Advertisement
The Rural Mirror ಕಾಳಜಿ

ಕಟ್ಟದ ಈ ಸೇತುವೆ ಅಭಿವೃದ್ಧಿಗೆ “ಮೈಲಿಗೆ”ಯೇ…?, ಹಾಗಂತ ಕೇಳ್ತಾರೆ ಜನ…!

Share

ಕೊಲ್ಲಮೊಗ್ರ: ಕಳೆದ 3 ವರ್ಷಗಳಿಂದ ಮೋರಿಯೊಂದು ಕುಸಿಯಲು ಸಿದ್ಧವಾಗಿದೆ. ಇಂದೋ ನಾಳೆಯೋ ಬೀಳುವ ಹಂತದಲ್ಲಿದೆ. ಹಾಗಿದ್ದರೂ ಅಧಿಕಾರಿಗಳು, ಜನಪ್ರತಿನಿಧಿಗಳು ಎಚ್ಚೆತ್ತಿಲ್ಲ ಅಂತ ಜನ ಬೊಬ್ಬೆ ಹೊಡೆಯುತ್ತಾರೆ. ಯಾರಾದ್ರೂ ಸ್ವಲ್ಪ ಈ ಕಡೆ ನೋಡ್ತೀರಾ ? ಹಾಗಿದ್ರೆ ಇಲ್ಲಿದೆ ನೋಡಿ ಸ್ಟೋರಿ….

ಶಿಥಿಲಗೊಂಡ ಸೇತುವೆ

ಕೊಲ್ಲಮೊಗ್ರು ಗ್ರಾಮದ  ಕೊಲ್ಲಮೊಗ್ರದಿಂದ ಕಟ್ಟ – ಕರಂಗಲ್ಲು – ಮಡಪ್ಪಾಡಿಗೆ ನೇರ ಸಂಪರ್ಕ ಇರುವ ಜಿಪಂ  ರಸ್ತೆ ಇದೆ. ಇಲ್ಲಿ  ಕಟ್ಟ – ಮೈಲ ಎಂಬಲ್ಲಿ ಒಂದು ಮೋರಿ ಇದೆ. ಕಳೆದ ಮೂರು ವರ್ಷದ ಹಿಂದೆಯೇ ಮೋರಿಯೊಂದು ಇಂದೋ ನಾಳೆಯೋ ಅನ್ನೋ ಸ್ಥಿತಿಯಲ್ಲಿದೆ.  ಹೀಗಾಗಿ ಈ ಮೋರಿ ಕುಸಿತವಾದರೆ ಸಂಪರ್ಕ ಕಡಿತವಾಗುವ ಭೀತಿ ಇದೆ. ಈ ಸಮಸ್ಯೆ ಬಗ್ಗೆ ಅನೇಕ ಬಾರಿ ಅಧಿಕಾರಿಗಳು ಬಂದು ಪರೀಕ್ಷಿಸಿ ಸದ್ಯದಲ್ಲೇ  ನಿರ್ಮಾಣ ಮಾಡಿ ಕೊಡುವ ಭರವಸೆ ನೀಡಿದ್ದರೂ ಮೂರು ಮಳೆಗಾಲ ಕಳೆದು ಇನ್ನೂ ಮೋರಿ ಮಾತ್ರಾ ಆಗಿಲ್ಲ.

ಕುಸಿತಗೊಂಡ ಸೇತವೆ

ಈ ವರ್ಷದ ಮಳೆಗಾಲದಲ್ಲಿ ಇಲ್ಲಿ ವಾಹನ ಸಂಚಾರ ಕಷ್ಟವಾಗಲಿದೆ, ಅದೂ ಅಲ್ಲದೆ ನಡೆದು ಹೋಗಲೂ ಕಷ್ಟವಾಗುವ ಸಂಭವ ಇದೆ ಎಂದು ಸ್ಥಳೀಯರು ಅಳಲು ತೋಡುತ್ತಾರೆ.  ಎಲ್ಲಾ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿದ್ದ ತಕ್ಷಣವೇ ಕ್ರಮವಾಗಬೇಕು, ಕನಿಷ್ಠ ದುರಸ್ತಿಯಾದರೂ ಆಗಬೇಕು ಎಂದು ಒತ್ತಾಯಿಸಿದ್ದಾರೆ.

ಈ ಬಗ್ಗೆ ಸುಳ್ಯನ್ಯೂಸ್.ಕಾಂ ಜೊತೆ ಮಾತನಾಡಿದ ಸ್ಥಳೀಯರಾದ ಮಿಥುನ್ ಕುಮಾರ್ ಸೋನ, ” ಕಳೆದ 3 ವರ್ಷಗಳಿಂದ ಈ ಮೋರಿ ದುರಸ್ತಿಗೆ ಕ್ರಮ ಆಗಬೇಕು ಎಂದು ಒತ್ತಾಯಿಸಿದರೂ ಯಾವುದೇ ಕ್ರಮ ಆಗಿಲ್ಲ, ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು” ಎಂದು ಒತ್ತಾಯಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

2 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

2 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

3 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

5 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

16 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

16 hours ago