ಪುತ್ತೂರು: ಕಳೆದ 25 ವರ್ಷಗಳಿಂದ ಪುತ್ತೂರು ಕೋಟಿ-ಚೆನ್ನಯ ಕಂಬಳದಲ್ಲಿ ಸಕ್ರೀಯರಾಗಿದ್ದು,ಕಂಬಳ ಯಶಸ್ವಿಯ ಹಿಂದೆ ಎಲಿಕ ಜಯರಾಜ್ ಜೈನ್ ಪಾತ್ರ ಮಹತ್ವದ್ದು.ಆರೋಗ್ಯಯುತರಾಗಿದ್ದುಕೊಂಡು ಅಕಾಲಿಕ ಮರಣವನ್ನಪ್ಪಿರುವುದು ಬೇಸರದ ಸಂಗತಿ ಎಂದು ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಅದ್ಯಕ್ಷ ಎನ್ ಚಂದ್ರಹಾಸ ಶೆಟ್ಟಿ ನುಡಿದರು.
ಅವರು ಇತ್ತೀಚೆಗೆ ನಿಧನರಾದ ಎಲಿಕ ಜೈನ್ ಗೆ ದರ್ಬೆ ಪ್ರವಾಸಿ ಮಂದಿರದಲ್ಲಿ ನಡೆದ ಶ್ರದ್ದಾಂಜಲಿ ಸಭೆಯಲ್ಲಿ ನುಡಿನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಕಂಬಳ ತೀರ್ಪುಗಾರ ನಿರಂಜನ್ ರೈ ಮಠಂತಬೆಟ್ಟು, ನ್ಯಾಯವಾದಿಗಳಾದ ಕುಂಬ್ರ ದುರ್ಗಾಪ್ರಸಾದ್ ರೈ, ಈಶ್ವರ ಭಟ್ ಪಂಜಿಗುಡ್ಡೆ,ಸುದರ್ಶನ್ ನಾಯ್ಕ್ ನುಡಿನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಕಂಬಳ ಸಮಿತಿಯ ಕೋಶಾಧಿಕಾರಿ ಪ್ರಸನ್ನ ಕುಮಾರ್ ಶೆಟ್ಟಿ ಸಿಜ್ಲರ್ ಸಾಮೆತ್ತಡ್ಕ,ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ.ವಿ,ಶಿವರಾಮ್ ಆಳ್ವ ಕುರಿಯ,ರೋಶನ್ ರೈ ಬನ್ನೂರು,ವಿಕ್ರಮ್ ಶೆಟ್ಟಿ ಅಂತರ ಕೋಡಿಂಬಾಡಿ,ಶಶಿಕಿರಣ್ ರೈ ನೂಜಿಬೈಲ್,ಕೃಷ್ಣಪ್ರಸಾದ್ ಆಳ್ವ ಚೆಲ್ಯಡ್ಕ,ರೋಶನ್ ರೈ ಬನ್ನೂರು,ಸುಧೀರ್ ಶೆಟ್ಟಿ ನಗರ,ಅಖಿಲ್ ಸಾಮೆತ್ತಡ್ಕ,ಸುದೇಶ್ ಚಿಕ್ಕಪುತ್ತೂರು,ಲೂಯಿಸ್,ಜಿನ್ನಪ್ಪ,ಜೋಕೀಂ ಡಿ’ಸೋಜ,ನವೀನ್ ಚಂದ್ರ ನಾಯ್ಕ್,ಪ್ರಕಾಶ್ಚಂದ್ರ ಆಳ್ವ,ಇಸಾಕ್ ಸಾಲ್ಮರ,ಹಸೈನಾರ್ ಬನಾರಿ ಉಪಸ್ಥಿತರಿದ್ದರು.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…