ಉಜಿರೆ: ಸೋಲು-ಗೆಲುವಿನ ಬಗ್ಗೆ ಚಿಂತಿಸದೆ ಬದ್ಧತೆಯಿಂದ ಪ್ರಾಮಾಣಿಕ ಪ್ರಯತ್ನ ಮಾಡಿ ಇನ್ನೂ ಹೆಚ್ಚಿನ ಸಾಧನೆ ಮಾಡಬೇಕು. ಕಂಬಳ ಕ್ರೀಡೆಗೂ ಒಳ್ಳೆಯ ಕಾಲ ಹಾಗೂ ಒಂದು ಯೋಗ ಬಂದಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಅವರು ಸೋಮವಾರ ಧರ್ಮಸ್ಥಳದಲ್ಲಿ ತಮ್ಮ ನಿವಾಸದಲ್ಲಿ ಕಂಬಳಗಳ ಕೋಣಗಳ ಓಟದಲ್ಲಿ ದಾಖಲೆ ನಿರ್ಮಿಸಿದ ಮೂಡಬಿದ್ರೆ ಬಳಿ ಅಶ್ವತ್ಥಪುರ ನಿವಾಸಿ ಶ್ರೀನಿವಾಸ ಗೌಡ ಅವರನ್ನು ಸನ್ಮಾನಿಸಿ ಅಭಿನಂದಿಸಿದರು. ಗೆಲುವು ಬಂದಾಗ ಹಿಗ್ಗದೆ, ಸೋಲು ಬಂದಾಗ ಕುಗ್ಗದೆ ಸಮತೋಲನದಲ್ಲಿರಬೇಕು. ಸ್ಥಿಮಿತ ಕಳೆದುಕೊಳ್ಳಬಾರದು. ಸಭೆ-ಸಮಾರಂಭಗಳಿಗೆ ಹೋಗುವಾಗ ಪ್ಯಾಂಟು ಹಾಕಬಾರದು. ಬಿಳಿ ಧೋತಿ ಉಡಬೇಕು ಎಂದು ಹೊಸ ವೇಸ್ಟಿಯನ್ನು ಉಡುಗೊರೆಯಾಗಿ ನೀಡಿದರು.
ಮಾಜಿ ಸಚಿವ ಕೆ.ಅಭಯಚಂದ್ರಜೈನ್, ಕಂಬಳ ಅಕಾಡೆಮಿ ಸಂಚಾಲಕ ಕೆ ಗುಣಪಾಲ ಕಡಂಬ, ಎಸ್.ಡಿ. ಸಂಪತ್ ಸಾಮ್ಯಾಜ್ಯ ಶಿರ್ತಾಡಿ, ಕೋಣಗಳ ಮಾಲಕ ಸತೀಶ್ಚಂದ್ರ ಸಾಲಿಯಾನ್ ಇರುವೈಲ್, ಕಂಬಳ ಅಕಾಡೆಮಿ ನಿರ್ದೇಶಕರುಗಳಾದ ಜ್ವಾಲಾ ಪ್ರಸಾದ್ ಈದು, ಸುಭಾಶ್ಚಂದ್ರ ಚೌಟ ಮೂಡಬಿದ್ರೆ, ಮಂಗಳೂರು ಎ.ಪಿ.ಎಂ.ಸಿ.ಅಧ್ಯಕ್ಷ ಪ್ರವೀಣಕುಮಾರ್ ಜೈನ್, ಚಿಂತನ್ ಲೋಬೊ, ತರಬೇತುದಾರ ದಿನೇಶ್ ಅಳಿಯೂರು ಉಪಸ್ಥಿತರಿದ್ದರು.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…