ಉಜಿರೆ: ಸೋಲು-ಗೆಲುವಿನ ಬಗ್ಗೆ ಚಿಂತಿಸದೆ ಬದ್ಧತೆಯಿಂದ ಪ್ರಾಮಾಣಿಕ ಪ್ರಯತ್ನ ಮಾಡಿ ಇನ್ನೂ ಹೆಚ್ಚಿನ ಸಾಧನೆ ಮಾಡಬೇಕು. ಕಂಬಳ ಕ್ರೀಡೆಗೂ ಒಳ್ಳೆಯ ಕಾಲ ಹಾಗೂ ಒಂದು ಯೋಗ ಬಂದಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಅವರು ಸೋಮವಾರ ಧರ್ಮಸ್ಥಳದಲ್ಲಿ ತಮ್ಮ ನಿವಾಸದಲ್ಲಿ ಕಂಬಳಗಳ ಕೋಣಗಳ ಓಟದಲ್ಲಿ ದಾಖಲೆ ನಿರ್ಮಿಸಿದ ಮೂಡಬಿದ್ರೆ ಬಳಿ ಅಶ್ವತ್ಥಪುರ ನಿವಾಸಿ ಶ್ರೀನಿವಾಸ ಗೌಡ ಅವರನ್ನು ಸನ್ಮಾನಿಸಿ ಅಭಿನಂದಿಸಿದರು. ಗೆಲುವು ಬಂದಾಗ ಹಿಗ್ಗದೆ, ಸೋಲು ಬಂದಾಗ ಕುಗ್ಗದೆ ಸಮತೋಲನದಲ್ಲಿರಬೇಕು. ಸ್ಥಿಮಿತ ಕಳೆದುಕೊಳ್ಳಬಾರದು. ಸಭೆ-ಸಮಾರಂಭಗಳಿಗೆ ಹೋಗುವಾಗ ಪ್ಯಾಂಟು ಹಾಕಬಾರದು. ಬಿಳಿ ಧೋತಿ ಉಡಬೇಕು ಎಂದು ಹೊಸ ವೇಸ್ಟಿಯನ್ನು ಉಡುಗೊರೆಯಾಗಿ ನೀಡಿದರು.
ಮಾಜಿ ಸಚಿವ ಕೆ.ಅಭಯಚಂದ್ರಜೈನ್, ಕಂಬಳ ಅಕಾಡೆಮಿ ಸಂಚಾಲಕ ಕೆ ಗುಣಪಾಲ ಕಡಂಬ, ಎಸ್.ಡಿ. ಸಂಪತ್ ಸಾಮ್ಯಾಜ್ಯ ಶಿರ್ತಾಡಿ, ಕೋಣಗಳ ಮಾಲಕ ಸತೀಶ್ಚಂದ್ರ ಸಾಲಿಯಾನ್ ಇರುವೈಲ್, ಕಂಬಳ ಅಕಾಡೆಮಿ ನಿರ್ದೇಶಕರುಗಳಾದ ಜ್ವಾಲಾ ಪ್ರಸಾದ್ ಈದು, ಸುಭಾಶ್ಚಂದ್ರ ಚೌಟ ಮೂಡಬಿದ್ರೆ, ಮಂಗಳೂರು ಎ.ಪಿ.ಎಂ.ಸಿ.ಅಧ್ಯಕ್ಷ ಪ್ರವೀಣಕುಮಾರ್ ಜೈನ್, ಚಿಂತನ್ ಲೋಬೊ, ತರಬೇತುದಾರ ದಿನೇಶ್ ಅಳಿಯೂರು ಉಪಸ್ಥಿತರಿದ್ದರು.
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…