ಉಜಿರೆ: ಸೋಲು-ಗೆಲುವಿನ ಬಗ್ಗೆ ಚಿಂತಿಸದೆ ಬದ್ಧತೆಯಿಂದ ಪ್ರಾಮಾಣಿಕ ಪ್ರಯತ್ನ ಮಾಡಿ ಇನ್ನೂ ಹೆಚ್ಚಿನ ಸಾಧನೆ ಮಾಡಬೇಕು. ಕಂಬಳ ಕ್ರೀಡೆಗೂ ಒಳ್ಳೆಯ ಕಾಲ ಹಾಗೂ ಒಂದು ಯೋಗ ಬಂದಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಅವರು ಸೋಮವಾರ ಧರ್ಮಸ್ಥಳದಲ್ಲಿ ತಮ್ಮ ನಿವಾಸದಲ್ಲಿ ಕಂಬಳಗಳ ಕೋಣಗಳ ಓಟದಲ್ಲಿ ದಾಖಲೆ ನಿರ್ಮಿಸಿದ ಮೂಡಬಿದ್ರೆ ಬಳಿ ಅಶ್ವತ್ಥಪುರ ನಿವಾಸಿ ಶ್ರೀನಿವಾಸ ಗೌಡ ಅವರನ್ನು ಸನ್ಮಾನಿಸಿ ಅಭಿನಂದಿಸಿದರು. ಗೆಲುವು ಬಂದಾಗ ಹಿಗ್ಗದೆ, ಸೋಲು ಬಂದಾಗ ಕುಗ್ಗದೆ ಸಮತೋಲನದಲ್ಲಿರಬೇಕು. ಸ್ಥಿಮಿತ ಕಳೆದುಕೊಳ್ಳಬಾರದು. ಸಭೆ-ಸಮಾರಂಭಗಳಿಗೆ ಹೋಗುವಾಗ ಪ್ಯಾಂಟು ಹಾಕಬಾರದು. ಬಿಳಿ ಧೋತಿ ಉಡಬೇಕು ಎಂದು ಹೊಸ ವೇಸ್ಟಿಯನ್ನು ಉಡುಗೊರೆಯಾಗಿ ನೀಡಿದರು.
ಮಾಜಿ ಸಚಿವ ಕೆ.ಅಭಯಚಂದ್ರಜೈನ್, ಕಂಬಳ ಅಕಾಡೆಮಿ ಸಂಚಾಲಕ ಕೆ ಗುಣಪಾಲ ಕಡಂಬ, ಎಸ್.ಡಿ. ಸಂಪತ್ ಸಾಮ್ಯಾಜ್ಯ ಶಿರ್ತಾಡಿ, ಕೋಣಗಳ ಮಾಲಕ ಸತೀಶ್ಚಂದ್ರ ಸಾಲಿಯಾನ್ ಇರುವೈಲ್, ಕಂಬಳ ಅಕಾಡೆಮಿ ನಿರ್ದೇಶಕರುಗಳಾದ ಜ್ವಾಲಾ ಪ್ರಸಾದ್ ಈದು, ಸುಭಾಶ್ಚಂದ್ರ ಚೌಟ ಮೂಡಬಿದ್ರೆ, ಮಂಗಳೂರು ಎ.ಪಿ.ಎಂ.ಸಿ.ಅಧ್ಯಕ್ಷ ಪ್ರವೀಣಕುಮಾರ್ ಜೈನ್, ಚಿಂತನ್ ಲೋಬೊ, ತರಬೇತುದಾರ ದಿನೇಶ್ ಅಳಿಯೂರು ಉಪಸ್ಥಿತರಿದ್ದರು.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…