ಉಜಿರೆ: ಸೋಲು-ಗೆಲುವಿನ ಬಗ್ಗೆ ಚಿಂತಿಸದೆ ಬದ್ಧತೆಯಿಂದ ಪ್ರಾಮಾಣಿಕ ಪ್ರಯತ್ನ ಮಾಡಿ ಇನ್ನೂ ಹೆಚ್ಚಿನ ಸಾಧನೆ ಮಾಡಬೇಕು. ಕಂಬಳ ಕ್ರೀಡೆಗೂ ಒಳ್ಳೆಯ ಕಾಲ ಹಾಗೂ ಒಂದು ಯೋಗ ಬಂದಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಅವರು ಸೋಮವಾರ ಧರ್ಮಸ್ಥಳದಲ್ಲಿ ತಮ್ಮ ನಿವಾಸದಲ್ಲಿ ಕಂಬಳಗಳ ಕೋಣಗಳ ಓಟದಲ್ಲಿ ದಾಖಲೆ ನಿರ್ಮಿಸಿದ ಮೂಡಬಿದ್ರೆ ಬಳಿ ಅಶ್ವತ್ಥಪುರ ನಿವಾಸಿ ಶ್ರೀನಿವಾಸ ಗೌಡ ಅವರನ್ನು ಸನ್ಮಾನಿಸಿ ಅಭಿನಂದಿಸಿದರು. ಗೆಲುವು ಬಂದಾಗ ಹಿಗ್ಗದೆ, ಸೋಲು ಬಂದಾಗ ಕುಗ್ಗದೆ ಸಮತೋಲನದಲ್ಲಿರಬೇಕು. ಸ್ಥಿಮಿತ ಕಳೆದುಕೊಳ್ಳಬಾರದು. ಸಭೆ-ಸಮಾರಂಭಗಳಿಗೆ ಹೋಗುವಾಗ ಪ್ಯಾಂಟು ಹಾಕಬಾರದು. ಬಿಳಿ ಧೋತಿ ಉಡಬೇಕು ಎಂದು ಹೊಸ ವೇಸ್ಟಿಯನ್ನು ಉಡುಗೊರೆಯಾಗಿ ನೀಡಿದರು.
ಮಾಜಿ ಸಚಿವ ಕೆ.ಅಭಯಚಂದ್ರಜೈನ್, ಕಂಬಳ ಅಕಾಡೆಮಿ ಸಂಚಾಲಕ ಕೆ ಗುಣಪಾಲ ಕಡಂಬ, ಎಸ್.ಡಿ. ಸಂಪತ್ ಸಾಮ್ಯಾಜ್ಯ ಶಿರ್ತಾಡಿ, ಕೋಣಗಳ ಮಾಲಕ ಸತೀಶ್ಚಂದ್ರ ಸಾಲಿಯಾನ್ ಇರುವೈಲ್, ಕಂಬಳ ಅಕಾಡೆಮಿ ನಿರ್ದೇಶಕರುಗಳಾದ ಜ್ವಾಲಾ ಪ್ರಸಾದ್ ಈದು, ಸುಭಾಶ್ಚಂದ್ರ ಚೌಟ ಮೂಡಬಿದ್ರೆ, ಮಂಗಳೂರು ಎ.ಪಿ.ಎಂ.ಸಿ.ಅಧ್ಯಕ್ಷ ಪ್ರವೀಣಕುಮಾರ್ ಜೈನ್, ಚಿಂತನ್ ಲೋಬೊ, ತರಬೇತುದಾರ ದಿನೇಶ್ ಅಳಿಯೂರು ಉಪಸ್ಥಿತರಿದ್ದರು.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…