ಸುದ್ದಿಗಳು

ಕಂಬಳ ಕೋಣಗಳ ಓಟಗಾರ ಶ್ರೀನಿವಾಸ ಗೌಡರಿಗೆ ಹೆಗ್ಗಡೆಯವರಿಂದ ಸನ್ಮಾನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಉಜಿರೆ: ಸೋಲು-ಗೆಲುವಿನ ಬಗ್ಗೆ ಚಿಂತಿಸದೆ ಬದ್ಧತೆಯಿಂದ ಪ್ರಾಮಾಣಿಕ ಪ್ರಯತ್ನ ಮಾಡಿ ಇನ್ನೂ ಹೆಚ್ಚಿನ ಸಾಧನೆ ಮಾಡಬೇಕು. ಕಂಬಳ ಕ್ರೀಡೆಗೂ ಒಳ್ಳೆಯ ಕಾಲ ಹಾಗೂ ಒಂದು ಯೋಗ ಬಂದಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

Advertisement

ಅವರು ಸೋಮವಾರ ಧರ್ಮಸ್ಥಳದಲ್ಲಿ ತಮ್ಮ ನಿವಾಸದಲ್ಲಿ ಕಂಬಳಗಳ ಕೋಣಗಳ ಓಟದಲ್ಲಿ ದಾಖಲೆ ನಿರ್ಮಿಸಿದ ಮೂಡಬಿದ್ರೆ ಬಳಿ ಅಶ್ವತ್ಥಪುರ ನಿವಾಸಿ ಶ್ರೀನಿವಾಸ ಗೌಡ ಅವರನ್ನು ಸನ್ಮಾನಿಸಿ ಅಭಿನಂದಿಸಿದರು. ಗೆಲುವು ಬಂದಾಗ ಹಿಗ್ಗದೆ, ಸೋಲು ಬಂದಾಗ ಕುಗ್ಗದೆ ಸಮತೋಲನದಲ್ಲಿರಬೇಕು. ಸ್ಥಿಮಿತ ಕಳೆದುಕೊಳ್ಳಬಾರದು. ಸಭೆ-ಸಮಾರಂಭಗಳಿಗೆ ಹೋಗುವಾಗ ಪ್ಯಾಂಟು ಹಾಕಬಾರದು. ಬಿಳಿ ಧೋತಿ ಉಡಬೇಕು ಎಂದು ಹೊಸ ವೇಸ್ಟಿಯನ್ನು ಉಡುಗೊರೆಯಾಗಿ ನೀಡಿದರು.

ಮಾಜಿ ಸಚಿವ ಕೆ.ಅಭಯಚಂದ್ರಜೈನ್, ಕಂಬಳ ಅಕಾಡೆಮಿ ಸಂಚಾಲಕ ಕೆ ಗುಣಪಾಲ ಕಡಂಬ, ಎಸ್.ಡಿ. ಸಂಪತ್ ಸಾಮ್ಯಾಜ್ಯ ಶಿರ್ತಾಡಿ, ಕೋಣಗಳ ಮಾಲಕ ಸತೀಶ್ಚಂದ್ರ ಸಾಲಿಯಾನ್‍ ಇರುವೈಲ್, ಕಂಬಳ ಅಕಾಡೆಮಿ ನಿರ್ದೇಶಕರುಗಳಾದ ಜ್ವಾಲಾ ಪ್ರಸಾದ್‍ ಈದು, ಸುಭಾಶ್ಚಂದ್ರ ಚೌಟ ಮೂಡಬಿದ್ರೆ, ಮಂಗಳೂರು ಎ.ಪಿ.ಎಂ.ಸಿ.ಅಧ್ಯಕ್ಷ ಪ್ರವೀಣಕುಮಾರ್ ಜೈನ್, ಚಿಂತನ್‍ ಲೋಬೊ, ತರಬೇತುದಾರ ದಿನೇಶ್ ಅಳಿಯೂರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 11-08-2025 | ಇಂದು ಸಾಮಾನ್ಯ ಮಳೆ | ಆ-12 ರಿಂದ ಆ-20 ರವರಗೆ ರಾಜ್ಯದ ವಿವಿದೆಡೆ ಮಳೆ |

ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…

1 hour ago

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ

ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

6 hours ago

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…

8 hours ago

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ

ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…

1 day ago

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…

2 days ago

ಹವಾಮಾನ ವರದಿ | 09-08-2025 | ಬಂಗಾಳಕೊಲ್ಲಿಯ ವಾಯುಭಾರ ಕುಸಿತ- ಮುಂಗಾರು ಚುರುಕು |

ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…

2 days ago