Advertisement
ಸುದ್ದಿಗಳು

ಕಂಟೈನ್ಮೆಂಟ್‌ ಝೋನ್‌ ಹೊರತುಪಡಿಸಿ ಮಧ್ಯರಾತ್ರಿಯಿಂದ ಲಾಕ್ಡೌನ್ ಕೊಂಚ ಸಡಿಲಿಕೆ | ಕೃಷಿ ಮತ್ತು ಮೀನುಗಾರಿಕೆ ವಲಯಕ್ಕೆ ಸಂಪೂರ್ಣ ಅನುಮತಿ |

Share

ಬೆಂಗಳೂರು:  ರಾಜ್ಯದಲ್ಲಿ ಕಂಟೈನ್ಮೆಂಟ್‌ ಝೋನ್‌ ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ  ಲಾಕ್ಡೌನ್ ಕೊಂಚ ಸಡಿಲಿಕೆಗೆ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಆದೇಶ ನೀಡಿದ್ದಾರೆ. ಇಂದು ಮಧ್ಯ ರಾತ್ರಿಯಿಂದಲೇ ಲಾಕ್‌ಡೌನ್‌ ನಿಯಮದಲ್ಲಿ ಸಡಿಲಿಕೆ ಮಾಡಿ ಆದೇಶಿಸಲಾಗಿದೆ.

ರಾಜ್ಯದಲ್ಲಿ ಹೆಚ್ಚು ಕೊರೊನಾ  ಪಾಸಿಟಿವ್​​ ಕಾಣಸಿಕೊಂಡಿರುವ ಕಂಟೈನ್ಮೆಂಟ್‌ ಝೋನ್‌, ರೆಡ್ ಝೋನ್ ಹಾಗೂ ಹಾಟ್ ಸ್ಫಾಟ್ ಹೊರತುಪಡಿಸಿ ಉಳಿದ ಭಾಗಗಳಲ್ಲಿ ಲಾಕ್ಡೌನ್ ನಿರ್ಬಂಧ‌ ಸಡಿಲಗೊಳಿಸಲಾಗಿದೆ. ಇದರ ಪ್ರಕಾರ ಕೃಷಿ ಮತ್ತು ಮೀನುಗಾರಿಕೆ ವಲಯಕ್ಕೆ ಸಂಪೂರ್ಣ ಅನುಮತಿ ನೀಡಲಾಗಿದ್ದು ಇದರ ಜೊತೆಗೆ ಪ್ರಮುಖವಾಗಿ ಗ್ರಾಮೀಣ ಪ್ರದೇಶದಲ್ಲಿ ರಸ್ತೆಗೆ ಕಾಮಗಾರಿಗೆ ಅವಕಾಶ , ಕೋರಿಯಾರ್ ಸೇವೆಗೆ ಅನುಮತಿ ಸೇರಿದಂತೆ ಕೆಲವು ವಲಯಕ್ಕೆ ಆದ್ಯತೆ ನೀಡಲಾಗಿದೆ. ಮಾಲ್‌, ಚಿತ್ರಮಂದಿರ, ಆಟೋ, ವಿಮಾನ, ರೈಲು ಸಂಚಾರ, ಬಸ್ಸು, ಕ್ಯಾಬ್‌ ಮೊದಲಾದ ಸೇವೆಗಳಿಗೆ ಇರುವ ನಿರ್ಬಂಧ ಎಂದಿನಂತೆಯೇ ಮುಂದುವರೆಯಲಿದೆ.

ಯಾವುದರಲ್ಲಿ ಸಡಿಲಿಕೆ :

  • ರಸಗೊಬ್ಬರ, ಎಪಿಎಂಸಿ ಮಾರ್ಕೆಟ್ ಸಂಪೂರ್ಣ ತೆರವು
  • ಕೃಷಿ ಮತ್ತು ಮೀನುಗಾರಿಕೆ ವಲಯಕ್ಕೆ ಸಂಪೂರ್ಣ ಅನುಮತಿ
  • ಕೃಷಿ ನೀರಾವರಿಗೆ ಯಾವುದೇ ನಿರ್ಬಂಧ ಇಲ್ಲ
  • ಅಂತರ​ರಾಜ್ಯ ವಾಹನ ಓಡಾಡಕ್ಕೆ ಅವಕಾಶ
  • ಕಟ್ಟಡ ನಿರ್ಮಾಣಕ್ಕೆ ಅನುಮತಿ
  • ಕಟ್ಟಡ ಕಾಮಾಗರಿಗಳಿಗೆ ಅನುಮತಿ
  • ಟೀ ಕಾಫಿ ಪ್ಲಾಂಟೇಷನ್​​ಗೆ ಅನುಮತಿ
  • ಗ್ರಾಮೀಣ ಪ್ರದೇಶದಲ್ಲಿ ರಸ್ತೆಗೆ ಕಾಮಗಾರಿಗೆ ಅವಕಾಶ
  • ಪಶುಸಂಗೋಪನೆಗೆ ಅವಕಾಶ
  • ಬ್ಯಾಂಕುಗಳ ನಿರ್ವಹಣೆಗೆ ಮುಂದುವರಿಕೆ
  • ಹೋಟೆಲ್​ಗಳಲ್ಲಿ ಪಾರ್ಸೆಲ್ ಸೇವೆಗಳಿಗೆ ಅವಕಾಶ
  • ಕೋರಿಯಾರ್ ಸೇವೆಗೆ ಅನುಮತಿ
  • ಪಾಸ್ ಇದ್ದವರಿಗೆ ಸಂಚಾರಕ್ಕೆ ಅವಕಾಶ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

6 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

13 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

13 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

13 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

23 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

24 hours ago