ಕಡಬ: ಕಡಬ ತಾಲೂಕಿನ ಕೋಡಿಂಬಾಳದ ಕೊಠಾರಿ ನಿವಾಸಿ ಸ್ವಪ್ನಾ ಹಾಗೂ ಅವರ ಮೂರು ವರ್ಷದ ಮಗುವಿನ ಮೇಲೆ ನಡೆದ ಆ್ಯಸಿಡ್ ದಾಳಿಗೆ ಸಂಬಂಧಿಸಿದಂತೆ ಸಂತ್ರಸ್ತರಿಗೆ ಮಾನವೀಯತೆಯ ದೃಷ್ಟಿಯಿಂದ ನ್ಯಾಯ ದೊರಕಿಸಿ ಕೊಡುವಂತೆ ಮತ್ತು ಆರೋಪಿ ಪರ ವಕಾಲತ್ತು ವಹಿಸಬಾರದೆಂದು ನೀತಿ ತಂಡದಿಂದ ಪುತ್ತೂರು ಬಾರ್ ಕೌನ್ಸಿಲ್ ಗೆ ಮನವಿಯನ್ನು ನೀಡಲಾಯಿತು.
ಪುತ್ತೂರು ತಾಲೂಕು ವಕೀಲರ ಸಂಘದ ಅಧ್ಯಕ್ಷರಾದ ಮನೋಹರ್ ಕೆ.ವಿ ಅವರಿಗೆ ದಕ್ಷಿಣ ಕನ್ನಡ ನೀತಿ ತಂಡದ ಸಂಘಟನಾ ಕಾರ್ಯದರ್ಶಿ ಜೋಸ್ ತೋಮಸ್ ರವರು ಮನವಿಯನ್ನು ನೀಡಿ ಸಂತ್ರಸ್ತ ಮಹಿಳೆ ಹಾಗೂ ಮಗುವಿಗೆ ನ್ಯಾಯ ಒದಗಿಸಲು ಪುತ್ತೂರು ವಕೀಲರ ಸಂಘವು ಬೆಂಬಲ ನೀಡಬೇಕೆಂದು ವಿನಂತಿ ಮಾಡಿದರು. ಇದಕ್ಕೆ ಪೂರಕವಾಗಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷರಾದ ಮನೋಹರ್ ಕೆ.ವಿ ಹಾಗೂ ಪದಾಧಿಕಾರಿಗಳು ನ್ಯಾಯಯುತವಾಗಿ ಸ್ಪಂದಿಸುವ ಭರವಸೆಯನ್ನು ನೀಡಿದರು. ಪುತ್ತೂರು ವಕೀಲರ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…