ಉಜಿರೆ: ಸೋಲು-ಗೆಲುವಿನ ಬಗ್ಗೆ ಚಿಂತಿಸದೆ ಬದ್ಧತೆಯಿಂದ ಪ್ರಾಮಾಣಿಕ ಪ್ರಯತ್ನ ಮಾಡಿ ಇನ್ನೂ ಹೆಚ್ಚಿನ ಸಾಧನೆ ಮಾಡಬೇಕು. ಕಂಬಳ ಕ್ರೀಡೆಗೂ ಒಳ್ಳೆಯ ಕಾಲ ಹಾಗೂ ಒಂದು ಯೋಗ ಬಂದಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಅವರು ಸೋಮವಾರ ಧರ್ಮಸ್ಥಳದಲ್ಲಿ ತಮ್ಮ ನಿವಾಸದಲ್ಲಿ ಕಂಬಳಗಳ ಕೋಣಗಳ ಓಟದಲ್ಲಿ ದಾಖಲೆ ನಿರ್ಮಿಸಿದ ಮೂಡಬಿದ್ರೆ ಬಳಿ ಅಶ್ವತ್ಥಪುರ ನಿವಾಸಿ ಶ್ರೀನಿವಾಸ ಗೌಡ ಅವರನ್ನು ಸನ್ಮಾನಿಸಿ ಅಭಿನಂದಿಸಿದರು. ಗೆಲುವು ಬಂದಾಗ ಹಿಗ್ಗದೆ, ಸೋಲು ಬಂದಾಗ ಕುಗ್ಗದೆ ಸಮತೋಲನದಲ್ಲಿರಬೇಕು. ಸ್ಥಿಮಿತ ಕಳೆದುಕೊಳ್ಳಬಾರದು. ಸಭೆ-ಸಮಾರಂಭಗಳಿಗೆ ಹೋಗುವಾಗ ಪ್ಯಾಂಟು ಹಾಕಬಾರದು. ಬಿಳಿ ಧೋತಿ ಉಡಬೇಕು ಎಂದು ಹೊಸ ವೇಸ್ಟಿಯನ್ನು ಉಡುಗೊರೆಯಾಗಿ ನೀಡಿದರು.
ಮಾಜಿ ಸಚಿವ ಕೆ.ಅಭಯಚಂದ್ರಜೈನ್, ಕಂಬಳ ಅಕಾಡೆಮಿ ಸಂಚಾಲಕ ಕೆ ಗುಣಪಾಲ ಕಡಂಬ, ಎಸ್.ಡಿ. ಸಂಪತ್ ಸಾಮ್ಯಾಜ್ಯ ಶಿರ್ತಾಡಿ, ಕೋಣಗಳ ಮಾಲಕ ಸತೀಶ್ಚಂದ್ರ ಸಾಲಿಯಾನ್ ಇರುವೈಲ್, ಕಂಬಳ ಅಕಾಡೆಮಿ ನಿರ್ದೇಶಕರುಗಳಾದ ಜ್ವಾಲಾ ಪ್ರಸಾದ್ ಈದು, ಸುಭಾಶ್ಚಂದ್ರ ಚೌಟ ಮೂಡಬಿದ್ರೆ, ಮಂಗಳೂರು ಎ.ಪಿ.ಎಂ.ಸಿ.ಅಧ್ಯಕ್ಷ ಪ್ರವೀಣಕುಮಾರ್ ಜೈನ್, ಚಿಂತನ್ ಲೋಬೊ, ತರಬೇತುದಾರ ದಿನೇಶ್ ಅಳಿಯೂರು ಉಪಸ್ಥಿತರಿದ್ದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…