸಿ ಉಳಿದ ಭಾಗಗಳಲ್ಲಿ ಲಾಕ್ಡೌನ್ ನಿರ್ಬಂಧ‌ ಸಡಿಲಗೊಳಿಸಲಾಗಿದೆ. ಇದರ ಪ್ರಕಾರ ಕೃಷಿ ಮತ್ತು ಮೀನುಗಾರಿಕೆ ವಲಯಕ್ಕೆ ಸಂಪೂರ್ಣ ಅನುಮತಿ ನೀಡಲಾಗಿದ್ದು ಇದರ ಜೊತೆಗೆ ಪ್ರಮುಖವಾಗಿ ಗ್ರಾಮೀಣ ಪ್ರದೇಶದಲ್ಲಿ ರಸ್ತೆಗೆ ಕಾಮಗಾರಿಗೆ ಅವಕಾಶ , ಕೋರಿಯಾರ್ ಸೇವೆಗೆ ಅನುಮತಿ ಸೇರಿದಂತೆ ಕೆಲವು ವಲಯಕ್ಕೆ ಆದ್ಯತೆ ನೀಡಲಾಗಿದೆ. ಮಾಲ್‌, ಚಿತ್ರಮಂದಿರ, ಆಟೋ, ವಿಮಾನ, ರೈಲು ಸಂಚಾರ, ಬಸ್ಸು, ಕ್ಯಾಬ್‌ ಮೊದಲಾದ ಸೇವೆಗಳಿಗೆ ಇರುವ ನಿರ್ಬಂಧ ಎಂದಿನಂತೆಯೇ ಮುಂದುವರೆಯಲಿದೆ.

ಯಾವುದರಲ್ಲಿ ಸಡಿಲಿಕೆ :

  • ರಸಗೊಬ್ಬರ, ಎಪಿಎಂಸಿ ಮಾರ್ಕೆಟ್ ಸಂಪೂರ್ಣ ತೆರವು
  • ಕೃಷಿ ಮತ್ತು ಮೀನುಗಾರಿಕೆ ವಲಯಕ್ಕೆ ಸಂಪೂರ್ಣ ಅನುಮತಿ
  • ಕೃಷಿ ನೀರಾವರಿಗೆ ಯಾವುದೇ ನಿರ್ಬಂಧ ಇಲ್ಲ
  • ಅಂತರ​ರಾಜ್ಯ ವಾಹನ ಓಡಾಡಕ್ಕೆ ಅವಕಾಶ
  • ಕಟ್ಟಡ ನಿರ್ಮಾಣಕ್ಕೆ ಅನುಮತಿ
  • ಕಟ್ಟಡ ಕಾಮಾಗರಿಗಳಿಗೆ ಅನುಮತಿ
  • ಟೀ ಕಾಫಿ ಪ್ಲಾಂಟೇಷನ್​​ಗೆ ಅನುಮತಿ
  • ಗ್ರಾಮೀಣ ಪ್ರದೇಶದಲ್ಲಿ ರಸ್ತೆಗೆ ಕಾಮಗಾರಿಗೆ ಅವಕಾಶ
  • ಪಶುಸಂಗೋಪನೆಗೆ ಅವಕಾಶ
  • ಬ್ಯಾಂಕುಗಳ ನಿರ್ವಹಣೆಗೆ ಮುಂದುವರಿಕೆ
  • ಹೋಟೆಲ್​ಗಳಲ್ಲಿ ಪಾರ್ಸೆಲ್ ಸೇವೆಗಳಿಗೆ ಅವಕಾಶ
  • ಕೋರಿಯಾರ್ ಸೇವೆಗೆ ಅನುಮತಿ
  • ಪಾಸ್ ಇದ್ದವರಿಗೆ ಸಂಚಾರಕ್ಕೆ ಅವಕಾಶ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

9 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

23 hours ago

ರಾಜ್ಯದ ಒಂದೆರಡು ಸ್ಥಳಗಳಲ್ಲಿ ಮಳೆ – ಐದು ದಿನ ಬಿಸಿ ಹವೆಯ ಮುನ್ಸೂಚನೆ -ದೇಶದಾದ್ಯಂತ ತಾಪಮಾನ ಏರಿಕೆ

ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…

23 hours ago

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ

ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…

1 day ago

ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ

ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…

1 day ago

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

2 days ago