Advertisement
The Rural Mirror ಕಾಳಜಿ

ಕಟ್ಟದ ಈ ಸೇತುವೆ ಅಭಿವೃದ್ಧಿಗೆ “ಮೈಲಿಗೆ”ಯೇ…?, ಹಾಗಂತ ಕೇಳ್ತಾರೆ ಜನ…!

Share

ಕೊಲ್ಲಮೊಗ್ರ: ಕಳೆದ 3 ವರ್ಷಗಳಿಂದ ಮೋರಿಯೊಂದು ಕುಸಿಯಲು ಸಿದ್ಧವಾಗಿದೆ. ಇಂದೋ ನಾಳೆಯೋ ಬೀಳುವ ಹಂತದಲ್ಲಿದೆ. ಹಾಗಿದ್ದರೂ ಅಧಿಕಾರಿಗಳು, ಜನಪ್ರತಿನಿಧಿಗಳು ಎಚ್ಚೆತ್ತಿಲ್ಲ ಅಂತ ಜನ ಬೊಬ್ಬೆ ಹೊಡೆಯುತ್ತಾರೆ. ಯಾರಾದ್ರೂ ಸ್ವಲ್ಪ ಈ ಕಡೆ ನೋಡ್ತೀರಾ ? ಹಾಗಿದ್ರೆ ಇಲ್ಲಿದೆ ನೋಡಿ ಸ್ಟೋರಿ….

ಶಿಥಿಲಗೊಂಡ ಸೇತುವೆ

ಕೊಲ್ಲಮೊಗ್ರು ಗ್ರಾಮದ  ಕೊಲ್ಲಮೊಗ್ರದಿಂದ ಕಟ್ಟ – ಕರಂಗಲ್ಲು – ಮಡಪ್ಪಾಡಿಗೆ ನೇರ ಸಂಪರ್ಕ ಇರುವ ಜಿಪಂ  ರಸ್ತೆ ಇದೆ. ಇಲ್ಲಿ  ಕಟ್ಟ – ಮೈಲ ಎಂಬಲ್ಲಿ ಒಂದು ಮೋರಿ ಇದೆ. ಕಳೆದ ಮೂರು ವರ್ಷದ ಹಿಂದೆಯೇ ಮೋರಿಯೊಂದು ಇಂದೋ ನಾಳೆಯೋ ಅನ್ನೋ ಸ್ಥಿತಿಯಲ್ಲಿದೆ.  ಹೀಗಾಗಿ ಈ ಮೋರಿ ಕುಸಿತವಾದರೆ ಸಂಪರ್ಕ ಕಡಿತವಾಗುವ ಭೀತಿ ಇದೆ. ಈ ಸಮಸ್ಯೆ ಬಗ್ಗೆ ಅನೇಕ ಬಾರಿ ಅಧಿಕಾರಿಗಳು ಬಂದು ಪರೀಕ್ಷಿಸಿ ಸದ್ಯದಲ್ಲೇ  ನಿರ್ಮಾಣ ಮಾಡಿ ಕೊಡುವ ಭರವಸೆ ನೀಡಿದ್ದರೂ ಮೂರು ಮಳೆಗಾಲ ಕಳೆದು ಇನ್ನೂ ಮೋರಿ ಮಾತ್ರಾ ಆಗಿಲ್ಲ.

ಕುಸಿತಗೊಂಡ ಸೇತವೆ

ಈ ವರ್ಷದ ಮಳೆಗಾಲದಲ್ಲಿ ಇಲ್ಲಿ ವಾಹನ ಸಂಚಾರ ಕಷ್ಟವಾಗಲಿದೆ, ಅದೂ ಅಲ್ಲದೆ ನಡೆದು ಹೋಗಲೂ ಕಷ್ಟವಾಗುವ ಸಂಭವ ಇದೆ ಎಂದು ಸ್ಥಳೀಯರು ಅಳಲು ತೋಡುತ್ತಾರೆ.  ಎಲ್ಲಾ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿದ್ದ ತಕ್ಷಣವೇ ಕ್ರಮವಾಗಬೇಕು, ಕನಿಷ್ಠ ದುರಸ್ತಿಯಾದರೂ ಆಗಬೇಕು ಎಂದು ಒತ್ತಾಯಿಸಿದ್ದಾರೆ.

ಈ ಬಗ್ಗೆ ಸುಳ್ಯನ್ಯೂಸ್.ಕಾಂ ಜೊತೆ ಮಾತನಾಡಿದ ಸ್ಥಳೀಯರಾದ ಮಿಥುನ್ ಕುಮಾರ್ ಸೋನ, ” ಕಳೆದ 3 ವರ್ಷಗಳಿಂದ ಈ ಮೋರಿ ದುರಸ್ತಿಗೆ ಕ್ರಮ ಆಗಬೇಕು ಎಂದು ಒತ್ತಾಯಿಸಿದರೂ ಯಾವುದೇ ಕ್ರಮ ಆಗಿಲ್ಲ, ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು” ಎಂದು ಒತ್ತಾಯಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

49 seconds ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

9 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

13 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago