Advertisement
ಸುದ್ದಿಗಳು

ಕಂಬಳ ಕೋಣಗಳ ಓಟಗಾರ ಶ್ರೀನಿವಾಸ ಗೌಡರಿಗೆ ಹೆಗ್ಗಡೆಯವರಿಂದ ಸನ್ಮಾನ

Share

ಉಜಿರೆ: ಸೋಲು-ಗೆಲುವಿನ ಬಗ್ಗೆ ಚಿಂತಿಸದೆ ಬದ್ಧತೆಯಿಂದ ಪ್ರಾಮಾಣಿಕ ಪ್ರಯತ್ನ ಮಾಡಿ ಇನ್ನೂ ಹೆಚ್ಚಿನ ಸಾಧನೆ ಮಾಡಬೇಕು. ಕಂಬಳ ಕ್ರೀಡೆಗೂ ಒಳ್ಳೆಯ ಕಾಲ ಹಾಗೂ ಒಂದು ಯೋಗ ಬಂದಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಸೋಮವಾರ ಧರ್ಮಸ್ಥಳದಲ್ಲಿ ತಮ್ಮ ನಿವಾಸದಲ್ಲಿ ಕಂಬಳಗಳ ಕೋಣಗಳ ಓಟದಲ್ಲಿ ದಾಖಲೆ ನಿರ್ಮಿಸಿದ ಮೂಡಬಿದ್ರೆ ಬಳಿ ಅಶ್ವತ್ಥಪುರ ನಿವಾಸಿ ಶ್ರೀನಿವಾಸ ಗೌಡ ಅವರನ್ನು ಸನ್ಮಾನಿಸಿ ಅಭಿನಂದಿಸಿದರು. ಗೆಲುವು ಬಂದಾಗ ಹಿಗ್ಗದೆ, ಸೋಲು ಬಂದಾಗ ಕುಗ್ಗದೆ ಸಮತೋಲನದಲ್ಲಿರಬೇಕು. ಸ್ಥಿಮಿತ ಕಳೆದುಕೊಳ್ಳಬಾರದು. ಸಭೆ-ಸಮಾರಂಭಗಳಿಗೆ ಹೋಗುವಾಗ ಪ್ಯಾಂಟು ಹಾಕಬಾರದು. ಬಿಳಿ ಧೋತಿ ಉಡಬೇಕು ಎಂದು ಹೊಸ ವೇಸ್ಟಿಯನ್ನು ಉಡುಗೊರೆಯಾಗಿ ನೀಡಿದರು.

ಮಾಜಿ ಸಚಿವ ಕೆ.ಅಭಯಚಂದ್ರಜೈನ್, ಕಂಬಳ ಅಕಾಡೆಮಿ ಸಂಚಾಲಕ ಕೆ ಗುಣಪಾಲ ಕಡಂಬ, ಎಸ್.ಡಿ. ಸಂಪತ್ ಸಾಮ್ಯಾಜ್ಯ ಶಿರ್ತಾಡಿ, ಕೋಣಗಳ ಮಾಲಕ ಸತೀಶ್ಚಂದ್ರ ಸಾಲಿಯಾನ್‍ ಇರುವೈಲ್, ಕಂಬಳ ಅಕಾಡೆಮಿ ನಿರ್ದೇಶಕರುಗಳಾದ ಜ್ವಾಲಾ ಪ್ರಸಾದ್‍ ಈದು, ಸುಭಾಶ್ಚಂದ್ರ ಚೌಟ ಮೂಡಬಿದ್ರೆ, ಮಂಗಳೂರು ಎ.ಪಿ.ಎಂ.ಸಿ.ಅಧ್ಯಕ್ಷ ಪ್ರವೀಣಕುಮಾರ್ ಜೈನ್, ಚಿಂತನ್‍ ಲೋಬೊ, ತರಬೇತುದಾರ ದಿನೇಶ್ ಅಳಿಯೂರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

1 hour ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

3 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

10 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

18 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

19 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago