ಕಡಬ: ಕಡಬ ತಾಲೂಕಿನ ಕೋಡಿಂಬಾಳದ ಕೊಠಾರಿ ನಿವಾಸಿ ಸ್ವಪ್ನಾ ಹಾಗೂ ಅವರ ಮೂರು ವರ್ಷದ ಮಗುವಿನ ಮೇಲೆ ನಡೆದ ಆ್ಯಸಿಡ್ ದಾಳಿಗೆ ಸಂಬಂಧಿಸಿದಂತೆ ಸಂತ್ರಸ್ತರಿಗೆ ಮಾನವೀಯತೆಯ ದೃಷ್ಟಿಯಿಂದ ನ್ಯಾಯ ದೊರಕಿಸಿ ಕೊಡುವಂತೆ ಮತ್ತು ಆರೋಪಿ ಪರ ವಕಾಲತ್ತು ವಹಿಸಬಾರದೆಂದು ನೀತಿ ತಂಡದಿಂದ ಪುತ್ತೂರು ಬಾರ್ ಕೌನ್ಸಿಲ್ ಗೆ ಮನವಿಯನ್ನು ನೀಡಲಾಯಿತು.
ಪುತ್ತೂರು ತಾಲೂಕು ವಕೀಲರ ಸಂಘದ ಅಧ್ಯಕ್ಷರಾದ ಮನೋಹರ್ ಕೆ.ವಿ ಅವರಿಗೆ ದಕ್ಷಿಣ ಕನ್ನಡ ನೀತಿ ತಂಡದ ಸಂಘಟನಾ ಕಾರ್ಯದರ್ಶಿ ಜೋಸ್ ತೋಮಸ್ ರವರು ಮನವಿಯನ್ನು ನೀಡಿ ಸಂತ್ರಸ್ತ ಮಹಿಳೆ ಹಾಗೂ ಮಗುವಿಗೆ ನ್ಯಾಯ ಒದಗಿಸಲು ಪುತ್ತೂರು ವಕೀಲರ ಸಂಘವು ಬೆಂಬಲ ನೀಡಬೇಕೆಂದು ವಿನಂತಿ ಮಾಡಿದರು. ಇದಕ್ಕೆ ಪೂರಕವಾಗಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷರಾದ ಮನೋಹರ್ ಕೆ.ವಿ ಹಾಗೂ ಪದಾಧಿಕಾರಿಗಳು ನ್ಯಾಯಯುತವಾಗಿ ಸ್ಪಂದಿಸುವ ಭರವಸೆಯನ್ನು ನೀಡಿದರು. ಪುತ್ತೂರು ವಕೀಲರ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…