Advertisement
MIRROR FOCUS

ಕಟ್ಟಡ ಕಾರ್ಮಿಕನನ್ನು ಮೆನೇಜರ್ ವರೆಗೆ ಬೆಳೆಸಿದ ಕ್ಯಾಂಪ್ಕೋ

Share

 

ಒಬ್ಬ ಕಟ್ಟಡ ಕಾರ್ಮಿಕನಾಗಿ 8.50 ರೂಪಾಯಿ ದಿನಗೂಲಿ ಸಂಬಳಕ್ಕೆ ಒಂದು ಸಂಸ್ಥೆಗೆ ಸೇರಿ ಸಂಸ್ಥೆಯ ಒಂದು ವಿಭಾಗದ ಮೆನೇಜರ್ ಹುದ್ದೆಗೆ ತಲಪಿ ನಿವೃತ್ತಿಹೊಂದಲು ಸಾಧ್ಯ ಇದೆಯೇ?.  ಹೌದು ಇದು ಕೂಡಾ ಸಾಧ್ಯವಿದೆ. ಕ್ಯಾಂಪ್ಕೋದಲ್ಲಿ  ಕೆಲಸ ಮಾಡಿದ ಈ ವ್ಯಕ್ತಿ ಚಂದ್ರಶೇಖರ್.

ಚಂದ್ರಶೇಖರ್ ಕಳೆದ ವಾರ ಸೇವಾ ನಿವೃತ್ತಿಹೊಂದಿದರು. ಅವರ ಸೇವಾ ನಿವೃತ್ತಿಗೆ ಸಹೋದ್ಯೋಗಿಗಳಿಂದ ನಡೆದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು, ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ , ರೀಜಿನಲ್ ಮೆಜೇನರ್ ಆರ್.ಎಂ ನಂಬಿಯಾರ್ ಭಾಗವಹಿಸಿದ್ದರು.  ಈ ಕಾರ್ಯಕ್ರಮದಲ್ಲಿ  ತಮ್ಮ ಸುದೀರ್ಘ 40 ವರ್ಷದ ಸೇವೆಯನ್ನು  ತೆರೆದಿಟ್ಟ ಚಂದ್ರಶೇಖರ್,  8.50 ರೂಪಾಯಿ ಸಂಬಳಕ್ಕೆ ಕೆಲಸಕ್ಕೆ ಸೇರಿ ನಿವೃತ್ತಿಯ ಹೊತ್ತಿಗೆ 60 ಸಾವಿರ ರೂಪಾಯಿ ಸಂಬಳ ಪಡೆಯುತ್ತಿದ್ದ ಖುಷಿಯನ್ನು ಹೇಳುತ್ತಾ ಸಂಸ್ಥೆ ತನ್ನನ್ನು ಹೇಗೆ ಬೆಳೆಸಿತು ಎಂದು ಹೆಮ್ಮೆಯಿಂದ ಹೇಳುತ್ತಿದ್ದರು.

 

 

 

 

1979 ರಲ್ಲಿ ಕ್ಯಾಂಪ್ಕೋ ಸಂಸ್ಥೆಯ ಪುತ್ತೂರಿನ ಕಟ್ಟವೊಂದಕ್ಕೆ ಮಣ್ಣಿನ ಕೆಲಸ ಮಾಡಲು ದಿನಗೂಲಿ ನೌಕರನಾಗಿ ಚಂದ್ರಶೇಖರ್ ಅವರು  ಮೇಸ್ತ್ರಿಯೊಬ್ಬರ ಜೊತೆ ಬಂದಿದ್ದರು. ಆಗ ಇವರಿಗೆ ಸಿಗುತ್ತಿದ್ದ  8.50 ರೂಪಾಯಿ. ಮೇಸ್ತ್ರಿ ಅವರಿಗೆ ಸಂಸ್ಥೆ 10 ರೂಪಾಯಿ ಕೊಡುತ್ತಿತ್ತು. ಖರ್ಚು ಕಳೆದ 8.50 ರೂಪಾಯಿ ಚಂದ್ರಶೇಖರ್ ಅವರ ಸಂಬಳ. ಅದಾದ ನಂತರ ಕ್ಯಾಂಪ್ಕೋ ಕೊಕೋ ಪ್ಲಾಂಟೇಶನ್ ವಿಭಾಗದಲ್ಲಿ ದಿನಗೂಲಿ ಕಾರ್ಮಿಕನಾಗಿ ಕೆಲಸ ಮಾಡಿದರು. ಆಗ ಲಾರಿ ಬಂದಿತ್ತು, ಲಾರಿಯಲ್ಲಿ ಕೊಕೋ ಸಾಗಾಟ ಸೇರಿದಂತೆ ಇತರ ಸಾಗಾಟ ಸಂದರ್ಭ ಕಂಡೆಕ್ಟರ್ ಆಗಿ ಹೋಗಲು ಸಂಸ್ಥೆ ಹೇಳಿತು. ಆದರೆ ಆರು ತಿಂಗಳು ಹೋದಾಗ ಅಪಘಾತಗಳು ನೋಡಿದಾಗ ಭಯಗೊಂಡು ಲಾರಿಯಲ್ಲಿ  ಹೋಗಲು ಸಾಧ್ಯವಿಲ್ಲ ನಾನು ಗ್ರೇಡರ್ ಆಗಿಯೇ ಕೆಲಸ ಮಾಡುತ್ತೇನೆ ಎಂದರು.  ಹೀಗಾಗಿ ಮತ್ತೆ ವಿಟ್ಲದಲ್ಲಿ ಕ್ಲಾಸರ್ ಆಗಿ ದಿನಗೂಲಿ ವೇತನದಲ್ಲೇ ಮುಂದಿವರಿದರು. ಕೇವಲ ಒಂದು ಲುಂಗಿ ಹಾಗೂ ಬನಿಯನ್ ನಲ್ಲಿ ಲಾರಿಗೆ ತುಂಬುವುದು , ಇಳಿಸುವುದು  ಇತ್ಯಾದಿಗಳನ್ನು ಮಾಡುತ್ತಲೇ ಇದ್ದರು. ಆಗ ಕೊಕೋ ಪ್ಲಾಂಟೇಶನ್ ಕೆಲಸವೂ ಇದೆ ಎಂದು ತಿಳಿದು ಖಾಯಂ ಮಾಡುವಂತೆ ಸಂಸ್ಥೆಗೆ ಮನವಿ ಮಾಡಿದರು. 1984 ರಲ್ಲಿ ಈ ಬಗ್ಗೆ ವಿಚಾರಿಸಿದಾಗ ಈಗ ಪ್ಲಾಂಟೇಶನ್ ಕೆಲಸ ಇಲ್ಲವಂದು ಉತ್ತರ ಬಂತು. ನಂತರ 1986 ರಲ್ಲಿ ಈ ಬಗ್ಗೆ ಅಧಿಕೃತ ಮಾಹಿತಿ ಬಂತು. ಆಗ ಖಾಯಂ ಆಗಿ ಸೇರಿಕೊಂಡರು. 1993 ರಲ್ಲಿ  ಪ್ಲಾಂಟೇಶನ್ ಕೆಲಸ ಬಿಟ್ಟು ಗ್ರೇಡರ್ ಆಗಿ ವಿಟ್ಲಕ್ಕೆ ಹೋದರು. ನಂತರ 1994 ರಲ್ಲಿ  ಸಿರಸಿ ನಂತರ ಕಾಂಞಗಾಡ್, ಪುತ್ತೂರು  ಹೀಗೇ ವಿವಿಧ ಕಡೆಗಳಲ್ಲಿ ಕೆಲಸ ಮಾಡಿದರು. ಕೊನೆಗೆ ಕಳೆದ ವರ್ಷ ಕಡಬದ ಬ್ಯಾಂಚ್ ಮೆನೇಜರ್ ಆಗಿ ನಿಯೋಜನೆಗೊಂಡು ನಿವೃತ್ತರಾದರು. ಆಗ ಅವರ ವೇತನ 60,000 ರೂಪಾಯಿ.

ಕಡಬ ಶಾಖೆಯ ಮೆನೇಜರ್ ಹುದ್ದೆ ಲಭಿಸುವ ಹೊತ್ತಿಗೆ , ಇದು ಸಾಧ್ಯವಿಲ್ಲ ಎಂದರು ಚಂದ್ರಶೇಖರ್, ಅದಕ್ಕೆ ಅವರು ಕೊಟ್ಟ ಕಾರಣ ಹೀಗಿತ್ತು, ” ನಾನು ಕೇವಲ ಎಸ್ ಎಸ್ ಎಲ್ ಸಿ ಓದಿದ್ದು, ನನಗೆ ಒಂದು ಶಾಖೆಯನ್ನು ನಿರ್ವಹಣೆ ಮಾಡಲು ಕಷ್ಟ, ಇಂಗ್ಲಿಷ್ ಬರುವುದಿಲ್ಲ. ಹೀಗಾಗಿ ನನಗೆ ಬೇಡ” ಎಂದಿದ್ದರು. ಇದಕ್ಕೆ ಕ್ಯಾಂಪ್ಕೋ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು , ” ನಿಮಗೆ ಸಾಧ್ಯವಿದೆ, ನೀವು ಮಾಡಿ, ಅನುಭವವವೇ ಮುಖ್ಯವಾಗಿದೆ” ಎಂದು ನನ್ನನ್ನು ಮೆನೇಜರ್ ಮಾಡಿದರು ಎಂದು ಹೇಳುತ್ತಾ ಚಂದ್ರಶೇಖರ್ ಕೃತಜ್ಞಾ ಭಾವವನ್ನು ಹೊಂದುತ್ತಾರೆ.

ಇಲ್ಲಿ ಗಮನಿಸಬೇಕಾದ್ದು ಇಷ್ಟೇ, ಸಣ್ಣ ವೇತನದಿಂದ ತೊಡಗಿ ಲಕ್ಷ ಸಂಪಾದನೆಯೊಂದಿಗೆ ನಿವೃತ್ತರಾಗುವ ಅನೇಕರು ಇರಬಹುದು. ಆದರೆ ಸಂಸ್ಥೆಯೊಂದು ಅದರಲ್ಲೂ ಕ್ಯಾಂಪ್ಕೋ ಒಬ್ಬ ನೌಕರನನ್ನು ಹೇಗೆ ಬೆಳೆಸಿದೆ ಎಂಬುದು ಗಮನಿಸಬೇಕಾದ್ದು. ಎಸ್ ಎಸ್ ಎಲ್ ಸಿ ಆಗಿರುವ ಒಬ್ಬ ವ್ಯಕ್ತಿಯ ಸಾಮರ್ಥ್ಯವನ್ನು ಗುರುತಿಸಿ ಬೆಳೆಸಿದೆ. ಇನ್ನೊಂದು ಸತತ ಪರಿಶ್ರಮ , ವಿಶ್ವಾಸಾರ್ಹತೆ ಹೇಗೆ ವ್ಯಕ್ತಿಯನ್ನು ಎತ್ತರಕ್ಕೆ ಬೆಳೆಸುತ್ತದೆ ಎನ್ನುವುದಕ್ಕೆ ಇಂದೊಂದು ಮಾದರಿ.

ಇಂತಹ ನೌಕರ ಸೇವಾ ನಿವೃತ್ತಿ ಸಂದರ್ಭ ಸಂಸ್ಥೆಯ ಇತರ ನೌಕರರು ಅಭಿನಂದನೆ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮ ನಡೆಸಿದರು. ವಿಶೇಷವಾಗಿ ಈ ಕಾರ್ಯಕ್ರಮ ನಡೆಯಿತು.

 

 

ಕ್ಯಾಂಪ್ಕೋದಲ್ಲಿ ನೌಕರರು ಹಾಗೂ ಆಡಳಿತ ಮಂಡಳಿ ನಡುವೆ ಉತ್ತಮ ಸೌಹಾರ್ದ ಸಂಬಂಧವಿದೆ. ಅದರ ಜೊತೆಗೆ ನೌಕರರ ಪ್ರಾಮಾಣಿಕತೆ, ದಕ್ಷತೆಗೆ ಯಾವತ್ತೂ ಗೌರವ ಸಿಗುತ್ತದೆ. ಮುಂದೆಯೂ ಸಿಗುತ್ತದೆ. ಸಂಸ್ಥೆಗಳನ್ನು ವ್ಯಕ್ತಿಗಳನ್ನು ಬೆಳೆಸುವ ಕೆಲಸ ಮಾಡುತ್ತದೆ.

 

 

 

ಇಂದು ಚಂದ್ರಶೇಖರ್ ಹೇಳುತ್ತಾರೆ,” ನನ್ನನ್ನು ಕ್ಯಾಂಪ್ಕೋ ಬೆಳೆಸಿದೆ. ಎಲ್ಲೋ ಇದ್ದವನನ್ನು ಇಲ್ಲಿಗೆ ತಂದು ನಿಲ್ಲಿಸಿದೆ. ಇವತ್ತು ಸಂತೃಪ್ತ ಜೀವನ ಸಾಗಿಸುತ್ತಿದ್ದೇನೆ. 3 ಮಕ್ಕಳೊಂದಿಗೆ ಸುಖೀ ಜೀವನ. ಮಕ್ಕಳೂ ವಿದ್ಯಾವಂತರಾಗಿದ್ದಾರೆ. ಇದಕ್ಕಾಗಿ ಕ್ಯಾಂಪ್ಕೋ ಸಂಸ್ಥಾಪಕ ವಾರಣಾಸಿ ಸುಬ್ರಾಯ ಭಟ್ ಹಾಗೂ ಇಂದಿನ ಎಲ್ಲಾ ಆಡಳಿತ ಮಂಡಳಿಯನ್ನು ನೆನಪಿಸಿಕೊಳ್ಳುತ್ತೇನೆ” ಎನ್ನುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

4 hours ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

11 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

11 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

18 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

20 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

1 day ago