ಪುತ್ತೂರು: ಕಳೆದ 25 ವರ್ಷಗಳಿಂದ ಪುತ್ತೂರು ಕೋಟಿ-ಚೆನ್ನಯ ಕಂಬಳದಲ್ಲಿ ಸಕ್ರೀಯರಾಗಿದ್ದು,ಕಂಬಳ ಯಶಸ್ವಿಯ ಹಿಂದೆ ಎಲಿಕ ಜಯರಾಜ್ ಜೈನ್ ಪಾತ್ರ ಮಹತ್ವದ್ದು.ಆರೋಗ್ಯಯುತರಾಗಿದ್ದುಕೊಂಡು ಅಕಾಲಿಕ ಮರಣವನ್ನಪ್ಪಿರುವುದು ಬೇಸರದ ಸಂಗತಿ ಎಂದು ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಅದ್ಯಕ್ಷ ಎನ್ ಚಂದ್ರಹಾಸ ಶೆಟ್ಟಿ ನುಡಿದರು.
ಅವರು ಇತ್ತೀಚೆಗೆ ನಿಧನರಾದ ಎಲಿಕ ಜೈನ್ ಗೆ ದರ್ಬೆ ಪ್ರವಾಸಿ ಮಂದಿರದಲ್ಲಿ ನಡೆದ ಶ್ರದ್ದಾಂಜಲಿ ಸಭೆಯಲ್ಲಿ ನುಡಿನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಕಂಬಳ ತೀರ್ಪುಗಾರ ನಿರಂಜನ್ ರೈ ಮಠಂತಬೆಟ್ಟು, ನ್ಯಾಯವಾದಿಗಳಾದ ಕುಂಬ್ರ ದುರ್ಗಾಪ್ರಸಾದ್ ರೈ, ಈಶ್ವರ ಭಟ್ ಪಂಜಿಗುಡ್ಡೆ,ಸುದರ್ಶನ್ ನಾಯ್ಕ್ ನುಡಿನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಕಂಬಳ ಸಮಿತಿಯ ಕೋಶಾಧಿಕಾರಿ ಪ್ರಸನ್ನ ಕುಮಾರ್ ಶೆಟ್ಟಿ ಸಿಜ್ಲರ್ ಸಾಮೆತ್ತಡ್ಕ,ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ.ವಿ,ಶಿವರಾಮ್ ಆಳ್ವ ಕುರಿಯ,ರೋಶನ್ ರೈ ಬನ್ನೂರು,ವಿಕ್ರಮ್ ಶೆಟ್ಟಿ ಅಂತರ ಕೋಡಿಂಬಾಡಿ,ಶಶಿಕಿರಣ್ ರೈ ನೂಜಿಬೈಲ್,ಕೃಷ್ಣಪ್ರಸಾದ್ ಆಳ್ವ ಚೆಲ್ಯಡ್ಕ,ರೋಶನ್ ರೈ ಬನ್ನೂರು,ಸುಧೀರ್ ಶೆಟ್ಟಿ ನಗರ,ಅಖಿಲ್ ಸಾಮೆತ್ತಡ್ಕ,ಸುದೇಶ್ ಚಿಕ್ಕಪುತ್ತೂರು,ಲೂಯಿಸ್,ಜಿನ್ನಪ್ಪ,ಜೋಕೀಂ ಡಿ’ಸೋಜ,ನವೀನ್ ಚಂದ್ರ ನಾಯ್ಕ್,ಪ್ರಕಾಶ್ಚಂದ್ರ ಆಳ್ವ,ಇಸಾಕ್ ಸಾಲ್ಮರ,ಹಸೈನಾರ್ ಬನಾರಿ ಉಪಸ್ಥಿತರಿದ್ದರು.
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…