ಉಜಿರೆ: ಸೋಲು-ಗೆಲುವಿನ ಬಗ್ಗೆ ಚಿಂತಿಸದೆ ಬದ್ಧತೆಯಿಂದ ಪ್ರಾಮಾಣಿಕ ಪ್ರಯತ್ನ ಮಾಡಿ ಇನ್ನೂ ಹೆಚ್ಚಿನ ಸಾಧನೆ ಮಾಡಬೇಕು. ಕಂಬಳ ಕ್ರೀಡೆಗೂ ಒಳ್ಳೆಯ ಕಾಲ ಹಾಗೂ ಒಂದು ಯೋಗ ಬಂದಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಅವರು ಸೋಮವಾರ ಧರ್ಮಸ್ಥಳದಲ್ಲಿ ತಮ್ಮ ನಿವಾಸದಲ್ಲಿ ಕಂಬಳಗಳ ಕೋಣಗಳ ಓಟದಲ್ಲಿ ದಾಖಲೆ ನಿರ್ಮಿಸಿದ ಮೂಡಬಿದ್ರೆ ಬಳಿ ಅಶ್ವತ್ಥಪುರ ನಿವಾಸಿ ಶ್ರೀನಿವಾಸ ಗೌಡ ಅವರನ್ನು ಸನ್ಮಾನಿಸಿ ಅಭಿನಂದಿಸಿದರು. ಗೆಲುವು ಬಂದಾಗ ಹಿಗ್ಗದೆ, ಸೋಲು ಬಂದಾಗ ಕುಗ್ಗದೆ ಸಮತೋಲನದಲ್ಲಿರಬೇಕು. ಸ್ಥಿಮಿತ ಕಳೆದುಕೊಳ್ಳಬಾರದು. ಸಭೆ-ಸಮಾರಂಭಗಳಿಗೆ ಹೋಗುವಾಗ ಪ್ಯಾಂಟು ಹಾಕಬಾರದು. ಬಿಳಿ ಧೋತಿ ಉಡಬೇಕು ಎಂದು ಹೊಸ ವೇಸ್ಟಿಯನ್ನು ಉಡುಗೊರೆಯಾಗಿ ನೀಡಿದರು.
ಮಾಜಿ ಸಚಿವ ಕೆ.ಅಭಯಚಂದ್ರಜೈನ್, ಕಂಬಳ ಅಕಾಡೆಮಿ ಸಂಚಾಲಕ ಕೆ ಗುಣಪಾಲ ಕಡಂಬ, ಎಸ್.ಡಿ. ಸಂಪತ್ ಸಾಮ್ಯಾಜ್ಯ ಶಿರ್ತಾಡಿ, ಕೋಣಗಳ ಮಾಲಕ ಸತೀಶ್ಚಂದ್ರ ಸಾಲಿಯಾನ್ ಇರುವೈಲ್, ಕಂಬಳ ಅಕಾಡೆಮಿ ನಿರ್ದೇಶಕರುಗಳಾದ ಜ್ವಾಲಾ ಪ್ರಸಾದ್ ಈದು, ಸುಭಾಶ್ಚಂದ್ರ ಚೌಟ ಮೂಡಬಿದ್ರೆ, ಮಂಗಳೂರು ಎ.ಪಿ.ಎಂ.ಸಿ.ಅಧ್ಯಕ್ಷ ಪ್ರವೀಣಕುಮಾರ್ ಜೈನ್, ಚಿಂತನ್ ಲೋಬೊ, ತರಬೇತುದಾರ ದಿನೇಶ್ ಅಳಿಯೂರು ಉಪಸ್ಥಿತರಿದ್ದರು.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…
ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…
ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…
ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ…
ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…
ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…