Advertisement
The Rural Mirror ಕಾಳಜಿ

ಕಟ್ಟದ ಈ ಸೇತುವೆ ಅಭಿವೃದ್ಧಿಗೆ “ಮೈಲಿಗೆ”ಯೇ…?, ಹಾಗಂತ ಕೇಳ್ತಾರೆ ಜನ…!

Share

ಕೊಲ್ಲಮೊಗ್ರ: ಕಳೆದ 3 ವರ್ಷಗಳಿಂದ ಮೋರಿಯೊಂದು ಕುಸಿಯಲು ಸಿದ್ಧವಾಗಿದೆ. ಇಂದೋ ನಾಳೆಯೋ ಬೀಳುವ ಹಂತದಲ್ಲಿದೆ. ಹಾಗಿದ್ದರೂ ಅಧಿಕಾರಿಗಳು, ಜನಪ್ರತಿನಿಧಿಗಳು ಎಚ್ಚೆತ್ತಿಲ್ಲ ಅಂತ ಜನ ಬೊಬ್ಬೆ ಹೊಡೆಯುತ್ತಾರೆ. ಯಾರಾದ್ರೂ ಸ್ವಲ್ಪ ಈ ಕಡೆ ನೋಡ್ತೀರಾ ? ಹಾಗಿದ್ರೆ ಇಲ್ಲಿದೆ ನೋಡಿ ಸ್ಟೋರಿ….

ಶಿಥಿಲಗೊಂಡ ಸೇತುವೆ

ಕೊಲ್ಲಮೊಗ್ರು ಗ್ರಾಮದ  ಕೊಲ್ಲಮೊಗ್ರದಿಂದ ಕಟ್ಟ – ಕರಂಗಲ್ಲು – ಮಡಪ್ಪಾಡಿಗೆ ನೇರ ಸಂಪರ್ಕ ಇರುವ ಜಿಪಂ  ರಸ್ತೆ ಇದೆ. ಇಲ್ಲಿ  ಕಟ್ಟ – ಮೈಲ ಎಂಬಲ್ಲಿ ಒಂದು ಮೋರಿ ಇದೆ. ಕಳೆದ ಮೂರು ವರ್ಷದ ಹಿಂದೆಯೇ ಮೋರಿಯೊಂದು ಇಂದೋ ನಾಳೆಯೋ ಅನ್ನೋ ಸ್ಥಿತಿಯಲ್ಲಿದೆ.  ಹೀಗಾಗಿ ಈ ಮೋರಿ ಕುಸಿತವಾದರೆ ಸಂಪರ್ಕ ಕಡಿತವಾಗುವ ಭೀತಿ ಇದೆ. ಈ ಸಮಸ್ಯೆ ಬಗ್ಗೆ ಅನೇಕ ಬಾರಿ ಅಧಿಕಾರಿಗಳು ಬಂದು ಪರೀಕ್ಷಿಸಿ ಸದ್ಯದಲ್ಲೇ  ನಿರ್ಮಾಣ ಮಾಡಿ ಕೊಡುವ ಭರವಸೆ ನೀಡಿದ್ದರೂ ಮೂರು ಮಳೆಗಾಲ ಕಳೆದು ಇನ್ನೂ ಮೋರಿ ಮಾತ್ರಾ ಆಗಿಲ್ಲ.

ಕುಸಿತಗೊಂಡ ಸೇತವೆ

ಈ ವರ್ಷದ ಮಳೆಗಾಲದಲ್ಲಿ ಇಲ್ಲಿ ವಾಹನ ಸಂಚಾರ ಕಷ್ಟವಾಗಲಿದೆ, ಅದೂ ಅಲ್ಲದೆ ನಡೆದು ಹೋಗಲೂ ಕಷ್ಟವಾಗುವ ಸಂಭವ ಇದೆ ಎಂದು ಸ್ಥಳೀಯರು ಅಳಲು ತೋಡುತ್ತಾರೆ.  ಎಲ್ಲಾ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿದ್ದ ತಕ್ಷಣವೇ ಕ್ರಮವಾಗಬೇಕು, ಕನಿಷ್ಠ ದುರಸ್ತಿಯಾದರೂ ಆಗಬೇಕು ಎಂದು ಒತ್ತಾಯಿಸಿದ್ದಾರೆ.

ಈ ಬಗ್ಗೆ ಸುಳ್ಯನ್ಯೂಸ್.ಕಾಂ ಜೊತೆ ಮಾತನಾಡಿದ ಸ್ಥಳೀಯರಾದ ಮಿಥುನ್ ಕುಮಾರ್ ಸೋನ, ” ಕಳೆದ 3 ವರ್ಷಗಳಿಂದ ಈ ಮೋರಿ ದುರಸ್ತಿಗೆ ಕ್ರಮ ಆಗಬೇಕು ಎಂದು ಒತ್ತಾಯಿಸಿದರೂ ಯಾವುದೇ ಕ್ರಮ ಆಗಿಲ್ಲ, ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು” ಎಂದು ಒತ್ತಾಯಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ |13-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಜೋರು ಮಳೆ ಇಲ್ಲ

ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ…

7 hours ago

ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?

ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…

14 hours ago

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…

1 day ago

ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?

ಎಲ್‌ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…

1 day ago

ಮುಂಗಾರು ಇದ್ದಕ್ಕಿದ್ದಂತೆ ದುರ್ಬಲವಾಗಿದ್ದೇಕೆ..? ಇಲ್ಲಿದೆ ವೈಜ್ಞಾನಿಕ ಕಾರಣ

ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್‌ನ ಪ್ರಬಲ ಚಂಡಮಾರುತ…

1 day ago

ಮತ್ತೆ ಹೆಚ್ಚಿದ ದೇಶದ ಮಳೆ ಕೊರತೆ – ಜುಲೈ ಆರಂಭದ ಚೇತರಿಕೆ ಕುಂಠಿತ, ಮುಂಗಾರು ಮತ್ತೆ ದುರ್ಬಲ

ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…

1 day ago